AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಕಡ್ಡಾಯ ಗ್ರಾಚ್ಯುಟಿ ಮಸೂದೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ

ಈ ಶ್ರಮ್ ಯೋಜನೆಗೆ ಅರ್ಜಿ ಸಲ್ಲಿಸುವ ಅಸಂಘಟಿತ ಕಾರ್ಮಿಕರ ವಯೋಮಿತಿಯನ್ನು 70 ವರ್ಷಗಳಿಗೆ ವಿಸ್ತರಿಸಲಾಗುವುದು. ಆಟೋರಿಕ್ಷಾ ಚಾಲಕರು, ಮೆಕ್ಯಾನಿಕ್‌ಗಳು, ಗ್ಯಾರೇಜ್ ಮಾಲೀಕರು ಸೇರಿದಂತೆ ಸಾರಿಗೆ ಇಲಾಖೆಯಲ್ಲಿರುವ ಸುಮಾರು 40 ಲಕ್ಷ ಅಸಂಘಟಿತ ಕಾರ್ಮಿಕರನ್ನು ಈ ಶ್ರಮ್ ಯೋಜನೆಯಡಿ ತರಲು ನಾವು ಚಿಂತನೆ ನಡೆಸಿದ್ದೇವೆ ಎಂದು ಸಚಿವ ಸಂತೋಷ ಲಾಡ್​ ಹೇಳಿದರು.

ಹೊಸ ಕಡ್ಡಾಯ ಗ್ರಾಚ್ಯುಟಿ ಮಸೂದೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Feb 02, 2024 | 10:51 AM

Share

ಬೆಂಗಳೂರು, ಫೆಬ್ರವರಿ 02: ರಾಜ್ಯ ಸರ್ಕಾರವು (Karnataka Government) ಶೀಘ್ರದಲ್ಲೇ ಕಡ್ಡಾಯ ಹೊಸ ಗ್ರಾಚ್ಯುಟಿ ಮಸೂದೆಯನ್ನು (Gratuity Bill) ಜಾರಿಗೆ ತರಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಗ್ರಾಚ್ಯುಟಿ ಯೋಜನೆಯಡಿ, ಕಂಪನಿ ಅಥವಾ ಉದ್ಯೋಗ ನೀಡುವವರು ಗ್ರಾಚ್ಯುಟಿ ಮೊತ್ತವನ್ನು ವಿಮಾ ಕಂಪನಿಗಳಲ್ಲಿ ಹೂಡಿಕೆ ಮಾಡಬೇಕು. ಇದರಿಂದ ಕಂಪನಿಯು ದಿವಾಳಿಯಾದರೂ ಸಹ ಉದ್ಯೋಗಿಗಳು ತಮ್ಮ ಗ್ರಾಚ್ಯುಟಿ ಮೊತ್ತವನ್ನು ಪಡೆಯಬಹುದಾಗಿದೆ. ಒಮ್ಮೆ ಮಸೂದೆ ಅಂಗೀಕಾರವಾದರೆ ರಾಜ್ಯದಾದ್ಯಂತ ಸುಮಾರು 80 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದರು.

ಅಸಂಘಟಿತ ಕಾರ್ಮಿಕರಿಗೆ ಕಾರ್ಪಸ್ ನಿಧಿ

ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 1 ರೂಪಾಯಿ ಸೆಸ್ ವಿಧಿಸುವ ಮೂಲಕ ಅಸಂಘಟಿತ ಕಾರ್ಮಿಕರಿಗಾಗಿ ಕಾರ್ಪಸ್ ಫಂಡ್ ಸ್ಥಾಪಿಸುವ ಯೋಜನೆಯೂ ಇದೆ. ಇದರಿಂದ ಈ ಕಾರ್ಮಿಕರು ಹೆಚ್ಚಿನ ಪ್ರಯೋಜನಗಳನ್ನು ಪಡೆಯಬಹುದು ಎಂದು ಹೇಳಿದರು.

ಈ ಶ್ರಮ್ ಯೋಜನೆಗೆ ಅರ್ಜಿ ಸಲ್ಲಿಸುವ ಅಸಂಘಟಿತ ಕಾರ್ಮಿಕರ ವಯೋಮಿತಿಯನ್ನು 70 ವರ್ಷಗಳಿಗೆ ವಿಸ್ತರಿಸಲಾಗುವುದು. ಖಾಸಗಿ ವಲಯದಲ್ಲಿ ಅಂಗವಿಕಲರಿಗೆ 5 ಪ್ರತಿಶತ ಮೀಸಲಾತಿಯನ್ನು ಶಿಫಾರಸು ಮಾಡುವ ಮಸೂದೆಯನ್ನು ಜಾರಿಗೆ ತರಲು ಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಎಲ್​ಐಸಿ ಏಜೆಂಟ್ಸ್​ಗೆ ಸರ್ಕಾರದಿಂದ ಸಖತ್ ಕೊಡುಗೆ; ಗ್ರಾಜುಟಿ ಮಿತಿ, ಕುಟುಂಬ ಪಿಂಚಣಿ ಇತ್ಯಾದಿಗಳ ಹೆಚ್ಚಳ

ಆಟೋರಿಕ್ಷಾ ಚಾಲಕರು, ಮೆಕ್ಯಾನಿಕ್‌ಗಳು, ಗ್ಯಾರೇಜ್ ಮಾಲೀಕರು ಸೇರಿದಂತೆ ಸಾರಿಗೆ ಇಲಾಖೆಯಲ್ಲಿರುವ ಸುಮಾರು 40 ಲಕ್ಷ ಅಸಂಘಟಿತ ಕಾರ್ಮಿಕರನ್ನು ಈ ಶ್ರಮ್ ಯೋಜನೆಯಡಿ ತರಲು ನಾವು ಚಿಂತನೆ ನಡೆಸಿದ್ದೇವೆ. ಶೇ 11ರ ಸಾರಿಗೆ ಸೆಸ್ ಅಡಿಯಲ್ಲಿ ಸುಮಾರು 250 ಕೋಟಿ ರೂ. ಸಂಗ್ರಹಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ. ಹೀಗಾಗಿ ಈ ವಲಯದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇವೆ ಎಂದರು.

ರಾಜ್ಯದಲ್ಲಿ 394 ವಲಯಗಳಲ್ಲಿ ಒಂದು ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರು ಈ ಶ್ರಾಮ್‌ಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಪತ್ರಿಕೆ ವಿತರಕರು, ಛಾಯಾಗ್ರಾಹಕರು, ಬೀದಿಬದಿ ವ್ಯಾಪಾರಿಗಳು, ಟೈಲರ್‌ಗಳು, ಸಿನಿಮಾ ಕ್ಷೇತ್ರದಲ್ಲಿ ದುಡಿಯುತ್ತಿರುವವರು ಸೇರಿದಂತೆ ಇತರೆ 10 ವೃತ್ತಿಯಲ್ಲಿರುವ ಅಸಂಘಟಿತ ಕಾರ್ಮಿಕರನ್ನೂ ಯೋಜನೆಯಡಿ ಸೇರಿಸಲಾಗುವುದು ಎಂದು ಬರವಸೆ ನೀಡಿದರು.

40,000 ಪತ್ರಿಕೆ ವಿತರಕರ ಪೈಕಿ ಕೇವಲ 5,000 ಈ ಶ್ರಮ್ ಅಡಿಯಲ್ಲಿ ನೋಂದಾಯಿಸಿದ್ದಾರೆ. ಹೀಗಾಗಿ ಹೆಚ್ಚಿನ ಜನರು ಯೋಜನೆಗೆ ನೋಂದಾಯಿಸುಕೊಳ್ಳುವಂತೆ ಕಾರ್ಮಿಕ ಆಯುಕ್ತ ಎಚ್.ಎನ್.ಗೋಪಾಲಕೃಷ್ಣ ಅವರು ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ