AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಚಿಕಿತ್ಸಾ ದರ ಪರಿಷ್ಕರಣೆ, ಸಚಿವರು ಕೊಟ್ರು ಕಾರಣ

ಕರ್ನಾಟಕ ಸರ್ಕಾರವು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ವೆಚ್ಚವನ್ನು ಪರಿಷ್ಕರಿಸಲು ನಿರ್ಧರಿಸಿದೆ. ಆರೋಗ್ಯ ಸಚಿವರ ಪ್ರಕಾರ, ಈ ಹೆಚ್ಚಳವು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿಲ್ಲ, ಬದಲಾಗಿ ಪ್ರತಿ ಎರಡು ಅಥವಾ ಮೂರು ವರ್ಷಗಳಿಗೊಮ್ಮೆ ನಡೆಯುವ ಸಾಮಾನ್ಯ ದರ ಪರಿಷ್ಕರಣೆಯಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಚಿಕಿತ್ಸಾ ದರ ಪರಿಷ್ಕರಣೆ, ಸಚಿವರು ಕೊಟ್ರು ಕಾರಣ
ಪ್ರಾಥಮಿಕ ಆರೊಗ್ಯ ಕೇಂದ್ರ
Vinay Kashappanavar
| Edited By: |

Updated on:Nov 20, 2024 | 10:59 AM

Share

ಬೆಂಗಳೂರು, ನವೆಂಬರ್​ 20: ಕರ್ನಾಟಕದಲ್ಲಿನ (Karnataka) ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ (Primary Health Centers) ಚಿಕಿತ್ಸಾ ವೆಚ್ಚ ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮೆಡಿಕಲ್ ಕಾಲೇಜ್ ವ್ಯಾಪ್ತಿಯ ಆಸ್ಪತ್ರೆಗಳಲ್ಲಿನ ಚಿಕಿತ್ಸಾ ದರ ಪರಿಷ್ಕರಣೆ ಮಾಡಿತ್ತು. ಇದರ ಬೆನ್ನಲ್ಲೆ ಇದೀಗ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ದರ ಪರಿಷ್ಕರಣೆ ಮಾಡಲು ಮುಂದಾಗಿದೆ.

ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಲು ದರ ಪರಿಷ್ಕರಣೆ ಮಾಡುತ್ತಿಲ್ಲ. ಪ್ರತೀ ಎರಡರಿಂದ ಮೂರು ವರ್ಷಕ್ಕೊಮ್ಮೆ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ, ಈ ವರ್ಷವೂ ದರ ಪರಿಷ್ಕರಣೆ ಮಾಡಲಾಗುತ್ತೆ ಎಂದು ಹೇಳಿದರು. ಪರಿಷ್ಕೃತ ಬಳಿಕ ಚಿಕಿತ್ಸಾ ದರ ಶೇ 15 ರಿಂದ 20 ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಿಗೆ ಹೋದ್ರೆ ಇಲ್ಲ ಔಷಧ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್

ಕರ್ನಾಟಕ ಸರ್ಕಾರ ಈವರೆಗೆ ಪರಿಷ್ಕರಿಸಿದ ದರಗಳು

  • ಕರ್ನಾಟಕ ಸರ್ಕಾರ ಕಳೆದ ವರ್ಷ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇ 20 ರಷ್ಟು ಏರಿಸಿತ್ತು. ಬಿಯರ್​ ಮೇಲಿನ ಹೆಚ್ಚುವರಿ ಸುಂಕ ಶೇ 10 ರಷ್ಟು ಏರಿಕೆ ಮಾಡಿತ್ತು.
  • ಹೊಸದಾಗಿ ಖರೀದಿ ಮಾಡಿ, ನೋಂದಣಿ ಮಾಡುವ ಮೋಟಾರು ವಾಹನಗಳ ಮೇಲೆ ಸರ್ಕಾರ ಶೇ 3 ರಷ್ಟು ಹೆಚ್ಚಳ ಮಾಡಿತ್ತು.
  • ಮುದ್ರಾಂಕ ಮತ್ತು ನೋಂದಣಿ ಶುಲ್ಕವನ್ನು ಶೇ 200 ರಿಂದ 500 ರೂ. ತನಕ ಏರಿಕೆ ಮಾಡಲಾಗಿತ್ತು.
  • ಬಿತ್ತನೆ ಬೀಜದ ಬೆಲೆಯಲ್ಲಿ ಶೇ 50 ರಿಂದ 60 ನಷ್ಟು ಏರಿಕೆಯಾಗಿದೆ.
  • ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿತ್ತು.
  • ನಂದಿನಿ ಹಾಲು ಪ್ರತಿ ಲೀಟರ್​ಗೆ 2 ರೂ. ಏರಿಕೆ ಮಾಡಲಾಗಿದೆ. ಅರ್ಧ ಲೀಟರ್ ಹಾಲಿನ ದರ 22 ರೂ.ನಿಂದ 24 ರೂ. ಆಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:27 am, Wed, 20 November 24

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!