AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆಯಲ್ಲಿ ಮುಸ್ಲಿಂ ಸಮಯದಾಯಕ್ಕೆ ಮೀಸಲಾತಿ: ಮತ್ತೆ ರಾಜಭವನದ ಕದ ತಟ್ಟಿದ ಸರ್ಕಾರ

ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ 4ರಷ್ಟು ಮೀಸಲಾತಿ ಒದಗಿಸುವ ತಿದ್ದುಪಡಿ ಮಸೂದೆಯನ್ನು ಕರ್ನಾಟಕ ಸರ್ಕಾರವು ರಾಜ್ಯಪಾಲರಿಗೆ ಮರುಸಲ್ಲಿಸಿದೆ. ಮೊದಲ ಬಾರಿಗೆ ರಾಜ್ಯಪಾಲರು ಸ್ಪಷ್ಟೀಕರಣ ಕೋರಿ ಮಸೂದೆಯನ್ನು ಅನುಮೋದಿಸಿರಲಿಲ್ಲ. ಈಗ ಹೆಚ್ಚಿನ ಸ್ಪಷ್ಟನೆಗಳೊಂದಿಗೆ ಮಸೂದೆಯನ್ನು ಮತ್ತೆ ಸಲ್ಲಿಸಲಾಗಿದೆ. ವಿರೋಧ ಪಕ್ಷಗಳು ಈ ಮಸೂದೆಯನ್ನು ಅಸಂವಿಧಾನಿಕ ಎಂದು ಟೀಕಿಸಿವೆ.

ಗುತ್ತಿಗೆಯಲ್ಲಿ ಮುಸ್ಲಿಂ ಸಮಯದಾಯಕ್ಕೆ ಮೀಸಲಾತಿ: ಮತ್ತೆ ರಾಜಭವನದ ಕದ ತಟ್ಟಿದ ಸರ್ಕಾರ
ಸಿದ್ದರಾಮಯ್ಯ, ಥವಾರ್​ ಚಂದ್​ ಗೆಹ್ಲೋಟ್​
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ|

Updated on:May 27, 2025 | 3:10 PM

Share

ಬೆಂಗಳೂರು, ಮೇ 27: ಮುಸ್ಲಿಂ (Muslim) ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಶೇ 4 ರಷ್ಟು ಮೀಸಲಾತಿ (4% Reservation to Muslims) ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ತಿದ್ದುಪಡಿ ಮಸೂದೆಯನ್ನು ಅನುಮೋದಿಸುವಂತೆ ರಾಜ್ಯ ಸರ್ಕಾರ ಮತ್ತೆ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರ ಮೊರೆ ಹೋಗಿದೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಈ ಹಿಂದೆ ರಾಜ್ಯ ಸರ್ಕಾರದ ಈ ವಿಧೇಯಕಕ್ಕೆ ಅನುಮೋದನೆ ನೀಡಿರಲಿಲ್ಲ. ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಸ್ಪಷ್ಟನೆ ಕೇಳಿದ್ದರು. ಜೊತೆಗೆ, ಮಸೂದೆ ಅನುಮೋದನೆಗಾಗಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು.

ಸ್ಪಷ್ಟನೆ ಕೇಳಿದ್ದ ರಾಜ್ಯಪಾಲರು

ಈ ವಿಧೇಯಕ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕಾರಗೊಂಡಿತ್ತು. ನಂತರ ರಾಜ್ಯಪಾಲರ ಬಳಿ ಅಂಗೀಕಾರಕ್ಕೆ ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲರು ಅನುಮೋದಿಸದೆ ಸರ್ಕಾರಕ್ಕೆ ಹೆಚ್ಚಿನ ಸ್ಪಷ್ಟನೆ ಕೇಳಿದ್ದರು. ಇದೀಗ, ರಾಜ್ಯ ಸರ್ಕಾರ ಹೆಚ್ಚಿನ ಸ್ಪಷ್ಟನೆಗಳೊಂದಿಗೆ ರಾಜ್ಯಪಾಲರಿಗೆ ಮತ್ತೆ ವಿಧೇಯಕ ಕಳುಹಿಸಿದ್ದು, ಅನುಮೋದಿಸುವಂತೆ ಮನವಿ ಮಾಡಿದೆ.

ರಾಜ್ಯಪಾಲರು ಕೇಳಿದ್ದ ಸ್ಪಷ್ಟನೆ ಏನು?

“ಸಂವಿಧಾನವು ಧರ್ಮದ ಆಧಾರದ ಮೇಲೆ ಮೀಸಲಾತಿಗೆ ಅವಕಾಶ ನೀಡುವುದಿಲ್ಲ. ಮುಸ್ಲಿಮರನ್ನು ಮಾತ್ರ ಒಳಗೊಂಡ ಹಿಂದುಳಿದ ವರ್ಗ ವರ್ಗ-II(B)ಗೆ 4% ಮೀಸಲಾತಿಯನ್ನು ಒದಗಿಸುವ ಪ್ರಸ್ತಾವಿತ ತಿದ್ದುಪಡಿಯನ್ನು ಧರ್ಮದ ಆಧಾರದ ಮೇಲೆ ಸಮುದಾಯಕ್ಕೆ ನೀಡಿದ ಮೀಸಲಾತಿ ಎಂದು ಅರ್ಥೈಸಿಕೊಳ್ಳಬಹುದು” ಎಂದು ರಾಜಭವನದ ಹೇಳಿಕೆಯಲ್ಲಿ ತಿಳಿಸಲಾಗಿತ್ತು. 15 ಮತ್ತು 16ನೇ ವಿಧಿಗಳು ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ನಿಷೇಧಿಸುತ್ತವೆ. ಯಾವುದೇ ದೃಢೀಕರಣ ಕ್ರಮವು ಸಾಮಾಜಿಕ-ಆರ್ಥಿಕ ಅಂಶಗಳನ್ನು ಆಧರಿಸಿರಬೇಕು” ಎಂದು ಒತ್ತಿಹೇಳುವ ಸುಪ್ರೀಂ ಕೋರ್ಟ್ ತೀರ್ಪನ್ನು ರಾಜ್ಯಪಾಲರು ಉಲ್ಲೇಖಿಸಿದ್ದರು.

ಇದನ್ನೂ ಓದಿ
Image
ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿಧೇಯಕ ಮಂಡನೆ: ವಿಧೇಯಕದಲ್ಲೇನಿದೆ?
Image
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
Image
ಸದ್ದಿಲ್ಲದೇ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಿಸಿದ ಸಿದ್ದರಾಮಯ್ಯ!
Image
ವಕ್ಫ್ ಆಸ್ತಿ, ಮುಸ್ಲಿಂ ಸ್ಮಾಶನಗಳ ರಕ್ಷಣೆಗೆ 150 ಕೋಟಿ ರೂ: ಸಿದ್ದರಾಮಯ್ಯ

ಇದನ್ನೂ ಓದಿ: ಮುಸ್ಲಿಮರ ಮೀಸಲಾತಿ ಬಗ್ಗೆ ಜೆಡಿಎಸ್ ನಿಲುವೇನು? ಕೊನೆಗೂ ಸ್ಪಷ್ಟನೆ ನೀಡಿದ ಹೆಚ್​ಡಿ ಕುಮಾರಸ್ವಾಮಿ

ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ಉದ್ದೇಶವನ್ನು ಹೊಂದಿರುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆಯನ್ನು ಮಾರ್ಚ್‌ನಲ್ಲಿ ನಡೆದ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ರಾಜ್ಯದ ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಈ ಮಸೂದೆಯನ್ನು “ಅಸಂವಿಧಾನಿಕ” ಎಂದು ಟೀಕಿಸಿದ್ದವು. ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಈ ಮಸೂದೆಯನ್ನು ವಿರೋಧಿಸಿ ಎರಡೂ ಪಕ್ಷಗಳು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದವು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Tue, 27 May 25

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?