AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆರಳು ಕೊಟ್ಟರೆ ಹಸ್ತ ನುಂಗಿದ್ರಾ? ಸಿಎಂ, ಸಚಿವರಿಗೆ ಮಾಹಿತಿ ನೀಡಿದೇ ವರ್ಗಾವಣೆ ಪಟ್ಟಿ ತಯಾರಿಸಿದ ಅಧಿಕಾರಿಗಳು

ಕಾರ್ಮಿಕ ಇಲಾಖೆಯ ವರ್ಗಾವಣೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಸಚಿವ ಸಂತೋಷ ಲಾಡ್​​​ ಅವರ ಶಿಫಾರಸನ್ನೇ, ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳು ಮೂಲೆಗೆ ಎಸೆದಿದ್ದಾರೆ. ಸಚಿವರಿಗೂ ಮಾಹಿತಿ ನೀಡದೇ ಅಧಿಕಾರಿಗಳು ತಮ್ಮದೇಯಾದ ವರ್ಗಾವಣೆ ಪಟ್ಟಿ ಸಿದ್ದಪಡಿಸಿರುವ ಆರೋಪ ಕೇಳಿಬಂದಿದೆ.

ಬೆರಳು ಕೊಟ್ಟರೆ ಹಸ್ತ ನುಂಗಿದ್ರಾ? ಸಿಎಂ, ಸಚಿವರಿಗೆ ಮಾಹಿತಿ ನೀಡಿದೇ ವರ್ಗಾವಣೆ ಪಟ್ಟಿ ತಯಾರಿಸಿದ ಅಧಿಕಾರಿಗಳು
ವಿಧಾನಸೌಧ
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on: Oct 29, 2023 | 1:49 PM

Share

ಬೆಂಗಳೂರು ಅ.29: ಅಭೂತ ಪೂರ್ವ ಬಹುಮತದೊಂದಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ (Congress)​ ಅಧಿಕಾರದ ಗದ್ದುಗೆ ಹಿಡಿದಿದೆ. ಸರ್ಕಾರ ರಚನೆಯಾಗುತ್ತಿದ್ದಂತೆಯೇ ಅಧಿಕಾರಿಗಳ ವರ್ಗಾವಣೆ (Transfer) ಜೋರಾಗಿಯೇ ನಡೆಯಿತು. ಸಚಿವರು ಆಯಕಟ್ಟಿನ ಜಾಗಗಳಿಗೆ ತಮಗೆ ಬೇಕಾದ ಅಧಿಕಾರಿಗಳನ್ನು ವರ್ಗ ಮಾಡಲು ಆರಂಭಿಸಿದರು. ಸಚಿವರ (Minister) ಈ ನಡೆಯನ್ನು ಕಂಡ ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಆರಂಭಿಸಿದವು. ವರ್ಗಾವಣೆಗೆ ಲಂಚ ಪಡೆಯಲಾಗುತ್ತಿದೆ ಎಂದು ಆರೋಪಿಸುತ್ತಿವೆ. ಇದರ ನಡುವೆಯೇ ಸಚಿವರ ಶಿಫಾರಸುಗಳನ್ನು ಕಸದ ಬುಟ್ಟಿಗೆ ಚೆಲ್ಲಿ, ಅಧಿಕಾರಿಗಳು ಸಚಿವರ ಹೆಸರಲ್ಲಿ ತಾವೇ ಅಧಿಕಾರ ಚಲಾವಣೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕಾರ್ಮಿಕ ಇಲಾಖೆಯ ವರ್ಗಾವಣೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಸಚಿವ ಸಂತೋಷ ಲಾಡ್​​​ ಅವರ ಶಿಫಾರಸನ್ನೇ, ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳು ಮೂಲೆಗೆ ಎಸೆದಿದ್ದಾರೆ. ಸಚಿವರಿಗೂ ಮಾಹಿತಿ ನೀಡದೇ ಅಧಿಕಾರಿಗಳು ತಮ್ಮದೇಯಾದ ವರ್ಗಾವಣೆ ಪಟ್ಟಿ ಸಿದ್ದಪಡಿಸಿರುವ ಆರೋಪ ಕೇಳಿಬಂದಿದೆ. ಅಲ್ಲದೇ ವರ್ಗಾವಣೆ ಪಟ್ಟಿ ಸಿದ್ದಗೊಂಡ ಬಗ್ಗೆಯೂ ಸಚಿವರಿಗೂ ಮಾಹಿತಿ ನೀಡದೇ ಯಾಮಾರಿಸಿರುವ ಆರೋಪ ಕೇಳಿಬಂದಿದೆ. ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಈ ನಡೆಯಿಂದ ಸಚಿವ ಸಂತೋಷ್ ಲಾಡ್ ಗರಂ ಆಗಿದ್ದು, ತೀವ್ರ ಅಸಮಾಧಾನಗೊಂಡಿದ್ದಾರೆ.

ಇದನ್ನೂ ಓದಿ: ವರ್ಗಾವಣೆಗೆ ಡೋಂಟ್ ಕೇರ್: 27 ಅಧಿಕಾರಿಗಳಿಗೆ ಗೇಟ್‌ಪಾಸ್‌

ಏನಿದು ಅಸಲಿ ಪ್ರಕರಣ..?

ಕಾರ್ಮಿಕ ಇಲಾಖೆ 40 ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಆಗಸ್ಟ್ ತಿಂಗಳಲ್ಲಿ ಸಚಿವ ಸಂತೋಷ್​ ಲಾಡ್​ ಶಿಫಾರಸು ಮಾಡಿದ್ದರು. ವರ್ಗಾವಣೆಗೆ ಸಿಎಂ ಅನುಮೋದನೆ ಇಲ್ಲ ಎಂದು ಐದೇ ದಿನಕ್ಕೆ ವರ್ಗಾವಣೆ ರದ್ದಾಗಿತ್ತು. ಇದೀಗ ಕೇವಲ ನಾಲ್ಕು ಜನ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲು, ಮುಖ್ಯಮಂತ್ರಿಗಳ ಅನುಮೋದನೆಗೆ ಸಚಿವ ಸಂತೋಷ್ ಲಾಡ್ ಕಳುಹಿಸಿದ್ದಾರೆ. ಆದರೆ ಅಧಿಕಾರಿಗಳು ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆಯುವ ಮುಂಚೆ ಸಚಿವರು ಕೊಟ್ಟಿದ್ದ ಪಟ್ಟಿಯನ್ನು ಕಸದ ಬುಟ್ಟಿಗೆ ಹಾಕಿ, ತಾವೇ ಹೊಸದಾಗಿ 40 ಜನರ ವರ್ಗಾವಣೆ ಪಟ್ಟಿ ತಯಾರಿಸಿದ್ದಾರೆ.

ಇದನ್ನು ತಿಳಿಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್ಗಾವಣೆ ಪಟ್ಟಿಗೆ ಅನುಮೋದನೆ ನೀಡಿದ್ದಾರೆ. ಇದರಿಂದ ಕಾರ್ಮಿಕ ಇಲಾಖೆಯ 40 ಜನ ಅಧಿಕಾರಿಗಳ ವರ್ಗಾವಣೆಗೆ ಅಂಕಿತ ಬಿದ್ದಿದೆ. ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡದೇ ಅಧಿಕಾರಿಗಳೇ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಸಿಎಂ ಕಚೇರಿ ಅಧಿಕಾರಿಗಳ ನಡೆಗೆ ಸಚಿವ ಸಂತೋಷ್ ಲಾಡ್ ತೀವ್ರ ಬೇಸರಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ