AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರದಿಂದ ನೂತನ ಇ-ಸಹಮತಿ ತಂತ್ರಾಂಶ ಸಿದ್ಧ; ಸದ್ಯದಲ್ಲೇ ಮುಖ್ಯಮಂತ್ರಿಯಿಂದ ಉದ್ಘಾಟನೆ

ಶಿಕ್ಷಣ ಸಂಸ್ಥೆ, ಪೊಲೀಸ್, ಸಾರಿಗೆ ಇಲಾಖೆಗಳ ದಾಖಲೆಗಳು ಇ- ಸಹಮತಿಯಲ್ಲಿ ಲಭ್ಯವಾಗಲಿವೆ. ಕೆಲವೇ‌ ದಿನಗಳಲ್ಲಿ‌ ಸಿಎಂ ಬಸವರಾಜ ಬೊಮ್ಮಾಯಿ‌ಯವರಿಂದ ಇ-ಸಹಮತಿ ಆ್ಯಪ್ ಉದ್ಘಾಟನೆಯಾಗಲಿದೆ

ರಾಜ್ಯ ಸರ್ಕಾರದಿಂದ ನೂತನ ಇ-ಸಹಮತಿ ತಂತ್ರಾಂಶ ಸಿದ್ಧ; ಸದ್ಯದಲ್ಲೇ ಮುಖ್ಯಮಂತ್ರಿಯಿಂದ ಉದ್ಘಾಟನೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Dec 16, 2021 | 4:07 PM

Share

ಬೆಂಗಳೂರು: ರಾಜ್ಯ ಸರ್ಕಾರ ನೂತನ ತಂತ್ರಾಂಶ ಇ-ಸಹಮತಿಯನ್ನು ಸಿದ್ಧಪಡಿಸಿದೆ. ಇ-ಸಹಮತಿಗೆ ಮಾರ್ಗಸೂಚಿ ಪ್ರಕಟವಾಗಿದ್ದು, ಇನ್ನು ಮುಂದೆ ಜನರ ದಾಖಲೆಗಳ ಮಾಹಿತಿ ಡಿಜಿಟಲೀಕರಣ ಮಾಡಲಾಗುವುದು. ದಾಖಲೆಗಳನ್ನು ಕಂಪನಿಗಳು ವೇರಿಫೈ ಮಾಡಲು ಇ-ಸಹಮತಿ ಆ್ಯಪ್ ಬಳಕೆ ಮಾಡಲಾಗುವುದು. ಜನರ ಅನುಮತಿ‌ ಮೇರೆಗೆ ಹಲವು ಇಲಾಖೆಗಳ ದಾಖಲೆ ವರ್ಗಾವಣೆ ಮಾಡಲಾಗುವುದು.

ಶಿಕ್ಷಣ ಸಂಸ್ಥೆ, ಪೊಲೀಸ್, ಸಾರಿಗೆ ಇಲಾಖೆಗಳ ದಾಖಲೆಗಳು ಇ- ಸಹಮತಿಯಲ್ಲಿ ಲಭ್ಯವಾಗಲಿವೆ. ಕೆಲವೇ‌ ದಿನಗಳಲ್ಲಿ‌ ಸಿಎಂ ಬಸವರಾಜ ಬೊಮ್ಮಾಯಿ‌ಯವರಿಂದ ಇ-ಸಹಮತಿ ಆ್ಯಪ್ ಉದ್ಘಾಟನೆಯಾಗಲಿದೆ ಎಂದು ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಕಾರ್ಯದರ್ಶಿ ರಾಜೀವ್ ಚಾವ್ಲಾ ಹೇಳಿಕೆ ನೀಡಿದ್ದಾರೆ.

ನಮ್ಮ ಇಲಾಖೆ ಇ-ಸಹಮತಿಗೆ ಮಾರ್ಗಸೂಚಿ ಪ್ರಕಟಿಸಿದೆ. ಇನ್ನು ಮುಂದೆ ಜನರು ತಮ್ಮ ದಾಖಲೆಗಳನ್ನು ಸುಲಭವಾಗಿ ವರ್ಗಾಯಿಸಬಹುದು. ಈ ದಾಖಲೆಯನ್ನು ಸಂಸ್ಥೆ ಅಥವಾ ಕಂಪನಿಗಳು ಸಂಬಂಧಪಟ್ಟ ಇಲಾಖೆಯಿಂದ ಧೃಡೀಕರಣಗೊಳಿಸಬಹುದು. ಹಲವಾರು ಇಲಾಖೆಗಳು, ಸಂಸ್ಥೆಗಳು, ಕಂಪನಿಗಳು ಇ-ಸಹಮತಿಯಡಿ ಬರಲಿವೆ. ಇ-ಸಹಮತಿ ವೇದಿಕೆಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತರ ರಾಜ್ಯಗಳಿಗೂ ಈ ವೇದಿಕೆಯನ್ನು ವಿಸ್ತರಿಸುವುದಾಗಿ ಹೇಳಿದ್ದಾರೆ. ತೆಲಂಗಾಣ ಸರ್ಕಾರ ಈಗಾಗಲೇ ನಮ್ಮ ಇಲಾಖೆಯನ್ನು ಸಂಪರ್ಕಿಸಿದ್ದು ಅಳವಡಿಸಿಕೊಳ್ಳಲು ಆಸಕ್ತಿ ತೋರಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ತಂತ್ರಾಂಶದಲ್ಲಿ ಎಡವಟ್ಟು; ಲಸಿಕೆ ಪಡೆಯದಿದ್ದರೂ ಸಿಗುತ್ತಿದೆ ಲಸಿಕೆ ಪಡೆದ ಸರ್ಟಿಫಿಕೆಟ್

ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣ: ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಹಿನ್ನಡೆ

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ