Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year Covid Guidelines: ಹೊಸ ವರ್ಷಾಚರಣೆಗೆ ಕೊರೊನಾ ರೂಲ್ಸ್​​; ಸೆಲೆಬ್ರೆಶನ್​ಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅವಕಾಶ, ಮಾಸ್ಕ್​, ಲಸಿಕೆ ಕಡ್ಡಾಯ

New Year Covid Guidelines for Bangalore: ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಂದಾಯ ಸಚಿವ ಆರ್​. ಅಶೋಕ ಹೇಳಿದ್ದಾರೆ.

New Year Covid Guidelines: ಹೊಸ ವರ್ಷಾಚರಣೆಗೆ ಕೊರೊನಾ ರೂಲ್ಸ್​​; ಸೆಲೆಬ್ರೆಶನ್​ಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅವಕಾಶ, ಮಾಸ್ಕ್​, ಲಸಿಕೆ ಕಡ್ಡಾಯ
ಆರ್ ಅಶೋಕ, ಸಚಿವರು
Follow us
TV9 Web
| Updated By: Digi Tech Desk

Updated on:Dec 26, 2022 | 3:44 PM

ಬೆಳಗಾವಿ: ಹೊಸ ವರ್ಷಾಚರಣೆಗೆ (New Year) ರಾತ್ರಿ 1 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ ಕಲ್ಪಿಸಲಾಗಿದೆ. ಬಾರ್ (Bar), ಪಬ್ (PUB)​ ಹಾಗೂ ಹೊಟೇಲ್​ಗಳಲ್ಲಿ (Hotel) ಗ್ರಾಹಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆದಿರಬೇಕು ಎಂದು ಕಂದಾಯ ಸಚಿವ ಆರ್​. ಅಶೋಕ (R Ashok) ಹೇಳಿದ್ದಾರೆ. ಎಷ್ಟು ಟೇಬಲ್ ಇದೆಯೋ ಅಷ್ಟು ಚೇರ್​ಗೆ ಮಾತ್ರ ಅನುಮತಿ ನೀಡಲಾಗಿದೆ. ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡುವವರು ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಎಲ್ಲ ನಗರಗಳಿಗೆ ಈ ನಿಯಮ ಅನ್ವಯವಾಗುತ್ತದೆ ಎಂದರು. ಸುವರ್ಣ ಸೌಧದ ಸಮಿತಿ ಕೊಠಡಿಯಲ್ಲಿ ಇಂದು (ಡಿ.26) ಸಚಿವರಾದ ಆರ್ ಅಶೋಕ್ ಮತ್ತು ಸುಧಾಕರ್ ನೇತೃತ್ವದಲ್ಲಿ ಆರೋಗ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು, ವರ್ಚುವಲ್ ಮೂಲಕ ತಜ್ಞರ ಸಭೆ ನಡೆಯಿತು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎಂಜಿ ರೋಡ್ ಸೇರಿದಂತೆ ಎಲ್ಲಾ ಕಡೆ ಈ ನಿಯಮ ಕಡ್ಡಾಯವಾಗಿದೆ. ಹೊಸ ವರ್ಷಾಚರಣೆ ಸಂಭ್ರಮಾಚರಣೆ ವೇಳೆ ಗರ್ಭಿಣಿಯರಿಗೆ ಪ್ರವೇಶವಿರುವುದಿಲ್ಲ ಎಂದು ತಿಳಿಸಿದರು.

ಸಲಹಾ ಸಮಿತಿ ನೀಡಿದ ಸೂಚನೆಗಳೇನು?

ಸಲಹಾ ಸಮಿತಿಯವರು ವಿದೇಶದಿಂದ ಬರುವವರನ್ನು ಮಾನಿಟರ್ ಮಾಡಲು ಸಲಹೆ ನೀಡಿದ್ದಾರೆ. ಹೀಗಾಗಿ 2 ಆಸ್ಪತ್ರೆಗಳಲ್ಲಿ ಮೀಸಲಿಡುತ್ತೇವೆ. ಬೆಂಗಳೂರು ಮತ್ತು ಮಂಗಳೂರಿನಲ್ಲಿ ಆಸ್ಪತ್ರೆಗಳನ್ನು ತೆರೆಯುತ್ತೇವೆ. ವಿದೇಶಿ ಪ್ರಯಾಣಿಕರನ್ನು ಬೆಂಗಳೂರು ಬೌರಿಂಗ್ ಹಾಗೂ ಮಂಗಳೂರಿನ ವೆನ್​ಲಾಕ್ ನಲ್ಲಿ ಐಸೋಲೇಶನ್​ ಮಾಡುತ್ತೇವೆ ಎಂದು ಹೇಳಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯ

ಇನ್ನೂ ಹೆಚ್ಚಾಗಿ ಜನ ಒಂದೇ ಕಡೆ ಸೇರುವ ಚಿತ್ರಮಂದಿರಗಳು, ಶಾಲಾ-ಕಾಲೇಜುಗಳಲ್ಲೂ ನಿಯಮ ಪಾಲನೆ ಕಡ್ಡಾಯಗೊಳಿಸಲಾಗಿದೆ. ಚಿತ್ರಮಂದಿರ​ಗಳಲ್ಲಿ ಮಾಸ್ಕ್ ಕಡ್ಡಾಯ. ಶಾಲಾ-ಕಾಲೇಜ್​ನ ತರಗತಿಗಳಗೆ ವಿದ್ಯಾರ್ಥಿಗಳು ಪ್ರವೇಶಕ್ಕೂ ಮುಂಚೆ ಸ್ಯಾನಿಟೈಸ್​ ಮಾಡುವುದು, ಮಾಸ್ಕ್​ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್​ ಧರಿಸುವುದು ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಚೀನಾದಿಂದ ಭಾರತಕ್ಕೆ ಬಂದ ವ್ಯಕ್ತಿಗೆ ಕೊರೊನಾ: ಬೆಂಗಳೂರಿಗೂ ಕಾಲಿಟ್ಟಿದ್ದ ವ್ಯಕ್ತಿ ಬಗ್ಗೆ ಸ್ಪಷ್ಟನೆ ಕೊಟ್ಟ ಬಿಬಿಎಂಪಿ ಕಮಿಷನರ್

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಮಿಟಿ

ಕಳೆದ ಬಾರಿಯಂತೆ ಈ ಬಾರಿಯು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಮಿಟಿ ರಚನೆ ಮಾಡಲಾಗಿದೆ. ಎಲ್ಲ ಆಸ್ಪತ್ರೆಗಳ ಪರಿಶೀಲನೆಗಾಗಿ ಕಮಿಟಿ ರಚನೆ ಮಾಡಿದ್ದೇವೆ. ಆಕ್ಸಿಜನ್, ಐಸಿಯು ಬೆಡ್ ಪರಿಶೀಲನೆ ಮಾಡಬೇಕು. ಮಾಸ್ಕ್ ಹಾಕದೆ ಇದ್ದರೇ ಸದ್ಯಕ್ಕೆ ದಂಡ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ದಂಡದ ಬಗ್ಗೆ ನಿರ್ಧಾರ ಮಾಡುತ್ತೇವೆ. ಸಿಎಂ ಬೊಮ್ಮಾಯಿ ದೆಹಲಿಗೆ ಹೋಗಿದ್ದಾರೆ. ಅವರು ಬಂದ ಬಳಿಕ ಚರ್ಚಿಸಿ ದಂಡದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಆರೋಗ್ಯ ಸಚಿವ ಕೆ. ಸುಧಾಕರ್​ ಹೇಳಿಕೆ

ಬೆಂಗಳೂರು, ಮಂಗಳೂರು ಏರ್​ಪೋರ್ಟ್​ನಲ್ಲಿ ಱಂಡಮ್ ಆಗಿ ಕೊರೊನಾ ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ. ಅಲ್ಲಿ ರೋಗ ಲಕ್ಷಣಗಳು ಕಂಡು ಬಂದರೇ ಕ್ವಾರಂಟೈನ್ ಮಾಡುತ್ತೇವೆ. ಪಾಸಿಟಿವ್ ಬಂದರೇ ಜಿನೋಮಿಕ್ ಸಿಕ್ವೆನ್ಸಿಂಗ್ ಕಳಿಸುತ್ತೇವೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್​ ಮಾತನಾಡಿದರು.

ಇದನ್ನೂ ಓದಿ: ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ, ಪಟಾಕಿ ಸಿಡಿಸುವುದಕ್ಕೂ ನಿಷೇಧ

ಬೂಸ್ಟರ್ ಡೋಸ್ ಕಡ್ಡಾಯವಲ್ಲ, ಅತ್ಯವಶ್ಯಕ

ಬೂಸ್ಟರ್ ಡೋಸ್ ಹೆಚ್ಚಿನ ಜನರಿಗೆ ಕೊಡಲು ಕ್ರಮ ಕೈಗೊಳ್ಳುತ್ತೇವೆ. ಸದ್ಯ 21 ಪರ್ಸೆಂಟ್ ಜನರಿಗೆ ಬೂಸ್ಟರ್ ಡೋಸ್ ನೀಡಲಾಗಿದೆ. 21 ಪರ್ಸೆಂಟ್ ಇರೋದನ್ನು 50 ಪರ್ಸೆಂಟ್​ಗೆ ಏರಿಸಬೇಕಿದೆ. ಸರ್ಕಾರದ ಜೊತೆ ಜನರು ಸಹಕಾರ ಕೊಡಬೇಕು. ಬೂಸ್ಟರ್ ಡೋಸ್ ಕಡ್ಡಾಯವಲ್ಲ, ಅತ್ಯವಶ್ಯಕವಾಗಿದೆ. ಕಡ್ಡಾಯ ಅಂತಾ ನಮ್ಮಲ್ಲಿ ಕಾನೂನು ಇಲ್ಲ. ಎರಡು ಡೋಸ್​ ಅನ್ನೂ ಕಡ್ಡಾಯ ಮಾಡಿರಲಿಲ್ಲ. ಹೀಗಿದ್ದರೂ ಜನರು ಸ್ವಯಂ ಪ್ರೇರಣೆಯಿಂದ ಪಡೆದಿದರು. ಹೀಗಾಗಿ ಬೂಸ್ಟರ್ ಡೋಸ್ ಸಹ ಪಡೆಯಬೇಕು ಎಂದು ಸುಧಾಕರ್​ ಮನವಿ ಮಾಡಿದರು.

ಬೆಂಗಳೂರಿಗೆ ಪ್ರತ್ಯೇಕ ರೂಲ್ಸಾ ಅಥವಾ ಯಥಾಸ್ಥಿತಿನಾ? 

ರಾಜ್ಯ ಸರ್ಕಾರ ಕೋವಿಡ್ ಸಭೆ ಇಂದು (ಡಿ. 26) ನಡೆದಿದ್ದು, ಸಭೆ ಬಳಿಕ ಬಿಬಿಎಂಪಿ ಚಫ್ ಕಮಿಷನರ್ ತುಷಾರ್ ಗಿರಿನಾಥ್ ಹೇಳಿಕೆ ನೀಡಿದ್ದು, ನಾವು ಸಭೆಯಲ್ಲಿ ಪಾಲಿಕೆ ತೆಗೆದುಕೊಂಡಿರುವ ಕ್ರಮದ ಬಗ್ಗೆ ವಿವರಿಸಿದ್ದೇವೆ. 1 ಲಕ್ಷ ಬೂಸ್ಟರ್ ಡೋಸ್ ನೀಡಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ. ನಗರದ 30 ಬೆಡ್​ಗಳಿರುವ 418 ಖಾಸಗಿ ಆಸ್ಪತ್ರೆ ಪಟ್ಟಿ ಮಾಡಿದ್ದೇವೆ. ಈ ಬಗ್ಗೆ ಈಗಾಗಲೇ ಫನಾ‌ ಸಂಘಟನೆ ಜೊತೆ ಮಾತನಾಡಿದ್ದೇವೆ. ನಾಳೆಯಿಂದ ಆಕ್ಸಿಜನ್ ಪ್ರಿಕಾಷನ್ ಬಗ್ಗೆ ಮಾಕ್ ಡ್ರಿಲ್ ಮಾಡಿ ಆಕ್ಸಿಜನ್ ರೆಡಿ ಇಟ್ಟುಕೊಳ್ಳುತ್ತೇವೆ. TAC ಕೊಟ್ಟ ಸಲಹೆ ಗಂಭೀರವಾಗಿ ತೆಗೆದುಕೊಂಡು ಆ ಪ್ರಕಾರ ಕೆಲಸ ಆರಂಭಿಸುತ್ತೇವೆ ಎಂದರು.

ಹೋಟೆಲ್​ಗಳಲ್ಲಿ ಸಿಸಿಕ್ಯಾಮೆರಾ ಕಡ್ಡಾಯ

2019ರ ನಂತರ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಡೆಯುತ್ತಿದೆ. ಹೀಗಾಗಿ ಬೆಂಗಳೂರಿನ ಎಲ್ಲ ಹೋಟೆಲ್​ನವರು ಹೊಸ ವರ್ಷಾಚರಣೆಯನ್ನು ಜೋರಾಗಿ ಆಚರಿಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಹೊಟೇಲ್​ಗಳಲ್ಲಿ ಸಿಸಿಕ್ಯಾಮರಾ ಅಳವಡಿಸಬೇಕು. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ಕ್ರಿಮಿನಲ್​ ಹಿನ್ನೆಲೆಯುಳ್ಳವರು ಬಂದಾಗ ಗಮನ ಹರಿಸುವಂತೆ ಹೊಟೇಲ್​ ಮಾಲಿಕರಿಗೆ ಸೂಚಿಸಿದ್ದೇನೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:01 pm, Mon, 26 December 22

ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ