AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Govt Holidays: 2026ನೇ ಸಾಲಿನ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ

Karnataka Govt Holidays: ಕರ್ನಾಟಕ ಸರ್ಕಾರ 2026ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಇಂದಿನ ಸಚಿವ ಸಂಪುಟದಲ್ಲಿ ಅನುಮೋದಿಸಲಾಗಿದ್ದು, ಈ ಪಟ್ಟಿಯಲ್ಲಿ ರಾಷ್ಟ್ರೀಯ ಮತ್ತು ಪ್ರಮುಖ ಹಬ್ಬಗಳು ಸೇರಿದಂತೆ ಒಟ್ಟು 20 ರಜೆಗಳಿವೆ. 2026ನ ಸಾಲಿನ ಸಂಪೂರ್ಣ ಸರ್ಕಾರಿ ರಜೆ ಪಟ್ಟಿ ಇಲ್ಲಿದೆ.

Karnataka Govt Holidays: 2026ನೇ ಸಾಲಿನ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ
ಸಾರ್ವತ್ರಿಕ ರಜಾ ಪಟ್ಟಿ
ಗಂಗಾಧರ​ ಬ. ಸಾಬೋಜಿ
|

Updated on:Nov 13, 2025 | 9:16 PM

Share

ಬೆಂಗಳೂರು, ನವೆಂಬರ್​ 13: ಕರ್ನಾಟಕ ಸರ್ಕಾರ 2026ನೇ ಸಾಲಿನ ಸರ್ಕಾರಿ ರಜಾ (Holidays) ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2026ನೇ ಸಾಲಿನ ಸಾರ್ವತ್ರಿಕ ರಜಾ ಪಟ್ಟಿಯನ್ನು ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಅನುಮೋದಿಸಲಾಗಿದ್ದು, ರಾಷ್ಟ್ರೀಯ ಮತ್ತು ನಾಡ ಹಬ್ಬಗಳು ಸೇರಿದಂತೆ ಒಟ್ಟು 20 ದಿನಗಳು ಸರ್ಕಾರಿ ರಜೆ ಇರಲಿದೆ. ಸಾರ್ವತ್ರಿಕ ರಜೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರ್ವತ್ರಿಕ ರಜಾ ಪಟ್ಟಿಗೆ ಒಪ್ಪಿಗೆ ಸೂಚಿಸಲಾಗಿದೆ. ಆ ಮೂಲಕ ಮುಂದಿನ ವರ್ಷ ಶಾಲೆಗಳಿಗೆ, ಸರ್ಕಾರಿ ಕಚೇರಿಗಳಿಗೆ, ಸಂಸ್ಥೆಗಳಿಗೆ ಈ ರಜೆಗಳು ಅನ್ವಯವಾಗಲಿವೆ.

2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳು

  • 15.01.2026-ಗುರುವಾರ-ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ
  • 26.01.2026-ಸೋಮವಾರ-ಗಣರಾಜ್ಯೋತ್ಸವ
  • 19.03.2026-ಗುರುವಾರ-ಯುಗಾದಿ ಹಬ್ಬ
  • 21.03.2026-ಶನಿವಾರ-ಖುತುಬ್-ಎ-ರಂಜಾನ್
  • 31.03.2026-ಮಂಗಳವಾರ-ಮಹಾವೀರ ಜಯಂತಿ
  • 03.04.2026-ಶುಕ್ರವಾರ-ಗುಡ್ ಫ್ರೈಡೇ
  • 14.04.2026-ಮಂಗಳವಾರ-ಡಾ. ಬಿ. ಆರ್. ಅಂಬೇಡ್ಕ‌ರ್ ಜಯಂತಿ
  • 20.04.2026-ಸೋಮವಾರ-ಬಸವ ಜಯಂತಿ, ಅಕ್ಷಯ ತೃತೀಯ
  • 01.05.2026-ಶುಕ್ರವಾರ-ಕಾರ್ಮಿಕ ದಿನಾಚರಣೆ
  • 28.05.2026-ಗುರುವಾರ-ಬಕ್ರೀದ್
  • 26.06.2026-ಶುಕ್ರವಾರ-ಮೊಹರಂ ಕಡೆ ದಿನ
  • 15.08.2026-ಶನಿವಾರ-ಸ್ವಾತಂತ್ರ್ಯ ದಿನಾಚರಣೆ
  • 26.08.2026-ಬುಧವಾರ-ಈದ್-ಮಿಲಾದ್
  • 14.09.2026-ಸೋಮವಾರ-ವರಸಿದ್ಧಿ ವಿನಾಯಕ ವ್ರತ
  • 02.10.2026-ಶುಕ್ರವಾರ-ಗಾಂಧಿ ಜಯಂತಿ
  • 20.10.2026-ಮಂಗಳವಾರ-ಮಹಾನವಮಿ, ಆಯುಧಪೂಜೆ
  • 21.10.2026-ಬುಧವಾರ-ವಿಜಯದಶಮಿ
  • 10.11.2026-ಮಂಗಳವಾರ-ಬಲಿಪಾಡ್ಯಮಿ, ದೀಪಾವಳಿ
  • 27.11.2026-ಶುಕ್ರವಾರ-ಕನಕದಾಸ ಜಯಂತಿ
  • 25.12.2026-ಶುಕ್ರವಾರ-ಕ್ರಿಸ್​ ಮಸ್​

ಭಾನುವಾರದಂದು ಬರುವ ಹಬ್ಬಗಳು

ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಮಹಾ ಶಿವರಾತ್ರಿ (15.02.2026), ಮಹರ್ಷಿ ವಾಲ್ಮೀಕಿ ಜಯಂತಿ (25.10.2026), ಕನ್ನಡ ರಾಜ್ಯೋತ್ಸವ (01.11.2026) ಹಾಗೂ ನರಕ ಚತುರ್ದಶಿ (08.11.2026) ಮತ್ತು ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆ (10.10.2026) ಈ ರಜೆ ಪಟ್ಟಿಯಲ್ಲಿ ನಮೂದಿಸಿರುವುದಿಲ್ಲ.

ಇದನ್ನೂ ಓದಿ: ಕಸ ಗುಡಿಸುವ ಯಂತ್ರಕ್ಕೆ ಕೋಟಿ ಕೋಟಿ ಬಾಡಿಗೆ: ರಾಜ್ಯ ಸರ್ಕಾರದಿಂದ ವಿವಾದಿತ ನಿರ್ಧಾರ

ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗದಿತ ದಿನಾಂಕದಂದು ಬರದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗದಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ ಮಂಜೂರು ಮಾಡಬಹುದು.

ದಿನಾಂಕ:03.09.2026 (ಗುರುವಾರ) ಕ್ರೈಲ್ ಮೂಹೂರ್ತ, ದಿನಾಂಕ:18.10.2026 (ಭಾನುವಾರ) ತುಲಾ ಸಂಕ್ರಮಣ ಹಾಗೂ ದಿನಾಂಕ:26.11.2026 (ಗುರುವಾರ) ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ಇದನ್ನೂ ಓದಿ: ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್​​ನಲ್ಲಿ ಗೆಲುವು, ತಮಿಳುನಾಡಿನ ಅರ್ಜಿ ವಜಾ

ಇನ್ನು ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಛೇರಿಗಳು ಮುಚ್ಚಲ್ಪಡುತ್ತವೆ. ಕಛೇರಿಯ ಜರೂರು ಕೆಲಸವನ್ನು ವಿಲೇವಾರಿ ಮಾಡುವ ಬಗ್ಗೆ ಇಲಾಖಾ ಮುಖ್ಯಸ್ಥರುಗಳು ಸೂಕ್ತ ವ್ಯವಸ್ಥೆ ಮಾಡತಕ್ಕದ್ದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:08 pm, Thu, 13 November 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?