ನಾಲ್ವರು ಹಿರಿಯ ಐಎಎಸ್ ಅಧಿಕಾರಿಗಳಿಗೆ ಬಡ್ತಿ

ಕರ್ನಾಟಕ ಸರಕಾರ ಕೆಲವು ಹಿರಿಯ ಐಎಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಇಂದು ಆದೇಶ ಹೊರಡಿಸಿದೆ. ಇದುವರೆಗೆ ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಪಿಲ್ ಮೋಹನ್ ಅವರನ್ನು ಅದೇ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಬಡ್ತಿ ನೀಡಲಾಗಿದೆ.

ನಾಲ್ವರು ಹಿರಿಯ ಐಎಎಸ್ ಅಧಿಕಾರಿಗಳಿಗೆ ಬಡ್ತಿ
ವಿಧಾನ ಸೌಧ
ಅರುಣ್​ ಕುಮಾರ್​ ಬೆಳ್ಳಿ

Updated on: Dec 31, 2020 | 10:39 PM

ಬೆಂಗಳೂರು: ಕರ್ನಾಟಕ ಸರಕಾರ ಕೆಲವು ಹಿರಿಯ ಐಎಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಇಂದು ಆದೇಶ ಹೊರಡಿಸಿದೆ. ಇದುವರೆಗೆ ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಪಿಲ್ ಮೋಹನ್ ಅವರನ್ನು ಅದೇ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಬಡ್ತಿ ನೀಡಲಾಗಿದೆ.

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಗೌರವ ಗುಪ್ತಾ ಅವರನ್ನು ಅದೇ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಪ್ರಮೋಟ್ ಮಾಡಲಾಗಿದೆ.

ಹಾಗೆಯೇ, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಜಿ ಕುಮಾರ್ ನಾಯಕ್ ಅವರನ್ನು ಒಂದು ದಿನದ ಮಟ್ಟಿಗೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಯಾಗಿ ನಿಯುಕ್ತಿಗೊಳಿಸಲಾಗಿದ್ದು ನಂತರ ಅವರು ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವವಹಿಸಲಿದ್ದಾರೆ.

ಕೇಂದ್ರದ ವಾರ್ತಾ ಮತ್ತು ಪ್ರಚಾರ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ಎರವಲು ಸೇವೆಯಲ್ಲಿರುವ ಅತುಲ್ ಕುಮಾರ್ ತಿವಾರಿ ಅವರಿಗೆ ಜನವರಿ 1, 2021ರಿಂದ ಅನ್ವಯವಾಗುವಂತೆ ಉನ್ನತ ವೇತನ ಶ್ರೇಣಿಗೆ ಬಡ್ತಿ ನೀಡಲಾಗಿದೆ.

ವಿವಾದಿತ ಹಿರಿಯ IPS ಅಧಿಕಾರಿಗಳ ವರ್ಗಾವಣೆ: ಡಿ. ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ಎತ್ತಂಗಡಿ

Published On - 10:07 pm, Thu, 31 December 20

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us