AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರದಿಂದ ನೂತನ ಇ-ಸಹಮತಿ ತಂತ್ರಾಂಶ ಸಿದ್ಧ; ಸದ್ಯದಲ್ಲೇ ಮುಖ್ಯಮಂತ್ರಿಯಿಂದ ಉದ್ಘಾಟನೆ

ಶಿಕ್ಷಣ ಸಂಸ್ಥೆ, ಪೊಲೀಸ್, ಸಾರಿಗೆ ಇಲಾಖೆಗಳ ದಾಖಲೆಗಳು ಇ- ಸಹಮತಿಯಲ್ಲಿ ಲಭ್ಯವಾಗಲಿವೆ. ಕೆಲವೇ‌ ದಿನಗಳಲ್ಲಿ‌ ಸಿಎಂ ಬಸವರಾಜ ಬೊಮ್ಮಾಯಿ‌ಯವರಿಂದ ಇ-ಸಹಮತಿ ಆ್ಯಪ್ ಉದ್ಘಾಟನೆಯಾಗಲಿದೆ

ರಾಜ್ಯ ಸರ್ಕಾರದಿಂದ ನೂತನ ಇ-ಸಹಮತಿ ತಂತ್ರಾಂಶ ಸಿದ್ಧ; ಸದ್ಯದಲ್ಲೇ ಮುಖ್ಯಮಂತ್ರಿಯಿಂದ ಉದ್ಘಾಟನೆ
ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 16, 2021 | 4:07 PM

ಬೆಂಗಳೂರು: ರಾಜ್ಯ ಸರ್ಕಾರ ನೂತನ ತಂತ್ರಾಂಶ ಇ-ಸಹಮತಿಯನ್ನು ಸಿದ್ಧಪಡಿಸಿದೆ. ಇ-ಸಹಮತಿಗೆ ಮಾರ್ಗಸೂಚಿ ಪ್ರಕಟವಾಗಿದ್ದು, ಇನ್ನು ಮುಂದೆ ಜನರ ದಾಖಲೆಗಳ ಮಾಹಿತಿ ಡಿಜಿಟಲೀಕರಣ ಮಾಡಲಾಗುವುದು. ದಾಖಲೆಗಳನ್ನು ಕಂಪನಿಗಳು ವೇರಿಫೈ ಮಾಡಲು ಇ-ಸಹಮತಿ ಆ್ಯಪ್ ಬಳಕೆ ಮಾಡಲಾಗುವುದು. ಜನರ ಅನುಮತಿ‌ ಮೇರೆಗೆ ಹಲವು ಇಲಾಖೆಗಳ ದಾಖಲೆ ವರ್ಗಾವಣೆ ಮಾಡಲಾಗುವುದು.

ಶಿಕ್ಷಣ ಸಂಸ್ಥೆ, ಪೊಲೀಸ್, ಸಾರಿಗೆ ಇಲಾಖೆಗಳ ದಾಖಲೆಗಳು ಇ- ಸಹಮತಿಯಲ್ಲಿ ಲಭ್ಯವಾಗಲಿವೆ. ಕೆಲವೇ‌ ದಿನಗಳಲ್ಲಿ‌ ಸಿಎಂ ಬಸವರಾಜ ಬೊಮ್ಮಾಯಿ‌ಯವರಿಂದ ಇ-ಸಹಮತಿ ಆ್ಯಪ್ ಉದ್ಘಾಟನೆಯಾಗಲಿದೆ ಎಂದು ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಕಾರ್ಯದರ್ಶಿ ರಾಜೀವ್ ಚಾವ್ಲಾ ಹೇಳಿಕೆ ನೀಡಿದ್ದಾರೆ.

ನಮ್ಮ ಇಲಾಖೆ ಇ-ಸಹಮತಿಗೆ ಮಾರ್ಗಸೂಚಿ ಪ್ರಕಟಿಸಿದೆ. ಇನ್ನು ಮುಂದೆ ಜನರು ತಮ್ಮ ದಾಖಲೆಗಳನ್ನು ಸುಲಭವಾಗಿ ವರ್ಗಾಯಿಸಬಹುದು. ಈ ದಾಖಲೆಯನ್ನು ಸಂಸ್ಥೆ ಅಥವಾ ಕಂಪನಿಗಳು ಸಂಬಂಧಪಟ್ಟ ಇಲಾಖೆಯಿಂದ ಧೃಡೀಕರಣಗೊಳಿಸಬಹುದು. ಹಲವಾರು ಇಲಾಖೆಗಳು, ಸಂಸ್ಥೆಗಳು, ಕಂಪನಿಗಳು ಇ-ಸಹಮತಿಯಡಿ ಬರಲಿವೆ. ಇ-ಸಹಮತಿ ವೇದಿಕೆಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತರ ರಾಜ್ಯಗಳಿಗೂ ಈ ವೇದಿಕೆಯನ್ನು ವಿಸ್ತರಿಸುವುದಾಗಿ ಹೇಳಿದ್ದಾರೆ. ತೆಲಂಗಾಣ ಸರ್ಕಾರ ಈಗಾಗಲೇ ನಮ್ಮ ಇಲಾಖೆಯನ್ನು ಸಂಪರ್ಕಿಸಿದ್ದು ಅಳವಡಿಸಿಕೊಳ್ಳಲು ಆಸಕ್ತಿ ತೋರಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ತಂತ್ರಾಂಶದಲ್ಲಿ ಎಡವಟ್ಟು; ಲಸಿಕೆ ಪಡೆಯದಿದ್ದರೂ ಸಿಗುತ್ತಿದೆ ಲಸಿಕೆ ಪಡೆದ ಸರ್ಟಿಫಿಕೆಟ್

ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣ: ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಹಿನ್ನಡೆ

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ