AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸದಾಗಿ ವಾಹನ ಖರೀದಿ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಶಾಕ್​: ಸೆಸ್​ ಹೆಚ್ಚಳ

ಫೆಬ್ರುವರಿ 1 ರಿಂದ ಕರ್ನಾಟಕ ಸರ್ಕಾರವು ಹೊಸ ಕಾರು ಮತ್ತು ಬೈಕ್ ಖರೀದಿದಾರರಿಂದ ಹೆಚ್ಚುವರಿ ಸೆಸ್ ವಿಧಿಸಲು ನಿರ್ಧರಿಸಿದೆ. ಕಾರುಗಳಿಗೆ ₹1000 ಮತ್ತು ಬೈಕ್‌ಗಳಿಗೆ ₹500 ಹೆಚ್ಚುವರಿ ಸೆಸ್ ಪಾವತಿಸಬೇಕಾಗುತ್ತದೆ. ಈ ಹೆಚ್ಚುವರಿ ಸೆಸ್ ಮೋಟಾರು ಸಾರಿಗೆ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿಗಾಗಿ ಬಳಸಲಾಗುತ್ತದೆ. ಯೆಲ್ಲೋ ಬೋರ್ಡ್ ವಾಹನಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ.

ಹೊಸದಾಗಿ ವಾಹನ ಖರೀದಿ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಶಾಕ್​: ಸೆಸ್​ ಹೆಚ್ಚಳ
ಸಾಂದರ್ಭಿಕ ಚಿತ್ರ
Kiran Surya
| Updated By: ವಿವೇಕ ಬಿರಾದಾರ|

Updated on:Jan 29, 2025 | 9:09 AM

Share

ಬೆಂಗಳೂರು, ಜನವರಿ 29: ಫೆಬ್ರುವರಿ 1 ರಿಂದ ಹೊಸದಾಗಿ ಕಾರು ಮತ್ತು ಬೈಕ್ ಖರೀದಿ ಮಾಡುವವರಿಗೆ ಕರ್ನಾಟಕ ಸರ್ಕಾರ (Karnataka Govcernment) ಶಾಕ್ ನೀಡಲಿದೆ. ಕಾರು, ಬೈಕ್ ಖರೀದಿ ಮಾಡುವವರಿಂದ ಹೆಚ್ಚುವರಿ ಸೆಸ್  (Cess) ಸಂಗ್ರಹಕ್ಕೆ ಸಾರಿಗೆ ಇಲಾಖೆ ನಿರ್ಧರಿಸಿದ್ದು, ಅಧಿಕೃತ ಆದೇಶ ಹೊರಡಿಸಿದೆ. ಹೊಸ ಕಾರು ಖರೀದಿ ಮಾಡುವವರು ಒಂದು ಸಾವಿರ ರೂಪಾಯಿ, ಹೊಸದಾಗಿ ಬೈಕ್ ಖರೀದಿ ‌ಮಾಡುವವರು 500 ರೂಪಾಯಿಯನ್ನು ಹೆಚ್ಚುವರಿಯಾಗಿ ಸೆಸ್ ರೂಪದಲ್ಲಿ ಸಾರಿಗೆ ಇಲಾಖೆಗೆ ಪಾವತಿ ಮಾಡಬೇಕು.

ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ನಿಧಿಯ ಉದ್ದೇಶಕ್ಕಾಗಿ, ಸಾರಿಗೇತರ ವಾಹನಗಳ ನೋಂದಣಿ (ರಿಜಿಸ್ಟ್ರೇಷನ್) ಸಮಯದಲ್ಲಿ ಶುಲ್ಕ ದ್ವಿಚಕ್ರ ವಾಹನಗಳಿಗೆ 500 ರೂಪಾಯಿ, ಮೋಟಾರು ಕಾರುಗಳಿಗೆ 1 ಸಾವಿರ ರೂಪಾಯಿಗಳನ್ನು ಹೆಚ್ಚುವರಿಯಾಗಿ ‌ಸಂಗ್ರಹಿಸಲಾಗುತ್ತದೆ. ಯೆಲ್ಲೋ ಬೋರ್ಡ್ ವಾಹನಗಳನ್ನು ಖರೀದಿ ಮಾಡುವವರ ಬಳಿ ಸೆಸ್ ಸಂಗ್ರಹ ಮಾಡುವಂತಿಲ್ಲ ಎಂದು ರಾಜ್ಯ ಸಾರಿಗೆ ‌ಇಲಾಖೆ ತನ್ನ ‌ಅಧಿಕೃತ ಆದೇಶದಲ್ಲಿ ಉಲ್ಲೇಖಿಸಿದೆ.

ಸಾರ್ವಜನಿಕರಿಂದ ಆಕ್ರೋಶ

ಈಗಾಗಲೇ ಸಾರಿಗೆ ಇಲಾಖೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಹೊಸ ಕಾರು, ಬೈಕ್ ಖರೀದಿ ಮಾಡುವವರಿಂದ ಹೆಚ್ಚುವರಿ ಹಣ ವಸೂಲಿ ಮಾಡುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

ಚಾಲಕರ ಅಭಿವೃದ್ಧಿ ಮಾಡುತ್ತೇವೆ ಎಂದು ರಾಜ್ಯ ಸರ್ಕಾರ ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ರಿಜಿಸ್ಟ್ರೇಷನ್ ಚಾರ್ಜ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಲು ಹೊರಟಿದೆ. ಆದರೆ ಇದಕ್ಕೆ ಜನರು ಮಾತ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಫೆಬ್ರವರಿ 1 ರಿಂದ ಕಾರು ಖರೀದಿಸುವವರಿಗೆ ಶಾಕ್: ಬೆಲೆ ಹೆಚ್ಚಳ ಘೋಷಿಸಿದ ಮಾರುತಿ

ಹೊಸ ವರ್ಷದ ಆರಂಭದಲ್ಲಿಯೇ ಸಾರಿಗೆ ಇಲಾಖೆ ಬಸ್ ಟಿಕೆಟ್ ದರಗಳನ್ನು ಶೇಕಡಾ 15ರಷ್ಟು ಏರಿಕೆ ಮಾಡಿದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ, ಎನ್​ಡಬ್ಲೂಕೆಆರ್​ಟಿಸಿ, ಕೆಕೆಆರ್​ಟಿಸಿ ಬಸ್​ಗಳ ಟಿಕೆಟ್ ದರ ಪರಿಷ್ಕರಣೆ ಮಾಡಿ ಜನರಿಗೆ ಶಾಕ್ ನೀಡಿದೆ. ಇದೀಗ ಕಾರು, ಬೈಕ್ ಖರೀದಿಸುವವರಿಗೂ ಶಾಕ್ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:31 am, Wed, 29 January 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ