AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್: 3 ವರ್ಷ ವಯೋಮಿತಿ ಸಡಿಲಿಕೆ, ಯಾವ ವರ್ಗಕ್ಕೆ ಎಷ್ಟು?

Age relaxation for job: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ದಸರಾ ಗಿಫ್ಟ್ ನೀಡಿದೆ. ರಾಜ್ಯ ಸರ್ಕಾರದ ಸಿವಿಲ್ ನೇರ ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಮಹತ್ವದ ಆದೇಶ ಹೊರಡಿಸಲಾಗಿದೆ. ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಆದೇಶಿಸಿದೆ.

ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್: 3 ವರ್ಷ ವಯೋಮಿತಿ ಸಡಿಲಿಕೆ, ಯಾವ ವರ್ಗಕ್ಕೆ ಎಷ್ಟು?
ವಿಧಾನಸೌಧ
ರಮೇಶ್ ಬಿ. ಜವಳಗೇರಾ
|

Updated on: Sep 29, 2025 | 9:26 PM

Share

ಬೆಂಗಳೂರು, (ಸೆಪ್ಟೆಂಬರ್ 29): ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ (3 year Age relaxation) ಮಾಡಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಇಂದು (ಸೆಪ್ಟೆಂಬರ್ 29) ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.  ಆಯಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 3 ವರ್ಷಗಳ ಸಡಿಲಿಸಲಾಗಿದ್ದು, ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳಂತೆ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಅನ್ವಯವಾಗಲಿದೆ.

ಈಗ 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತೆ ಜನಪ್ರತಿನಿಧಿಗಳು, ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹಾಕಿದ ಪರಿಣಾಮ ಸರ್ಕಾರ ಇದೀಗ 3 ವರ್ಷಗಳ ಸಡಿಲಿಕೆ ಮಾಡಿದೆ. ಈ ವಯೋಮಿತಿ ಸಡಿಲಿಕೆ 2027 ರ ಡಿಸೆಂಬರ್ 31ರೊಳಗೆ ಸರ್ಕಾರ ಹೊರಡಿಸುವ ಎಲ್ಲ ನೇರ ನೇಮಕಾತಿಗಳಿಗೂ ಕೇವಲ ಒಂದು ಬಾರಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೂ ಅನ್ವಯಿಸಲಿದೆ.

ಇದನ್ನೂ ಓದಿ: WCD Chikkaballapur Recruitment 2025: 274 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು

2019ರಿಂದಲೂ ಕೋವಿಡ್ ಹಾಗೂ ಮತ್ತಿತರೆ ಕಾರಣಗಳಿಂದ ನೇರನೇಮಕಾತಿಗಳಿಗೆ ಸರ್ಕಾರ ಅಧಿಸೂಚನೆ ಹೊರಡಿಸಲಿಲ್ಲ. ಪಿಎಸ್‌ಐ ಹಾಗೂ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಪರೀಕ್ಷೆ ನಡೆಸಿತ್ತಿದ್ದಾರೂ ನೇಮಕಾತಿ ಆದೇಶ ಇನ್ನೂ ನೀಡಿಲ್ಲ. ಇದರಿಂದ ಸರ್ಕಾರಿ ಕೆಲಸವನ್ನೇ ನೆಚ್ಚಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಂಡಿರುವ ಲಕ್ಷಾಂತರ ಯುವಕರು ವಯೋಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದರು.

ವಯೋಮಿತಿ ಸಡಿಲಿಕೆ ಎಷ್ಟು?

  1.  ಸಾಮಾನ್ಯ ವರ್ಗ – 35 ವರ್ಷದಿಂದ 38 ವರ್ಷ
  2.  ಒಬಿಸಿ – 38 ವರ್ಷದಿಂದ 41 ವರ್ಷ
  3.  ಎಸ್‌ಸಿ/ಎಸ್‌ಟಿ/ಪ್ರವರ್ಗ-1 – 40 ವರ್ಷದಿಂದ 43 ವರ್ಷ

ಶಿಕ್ಷಕರ ನೇಮಕಾತಿ

  • SC/ST/OBC 42 ಇತ್ತು, 45 ಆಗುತ್ತೆ
  • ಸಾಮಾನ್ಯ – 40 ಇತ್ತು, 43 ಆಗುತ್ತೆ

SDA/FDA/ಗ್ರೂಪ್ ಸಿ ಹುದ್ದೆ

  • SC/ST/OBC – 35 ಇತ್ತು, 38 ಆಗುತ್ತೆ
  • ಸಾಮಾನ್ಯ – 37 ಇತ್ತು, 40 ಆಗುತ್ತೆ

ಪೊಲೀಸ್ ಕಾನ್ಸ್​ ಟೇಬಲ್ ನೇಮಕಾತಿ

  • SC/ST/OBC – 27 ಇತ್ತು, 30 ಆಗುತ್ತೆ
  • ಸಾಮಾನ್ಯ – 25 ಇತ್ತು, 28 ಆಗುತ್ತೆ

ಪೊಲೀಸ್ ಸಭ್ ಇನ್ಸ್​ ಪೆಕ್ಟರ್​

  • SC/ST/OBC – 32 ಇತ್ತು, 35 ಆಗುತ್ತೆ
  • ಸಾಮಾನ್ಯ – 30 ಇತ್ತು, 33 ಆಗುತ್ತೆ

ಕೆಎಎಸ್

  • SC/ST/OBC 40 ಇತ್ತು, 43 ಆಗುತ್ತೆ
  • ಸಾಮಾನ್ಯ 37 ಇತ್ತು, 40 ಆಗುತ್ತೆ

Follow Us
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್