AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಚಿಕಿತ್ಸಾ ದರ ಪರಿಷ್ಕರಣೆ, ಸಚಿವರು ಕೊಟ್ರು ಕಾರಣ

ಕರ್ನಾಟಕ ಸರ್ಕಾರವು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ವೆಚ್ಚವನ್ನು ಪರಿಷ್ಕರಿಸಲು ನಿರ್ಧರಿಸಿದೆ. ಆರೋಗ್ಯ ಸಚಿವರ ಪ್ರಕಾರ, ಈ ಹೆಚ್ಚಳವು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿಲ್ಲ, ಬದಲಾಗಿ ಪ್ರತಿ ಎರಡು ಅಥವಾ ಮೂರು ವರ್ಷಗಳಿಗೊಮ್ಮೆ ನಡೆಯುವ ಸಾಮಾನ್ಯ ದರ ಪರಿಷ್ಕರಣೆಯಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಚಿಕಿತ್ಸಾ ದರ ಪರಿಷ್ಕರಣೆ, ಸಚಿವರು ಕೊಟ್ರು ಕಾರಣ
ಪ್ರಾಥಮಿಕ ಆರೊಗ್ಯ ಕೇಂದ್ರ
Vinay Kashappanavar
| Edited By: |

Updated on:Nov 20, 2024 | 10:59 AM

Share

ಬೆಂಗಳೂರು, ನವೆಂಬರ್​ 20: ಕರ್ನಾಟಕದಲ್ಲಿನ (Karnataka) ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ (Primary Health Centers) ಚಿಕಿತ್ಸಾ ವೆಚ್ಚ ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮೆಡಿಕಲ್ ಕಾಲೇಜ್ ವ್ಯಾಪ್ತಿಯ ಆಸ್ಪತ್ರೆಗಳಲ್ಲಿನ ಚಿಕಿತ್ಸಾ ದರ ಪರಿಷ್ಕರಣೆ ಮಾಡಿತ್ತು. ಇದರ ಬೆನ್ನಲ್ಲೆ ಇದೀಗ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ದರ ಪರಿಷ್ಕರಣೆ ಮಾಡಲು ಮುಂದಾಗಿದೆ.

ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಲು ದರ ಪರಿಷ್ಕರಣೆ ಮಾಡುತ್ತಿಲ್ಲ. ಪ್ರತೀ ಎರಡರಿಂದ ಮೂರು ವರ್ಷಕ್ಕೊಮ್ಮೆ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ, ಈ ವರ್ಷವೂ ದರ ಪರಿಷ್ಕರಣೆ ಮಾಡಲಾಗುತ್ತೆ ಎಂದು ಹೇಳಿದರು. ಪರಿಷ್ಕೃತ ಬಳಿಕ ಚಿಕಿತ್ಸಾ ದರ ಶೇ 15 ರಿಂದ 20 ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಿಗೆ ಹೋದ್ರೆ ಇಲ್ಲ ಔಷಧ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್

ಕರ್ನಾಟಕ ಸರ್ಕಾರ ಈವರೆಗೆ ಪರಿಷ್ಕರಿಸಿದ ದರಗಳು

  • ಕರ್ನಾಟಕ ಸರ್ಕಾರ ಕಳೆದ ವರ್ಷ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇ 20 ರಷ್ಟು ಏರಿಸಿತ್ತು. ಬಿಯರ್​ ಮೇಲಿನ ಹೆಚ್ಚುವರಿ ಸುಂಕ ಶೇ 10 ರಷ್ಟು ಏರಿಕೆ ಮಾಡಿತ್ತು.
  • ಹೊಸದಾಗಿ ಖರೀದಿ ಮಾಡಿ, ನೋಂದಣಿ ಮಾಡುವ ಮೋಟಾರು ವಾಹನಗಳ ಮೇಲೆ ಸರ್ಕಾರ ಶೇ 3 ರಷ್ಟು ಹೆಚ್ಚಳ ಮಾಡಿತ್ತು.
  • ಮುದ್ರಾಂಕ ಮತ್ತು ನೋಂದಣಿ ಶುಲ್ಕವನ್ನು ಶೇ 200 ರಿಂದ 500 ರೂ. ತನಕ ಏರಿಕೆ ಮಾಡಲಾಗಿತ್ತು.
  • ಬಿತ್ತನೆ ಬೀಜದ ಬೆಲೆಯಲ್ಲಿ ಶೇ 50 ರಿಂದ 60 ನಷ್ಟು ಏರಿಕೆಯಾಗಿದೆ.
  • ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿತ್ತು.
  • ನಂದಿನಿ ಹಾಲು ಪ್ರತಿ ಲೀಟರ್​ಗೆ 2 ರೂ. ಏರಿಕೆ ಮಾಡಲಾಗಿದೆ. ಅರ್ಧ ಲೀಟರ್ ಹಾಲಿನ ದರ 22 ರೂ.ನಿಂದ 24 ರೂ. ಆಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:27 am, Wed, 20 November 24

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ