ರಾಜ್ಯ ಸಾರಿಗೆ ನೌಕರರ ವೇತನ ಹೆಚ್ಚಿಸಿ ಸರ್ಕಾರ ಆದೇಶ, ಎಷ್ಟು ಹೆಚ್ಚಳ? ಯಾವಾಗಿನಿಂದ ಜಾರಿಗೆ?

ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ನೌಕರರಿಗೆ ಸಕಾಲದಲ್ಲಿವೇತನ ಪರಿಷ್ಕರಣೆಯಾಗುತ್ತಲೇ ಇಲ್ಲ. ಅಲ್ಲದೆ, 38 ತಿಂಗಳ ವೇತನ ಹಿಂಬಾಕಿಯೂ ಸಿಕ್ಕಿಲ್ಲ ಎಂದು ಸಿಬ್ಬಂದಿ ಪ್ರತಿಭಟನೆ ಎಚ್ಚರಿಕೆ ನೀಡಿದ್ದು, ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಹೆಚ್ಚಿಸಿ ಆದೇಶ ಹೊರಡಿಸಿದೆ. ಹಾಗಾದ್ರೆ, ಎಷ್ಟು ಹೆಚ್ಚಳವಾಗಿದೆ? ಯಾವಾಗಿನಿಂದ ಅನ್ವಯ ಎನ್ನುವ ಡಿಟೇಲ್ಸ್ ಇಲ್ಲಿದೆ.

ರಾಜ್ಯ ಸಾರಿಗೆ ನೌಕರರ ವೇತನ ಹೆಚ್ಚಿಸಿ ಸರ್ಕಾರ ಆದೇಶ, ಎಷ್ಟು ಹೆಚ್ಚಳ? ಯಾವಾಗಿನಿಂದ ಜಾರಿಗೆ?
Karnataka Transport Department
Edited By:

Updated on: Jul 02, 2026 | 5:50 PM

ಮುಖ್ಯಾಂಶಗಳು

  • ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಗಳ ನೌಕರರಿಗೆ ಗುಡ್ ನ್ಯೂಸ್
  • ಕೊನೆಗೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ
  • ಶೇ.12.5% ರಷ್ಟು ಹೆಚ್ಚಿಸಿದ್ದು, 2025ರ ಮಾರ್ಚ್ 31ರ ಮೂಲ ವೇತನದ ಮೇಲೆ ಅನ್ವಯ

ಬೆಂಗಳೂರು,ಜುಲೈ 02): ರಾಜ್ಯ ಸರ್ಕಾರ (Karnataka Government) ಸಾರಿಗೆ ನೌಕರರಿಗೆ (Transport Employees) ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ತಿಂಗಳಿನಿಂದಲೇ KSRTC, BMTC, NWKRTC, KKRTC ಸಿಬ್ಬಂದಿಯ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದ್ದು, 2025ರ ಮಾರ್ಚ್ 31ರ ಮೂಲ ವೇತನದ ಮೇಲೆ ಅನ್ವಯವಾಗಲಿದೆ. ಇನ್ನು 2026ರ ಜುಲೈ 1ರ ವೇತನದಲ್ಲಿ ಜಾರಿಗೆ ಬರುವಂತೆ ಆದೇಶಿಸಿದೆ. ಇದು 1.05 ಲಕ್ಷ ಸಿಬ್ಬಂದಿಗೆ ಅನುಕೂಲವಾಗಲಿದ್ದು, ಇದರಿಂದ ಸರ್ಕಾರಕ್ಕೆ ತಿಂಗಳಿಗೆ ಹೆಚ್ಚುವರಿಯಾಗಿ 72.80 ಕೋಟಿ ರೂಪಾಯಿ ಹೊರೆಯಾಗಲಿದೆ.

1.05 ಲಕ್ಷ ನೌಕರರಿಗೆ ಪ್ರಯೋಜನ

ರಾಜ್ಯದ ಸಾರಿಗೆ ನಿಗಮಗಳಲ್ಲಿ ಒಟ್ಟು ಸುಮಾರು 1.05 ಲಕ್ಷ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ವೇತನ ಹೆಚ್ಚಳದಿಂದ ಅವರೆಲ್ಲರಿಗೂ ಪ್ರಯೋಜನವಾಗಲಿದೆ. ಚಾಲಕರು, ಕಾರ್ಯನಿರ್ವಾಹಕರು ಮತ್ತು ಆಡಳಿತಾಧಿಕಾರಿಗಳು ಸೇರಿದಂತೆ ಎಲ್ಲಾ ವಿಭಾಗದ ನೌಕರರು ಈ ವೇತನ ಪರಿಷ್ಕರಣೆಯ ವ್ಯಾಪ್ತಿಗೆ ಒಳಪಡುತ್ತಾರೆ.

ಇದನ್ನೂ ಓದಿ: ಹಿರಿಯ IAS ಅಧಿಕಾರಿಗಳ ವರ್ಗಾವಣೆ: ಹೊಸ ಪ್ರಜಾಸೇವೆ ಇಲಾಖೆಗೆ ಪ್ರಧಾನ ಕಾರ್ಯದರ್ಶಿ ನೇಮಕ

ಹಿಂಬಾಕಿ ಹಣದ ಮೊದಲ ಕಂತು ಬಿಡುಗಡೆ

ಈಗಾಗಲೇ ನೌಕರರಿಗೆ ಪಾವತಿಸಬೇಕಾಗಿದ್ದ ಹಳೆಯ ವೇತನದ ಹಿಂಬಾಕಿ ಮೊತ್ತದ ಮೊದಲ ಕಂತಿನ ಹಣವನ್ನು ಸರ್ಕಾರವು ಬಿಡುಗಡೆ ಮಾಡಿದೆ. ಉಳಿದ ಹಿಂಬಾಕಿ ಮೊತ್ತವನ್ನು ಮುಂದಿನ ಕೆಲವೇ ತಿಂಗಳುಗಳಲ್ಲಿ ಹಂತ ಹಂತವಾಗಿ ಪಾವತಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ ತಿಂಗಳ ವೇತನದಲ್ಲಿ ಪರಿಷ್ಕೃತ ವೇತನ ಜಾರಿಗೆ ಬರುವಂತೆ ಪಾವತಿಸಲು ಸರ್ಕಾರವು ಆದೇಶ ಹೊರಡಿಸಿದ್ದು, ಈ ತಿಂಗಳಿಂದ ನೌಕರರ ಖಾತೆಗಳಿಗೆ ಪರಿಷ್ಕೃತ ವೇತನ ಜಮೆಯಾಗಲಿದೆ.
State Government Gives Good News For Transport Employees | ರಾಜ್ಯ ಸರ್ಕಾರದಿಂದ ಗುಡ್​ನ್ಯೂಸ್
ಸಾರಿಗೆ ಕಾರ್ಮಿಕರು ಕಳೆದ ಹಲವು ತಿಂಗಳುಗಳಿಂದ ವೇತನ ಹೆಚ್ಚಳಕ್ಕಾಗಿ ಹೋರಾಟ ನಡೆಸುತ್ತಿದ್ದರು. ವಿವಿಧ ಸಾರಿಗೆ ಸಂಘಗಳು ಮತ್ತು ಒಕ್ಕೂಟಗಳು ಸರ್ಕಾರದ ಮೇಲೆ ಒತ್ತಡ ಹೇರಲು ಮುಷ್ಕರಗ ನಡೆಸಿದ್ದವು. ಅಂತಿಮವಾಗಿ ಸರ್ಕಾರವು ಅವರ ಬೇಡಿಕೆಗೆ ಮಣಿದು, ಈ ಐತಿಹಾಸಿಕ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ರಾಮಲಿಂಗಾರೆಡ್ಡಿ ಅವರು ಈ ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸಾರಿಕೆ ಸಚಿವರಾಗಿದ್ದಾಗ ನೌಕರರ ವೇತನ ಹೆಚ್ಚಳಕ್ಕೆ ಆದೇಶಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Thu, 2 July 26

Follow Us