AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಧಾರ್ಮಿಕ ಪರಿಷತ್ ರಚಿಸಿ ಕರ್ನಾಟಕ ಸರ್ಕಾರದಿಂದ ಆದೇಶ

ರಾಜ್ಯ ಧಾರ್ಮಿಕ ಪರಿಷತ್ ರಚಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಪರಿಷತ್ ರಚಿಸಲಾಗಿದ್ದು, ಇದಕ್ಕೆ ಎಂಟು ಮಂದಿ ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರನ್ನು ನೇಮಿಸಲಾಗಿದೆ.

ರಾಜ್ಯ ಧಾರ್ಮಿಕ ಪರಿಷತ್ ರಚಿಸಿ ಕರ್ನಾಟಕ ಸರ್ಕಾರದಿಂದ ಆದೇಶ
ರಾಜ್ಯ ಧಾರ್ಮಿಕ ಪರಿಷತ್ ರಚಿಸಿ ಕರ್ನಾಟಕ ಸರ್ಕಾರದಿಂದ ಆದೇಶImage Credit source: viator
ಕಿರಣ್​ ಹನಿಯಡ್ಕ
| Edited By: |

Updated on:Sep 29, 2023 | 10:10 PM

Share

ಬೆಂಗಳೂರು, ಸೆ.29: ರಾಜ್ಯ ಧಾರ್ಮಿಕ ಪರಿಷತ್ (Karnataka Religious Council) ರಚಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರ ಅಧ್ಯಕ್ಷತೆಯಲ್ಲಿ ಪರಿಷತ್ ರಚಿಸಲಾಗಿದ್ದು, ಇದಕ್ಕೆ ಎಂಟು ಮಂದಿ ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರನ್ನು ನೇಮಿಸಲಾಗಿದೆ.

ಉಪಾಧ್ಯಕ್ಷರನ್ನಾಗಿ ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರನ್ನು ನೇಮಿಸಲಾಗಿದ್ದು, ಪದನಿಮಿತ್ತ ಕಾರ್ಯದರ್ಶಿಯನ್ನಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರನ್ನು ನೇಮಿಸಲಾಗಿದೆ.

ನಿವೃತ್ತ ಜಿಲ್ಲಾ ನ್ಯಾಯಾಧೀಶ ಎನ್ ಶ್ರೀವತ್ಸ ಕೆದಿಲಾಯ (ನ್ಯಾಯಿಕ ಸದಸ್ಯ), ಸಾಗರ ತಾಲೂಕಿನ ವೀರಾಪುರ ಹಿರೇಮಠದ ಡಾ.ಮುರಳಸಿದ್ದ ಪಂಡಿತಾರಾದ್ಯ ಶಿವಾಚಾರ್ಯ (ಆಗಮ), ಬಿಎಸ್ ದ್ವರಕನಾಥ್ (ವೇದ), ಡಾ.ಎ.ರಾಧಕೃಷ್ಣರಾಜು (ಹಿಂದುಳಿದ ವರ್ಗ), ಕೆಎಂ ನಾಗರಾಜು (ಸಾಮಾನ್ಯ), ಬಸವನಗರದ ಆರಾದ್ರಿಮಠದ ಡಾ.ಮಹಂತೇಶ ಶಾಸ್ತ್ರಿ (ಸಾಮಾನ್ಯ), ಮಲ್ಲಿಕಾ ಪ್ರಶಾಂತ ಪಕ್ಕಲಾ ಅವರನ್ನು (ಮಹಿಳಾ ಸದಸ್ಯೆ) ಹಾಗೂ ಚಂದ್ರಶೇಖರ್ ಅವರನ್ನು (ಅನುಸೂಚಿತ ಜಾತಿ) ಅವರನ್ನು ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿ: ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ 1997ರ ಕಾಯ್ದೆಯ ಕಲಂ 20ರ ಅನ್ವಯ ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರಗಳನ್ನೊಳಗೊಂಡಂತೆ ಪೂರ್ಣ ಪ್ರಮಾಣದ ರಾಜ್ಯ ಧಾರ್ಮಿಕ ಪರಿಷತ್ತನ್ನು ನಾಲ್ಕು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ರಚಿಸಲು ಅವಕಾಶವಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Fri, 29 September 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?