AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆರಳು ಕೊಟ್ಟರೆ ಹಸ್ತ ನುಂಗಿದ್ರಾ? ಸಿಎಂ, ಸಚಿವರಿಗೆ ಮಾಹಿತಿ ನೀಡಿದೇ ವರ್ಗಾವಣೆ ಪಟ್ಟಿ ತಯಾರಿಸಿದ ಅಧಿಕಾರಿಗಳು

ಕಾರ್ಮಿಕ ಇಲಾಖೆಯ ವರ್ಗಾವಣೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಸಚಿವ ಸಂತೋಷ ಲಾಡ್​​​ ಅವರ ಶಿಫಾರಸನ್ನೇ, ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳು ಮೂಲೆಗೆ ಎಸೆದಿದ್ದಾರೆ. ಸಚಿವರಿಗೂ ಮಾಹಿತಿ ನೀಡದೇ ಅಧಿಕಾರಿಗಳು ತಮ್ಮದೇಯಾದ ವರ್ಗಾವಣೆ ಪಟ್ಟಿ ಸಿದ್ದಪಡಿಸಿರುವ ಆರೋಪ ಕೇಳಿಬಂದಿದೆ.

ಬೆರಳು ಕೊಟ್ಟರೆ ಹಸ್ತ ನುಂಗಿದ್ರಾ? ಸಿಎಂ, ಸಚಿವರಿಗೆ ಮಾಹಿತಿ ನೀಡಿದೇ ವರ್ಗಾವಣೆ ಪಟ್ಟಿ ತಯಾರಿಸಿದ ಅಧಿಕಾರಿಗಳು
ವಿಧಾನಸೌಧ
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on: Oct 29, 2023 | 1:49 PM

Share

ಬೆಂಗಳೂರು ಅ.29: ಅಭೂತ ಪೂರ್ವ ಬಹುಮತದೊಂದಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ (Congress)​ ಅಧಿಕಾರದ ಗದ್ದುಗೆ ಹಿಡಿದಿದೆ. ಸರ್ಕಾರ ರಚನೆಯಾಗುತ್ತಿದ್ದಂತೆಯೇ ಅಧಿಕಾರಿಗಳ ವರ್ಗಾವಣೆ (Transfer) ಜೋರಾಗಿಯೇ ನಡೆಯಿತು. ಸಚಿವರು ಆಯಕಟ್ಟಿನ ಜಾಗಗಳಿಗೆ ತಮಗೆ ಬೇಕಾದ ಅಧಿಕಾರಿಗಳನ್ನು ವರ್ಗ ಮಾಡಲು ಆರಂಭಿಸಿದರು. ಸಚಿವರ (Minister) ಈ ನಡೆಯನ್ನು ಕಂಡ ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಆರಂಭಿಸಿದವು. ವರ್ಗಾವಣೆಗೆ ಲಂಚ ಪಡೆಯಲಾಗುತ್ತಿದೆ ಎಂದು ಆರೋಪಿಸುತ್ತಿವೆ. ಇದರ ನಡುವೆಯೇ ಸಚಿವರ ಶಿಫಾರಸುಗಳನ್ನು ಕಸದ ಬುಟ್ಟಿಗೆ ಚೆಲ್ಲಿ, ಅಧಿಕಾರಿಗಳು ಸಚಿವರ ಹೆಸರಲ್ಲಿ ತಾವೇ ಅಧಿಕಾರ ಚಲಾವಣೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕಾರ್ಮಿಕ ಇಲಾಖೆಯ ವರ್ಗಾವಣೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಸಚಿವ ಸಂತೋಷ ಲಾಡ್​​​ ಅವರ ಶಿಫಾರಸನ್ನೇ, ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳು ಮೂಲೆಗೆ ಎಸೆದಿದ್ದಾರೆ. ಸಚಿವರಿಗೂ ಮಾಹಿತಿ ನೀಡದೇ ಅಧಿಕಾರಿಗಳು ತಮ್ಮದೇಯಾದ ವರ್ಗಾವಣೆ ಪಟ್ಟಿ ಸಿದ್ದಪಡಿಸಿರುವ ಆರೋಪ ಕೇಳಿಬಂದಿದೆ. ಅಲ್ಲದೇ ವರ್ಗಾವಣೆ ಪಟ್ಟಿ ಸಿದ್ದಗೊಂಡ ಬಗ್ಗೆಯೂ ಸಚಿವರಿಗೂ ಮಾಹಿತಿ ನೀಡದೇ ಯಾಮಾರಿಸಿರುವ ಆರೋಪ ಕೇಳಿಬಂದಿದೆ. ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಈ ನಡೆಯಿಂದ ಸಚಿವ ಸಂತೋಷ್ ಲಾಡ್ ಗರಂ ಆಗಿದ್ದು, ತೀವ್ರ ಅಸಮಾಧಾನಗೊಂಡಿದ್ದಾರೆ.

ಇದನ್ನೂ ಓದಿ: ವರ್ಗಾವಣೆಗೆ ಡೋಂಟ್ ಕೇರ್: 27 ಅಧಿಕಾರಿಗಳಿಗೆ ಗೇಟ್‌ಪಾಸ್‌

ಏನಿದು ಅಸಲಿ ಪ್ರಕರಣ..?

ಕಾರ್ಮಿಕ ಇಲಾಖೆ 40 ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಆಗಸ್ಟ್ ತಿಂಗಳಲ್ಲಿ ಸಚಿವ ಸಂತೋಷ್​ ಲಾಡ್​ ಶಿಫಾರಸು ಮಾಡಿದ್ದರು. ವರ್ಗಾವಣೆಗೆ ಸಿಎಂ ಅನುಮೋದನೆ ಇಲ್ಲ ಎಂದು ಐದೇ ದಿನಕ್ಕೆ ವರ್ಗಾವಣೆ ರದ್ದಾಗಿತ್ತು. ಇದೀಗ ಕೇವಲ ನಾಲ್ಕು ಜನ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲು, ಮುಖ್ಯಮಂತ್ರಿಗಳ ಅನುಮೋದನೆಗೆ ಸಚಿವ ಸಂತೋಷ್ ಲಾಡ್ ಕಳುಹಿಸಿದ್ದಾರೆ. ಆದರೆ ಅಧಿಕಾರಿಗಳು ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆಯುವ ಮುಂಚೆ ಸಚಿವರು ಕೊಟ್ಟಿದ್ದ ಪಟ್ಟಿಯನ್ನು ಕಸದ ಬುಟ್ಟಿಗೆ ಹಾಕಿ, ತಾವೇ ಹೊಸದಾಗಿ 40 ಜನರ ವರ್ಗಾವಣೆ ಪಟ್ಟಿ ತಯಾರಿಸಿದ್ದಾರೆ.

ಇದನ್ನು ತಿಳಿಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್ಗಾವಣೆ ಪಟ್ಟಿಗೆ ಅನುಮೋದನೆ ನೀಡಿದ್ದಾರೆ. ಇದರಿಂದ ಕಾರ್ಮಿಕ ಇಲಾಖೆಯ 40 ಜನ ಅಧಿಕಾರಿಗಳ ವರ್ಗಾವಣೆಗೆ ಅಂಕಿತ ಬಿದ್ದಿದೆ. ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡದೇ ಅಧಿಕಾರಿಗಳೇ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಸಿಎಂ ಕಚೇರಿ ಅಧಿಕಾರಿಗಳ ನಡೆಗೆ ಸಚಿವ ಸಂತೋಷ್ ಲಾಡ್ ತೀವ್ರ ಬೇಸರಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು