AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರದಿಂದ ನೂತನ ಇ-ಸಹಮತಿ ತಂತ್ರಾಂಶ ಸಿದ್ಧ; ಸದ್ಯದಲ್ಲೇ ಮುಖ್ಯಮಂತ್ರಿಯಿಂದ ಉದ್ಘಾಟನೆ

ಶಿಕ್ಷಣ ಸಂಸ್ಥೆ, ಪೊಲೀಸ್, ಸಾರಿಗೆ ಇಲಾಖೆಗಳ ದಾಖಲೆಗಳು ಇ- ಸಹಮತಿಯಲ್ಲಿ ಲಭ್ಯವಾಗಲಿವೆ. ಕೆಲವೇ‌ ದಿನಗಳಲ್ಲಿ‌ ಸಿಎಂ ಬಸವರಾಜ ಬೊಮ್ಮಾಯಿ‌ಯವರಿಂದ ಇ-ಸಹಮತಿ ಆ್ಯಪ್ ಉದ್ಘಾಟನೆಯಾಗಲಿದೆ

ರಾಜ್ಯ ಸರ್ಕಾರದಿಂದ ನೂತನ ಇ-ಸಹಮತಿ ತಂತ್ರಾಂಶ ಸಿದ್ಧ; ಸದ್ಯದಲ್ಲೇ ಮುಖ್ಯಮಂತ್ರಿಯಿಂದ ಉದ್ಘಾಟನೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Dec 16, 2021 | 4:07 PM

Share

ಬೆಂಗಳೂರು: ರಾಜ್ಯ ಸರ್ಕಾರ ನೂತನ ತಂತ್ರಾಂಶ ಇ-ಸಹಮತಿಯನ್ನು ಸಿದ್ಧಪಡಿಸಿದೆ. ಇ-ಸಹಮತಿಗೆ ಮಾರ್ಗಸೂಚಿ ಪ್ರಕಟವಾಗಿದ್ದು, ಇನ್ನು ಮುಂದೆ ಜನರ ದಾಖಲೆಗಳ ಮಾಹಿತಿ ಡಿಜಿಟಲೀಕರಣ ಮಾಡಲಾಗುವುದು. ದಾಖಲೆಗಳನ್ನು ಕಂಪನಿಗಳು ವೇರಿಫೈ ಮಾಡಲು ಇ-ಸಹಮತಿ ಆ್ಯಪ್ ಬಳಕೆ ಮಾಡಲಾಗುವುದು. ಜನರ ಅನುಮತಿ‌ ಮೇರೆಗೆ ಹಲವು ಇಲಾಖೆಗಳ ದಾಖಲೆ ವರ್ಗಾವಣೆ ಮಾಡಲಾಗುವುದು.

ಶಿಕ್ಷಣ ಸಂಸ್ಥೆ, ಪೊಲೀಸ್, ಸಾರಿಗೆ ಇಲಾಖೆಗಳ ದಾಖಲೆಗಳು ಇ- ಸಹಮತಿಯಲ್ಲಿ ಲಭ್ಯವಾಗಲಿವೆ. ಕೆಲವೇ‌ ದಿನಗಳಲ್ಲಿ‌ ಸಿಎಂ ಬಸವರಾಜ ಬೊಮ್ಮಾಯಿ‌ಯವರಿಂದ ಇ-ಸಹಮತಿ ಆ್ಯಪ್ ಉದ್ಘಾಟನೆಯಾಗಲಿದೆ ಎಂದು ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಕಾರ್ಯದರ್ಶಿ ರಾಜೀವ್ ಚಾವ್ಲಾ ಹೇಳಿಕೆ ನೀಡಿದ್ದಾರೆ.

ನಮ್ಮ ಇಲಾಖೆ ಇ-ಸಹಮತಿಗೆ ಮಾರ್ಗಸೂಚಿ ಪ್ರಕಟಿಸಿದೆ. ಇನ್ನು ಮುಂದೆ ಜನರು ತಮ್ಮ ದಾಖಲೆಗಳನ್ನು ಸುಲಭವಾಗಿ ವರ್ಗಾಯಿಸಬಹುದು. ಈ ದಾಖಲೆಯನ್ನು ಸಂಸ್ಥೆ ಅಥವಾ ಕಂಪನಿಗಳು ಸಂಬಂಧಪಟ್ಟ ಇಲಾಖೆಯಿಂದ ಧೃಡೀಕರಣಗೊಳಿಸಬಹುದು. ಹಲವಾರು ಇಲಾಖೆಗಳು, ಸಂಸ್ಥೆಗಳು, ಕಂಪನಿಗಳು ಇ-ಸಹಮತಿಯಡಿ ಬರಲಿವೆ. ಇ-ಸಹಮತಿ ವೇದಿಕೆಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತರ ರಾಜ್ಯಗಳಿಗೂ ಈ ವೇದಿಕೆಯನ್ನು ವಿಸ್ತರಿಸುವುದಾಗಿ ಹೇಳಿದ್ದಾರೆ. ತೆಲಂಗಾಣ ಸರ್ಕಾರ ಈಗಾಗಲೇ ನಮ್ಮ ಇಲಾಖೆಯನ್ನು ಸಂಪರ್ಕಿಸಿದ್ದು ಅಳವಡಿಸಿಕೊಳ್ಳಲು ಆಸಕ್ತಿ ತೋರಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ತಂತ್ರಾಂಶದಲ್ಲಿ ಎಡವಟ್ಟು; ಲಸಿಕೆ ಪಡೆಯದಿದ್ದರೂ ಸಿಗುತ್ತಿದೆ ಲಸಿಕೆ ಪಡೆದ ಸರ್ಟಿಫಿಕೆಟ್

ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣ: ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಹಿನ್ನಡೆ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ