AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್: 3 ವರ್ಷ ವಯೋಮಿತಿ ಸಡಿಲಿಕೆ, ಯಾವ ವರ್ಗಕ್ಕೆ ಎಷ್ಟು?

Age relaxation for job: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ದಸರಾ ಗಿಫ್ಟ್ ನೀಡಿದೆ. ರಾಜ್ಯ ಸರ್ಕಾರದ ಸಿವಿಲ್ ನೇರ ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಮಹತ್ವದ ಆದೇಶ ಹೊರಡಿಸಲಾಗಿದೆ. ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಆದೇಶಿಸಿದೆ.

ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್: 3 ವರ್ಷ ವಯೋಮಿತಿ ಸಡಿಲಿಕೆ, ಯಾವ ವರ್ಗಕ್ಕೆ ಎಷ್ಟು?
ವಿಧಾನಸೌಧ
ರಮೇಶ್ ಬಿ. ಜವಳಗೇರಾ
|

Updated on: Sep 29, 2025 | 9:26 PM

Share

ಬೆಂಗಳೂರು, (ಸೆಪ್ಟೆಂಬರ್ 29): ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ (3 year Age relaxation) ಮಾಡಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಇಂದು (ಸೆಪ್ಟೆಂಬರ್ 29) ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.  ಆಯಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 3 ವರ್ಷಗಳ ಸಡಿಲಿಸಲಾಗಿದ್ದು, ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳಂತೆ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಅನ್ವಯವಾಗಲಿದೆ.

ಈಗ 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತೆ ಜನಪ್ರತಿನಿಧಿಗಳು, ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹಾಕಿದ ಪರಿಣಾಮ ಸರ್ಕಾರ ಇದೀಗ 3 ವರ್ಷಗಳ ಸಡಿಲಿಕೆ ಮಾಡಿದೆ. ಈ ವಯೋಮಿತಿ ಸಡಿಲಿಕೆ 2027 ರ ಡಿಸೆಂಬರ್ 31ರೊಳಗೆ ಸರ್ಕಾರ ಹೊರಡಿಸುವ ಎಲ್ಲ ನೇರ ನೇಮಕಾತಿಗಳಿಗೂ ಕೇವಲ ಒಂದು ಬಾರಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೂ ಅನ್ವಯಿಸಲಿದೆ.

ಇದನ್ನೂ ಓದಿ: WCD Chikkaballapur Recruitment 2025: 274 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು

2019ರಿಂದಲೂ ಕೋವಿಡ್ ಹಾಗೂ ಮತ್ತಿತರೆ ಕಾರಣಗಳಿಂದ ನೇರನೇಮಕಾತಿಗಳಿಗೆ ಸರ್ಕಾರ ಅಧಿಸೂಚನೆ ಹೊರಡಿಸಲಿಲ್ಲ. ಪಿಎಸ್‌ಐ ಹಾಗೂ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಪರೀಕ್ಷೆ ನಡೆಸಿತ್ತಿದ್ದಾರೂ ನೇಮಕಾತಿ ಆದೇಶ ಇನ್ನೂ ನೀಡಿಲ್ಲ. ಇದರಿಂದ ಸರ್ಕಾರಿ ಕೆಲಸವನ್ನೇ ನೆಚ್ಚಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಂಡಿರುವ ಲಕ್ಷಾಂತರ ಯುವಕರು ವಯೋಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದರು.

ವಯೋಮಿತಿ ಸಡಿಲಿಕೆ ಎಷ್ಟು?

  1.  ಸಾಮಾನ್ಯ ವರ್ಗ – 35 ವರ್ಷದಿಂದ 38 ವರ್ಷ
  2.  ಒಬಿಸಿ – 38 ವರ್ಷದಿಂದ 41 ವರ್ಷ
  3.  ಎಸ್‌ಸಿ/ಎಸ್‌ಟಿ/ಪ್ರವರ್ಗ-1 – 40 ವರ್ಷದಿಂದ 43 ವರ್ಷ

ಶಿಕ್ಷಕರ ನೇಮಕಾತಿ

  • SC/ST/OBC 42 ಇತ್ತು, 45 ಆಗುತ್ತೆ
  • ಸಾಮಾನ್ಯ – 40 ಇತ್ತು, 43 ಆಗುತ್ತೆ

SDA/FDA/ಗ್ರೂಪ್ ಸಿ ಹುದ್ದೆ

  • SC/ST/OBC – 35 ಇತ್ತು, 38 ಆಗುತ್ತೆ
  • ಸಾಮಾನ್ಯ – 37 ಇತ್ತು, 40 ಆಗುತ್ತೆ

ಪೊಲೀಸ್ ಕಾನ್ಸ್​ ಟೇಬಲ್ ನೇಮಕಾತಿ

  • SC/ST/OBC – 27 ಇತ್ತು, 30 ಆಗುತ್ತೆ
  • ಸಾಮಾನ್ಯ – 25 ಇತ್ತು, 28 ಆಗುತ್ತೆ

ಪೊಲೀಸ್ ಸಭ್ ಇನ್ಸ್​ ಪೆಕ್ಟರ್​

  • SC/ST/OBC – 32 ಇತ್ತು, 35 ಆಗುತ್ತೆ
  • ಸಾಮಾನ್ಯ – 30 ಇತ್ತು, 33 ಆಗುತ್ತೆ

ಕೆಎಎಸ್

  • SC/ST/OBC 40 ಇತ್ತು, 43 ಆಗುತ್ತೆ
  • ಸಾಮಾನ್ಯ 37 ಇತ್ತು, 40 ಆಗುತ್ತೆ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!