ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1 ಲಕ್ಷಕ್ಕೆ ಹೆಚ್ಚಳ; ರಾಜ್ಯ ಸರ್ಕಾರ ಘೋಷಣೆ

ಕರ್ನಾಟಕ ಸಂಭ್ರಮದ ಪ್ರಯುಕ್ತ 50 ಮಹಿಳಾ ಸಾಧಕರು, 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. 2 ದಿನಗಳ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಶಸ್ತಿ ಘೋಷಿಸಿತ್ತು. ಇಂದು 100 ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1 ಲಕ್ಷಕ್ಕೆ ಹೆಚ್ಚಳ; ರಾಜ್ಯ ಸರ್ಕಾರ ಘೋಷಣೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ
Edited By:

Updated on: Nov 01, 2024 | 7:53 AM

ಬೆಂಗಳೂರು: ಕರ್ನಾಟಕ ಸಂಭ್ರಮ-50 ಸುವರ್ಣ ಮಹೋತ್ಸವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 50 ಮಹಿಳಾ ಸಾಧಕಿಯರಿಗೆ ಮತ್ತು 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿತ್ತು. ಈ ಸುವರ್ಣ ಮಹೋತ್ಸವ ಪ್ರಶಸ್ತಿಯ ಮೊತ್ತವನ್ನು ರಾಜ್ಯ ಸರ್ಕಾರ ಏರಿಕೆ ಮಾಡಿದೆ. 50 ಸಾವಿರ ರೂ. ಇದ್ದ ಮೊತ್ತವನ್ನು 1 ಲಕ್ಷ ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದೊಂದು ಐತಿಹಾಸಿಕ ಸಂದರ್ಭವಾಗಿರುವುದರಿಂದ ಸುವರ್ಣ ಮಹೋತ್ಸವ ಪ್ರಶಸ್ತಿಯ ಮೊತ್ತವನ್ನು 50 ಸಾವಿರದಿಂದ 1 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಗುರುವಾರ ಮಾಹಿತಿ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವದ ದಿನವಾದ ಇಂದು ಈ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. 100 ಸಾಧಕರು ಈ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.


ಇದಕ್ಕೆ ಕಾರಣಕರ್ತರಾದ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us