AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರದ ವಿರೋಧವಿದೆ’: ಕೇಂದ್ರಕ್ಕೆ ಸಿಎಂ ಬೊಮ್ಮಾಯಿ ಸ್ಪಷ್ಟನೆ

Kasturi Rangan Report: ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಪಶ್ಚಿಮಘಟ್ಟ ಭಾಗದ ಜನರ ವಿರೋಧವಿದೆ ಎಂದು ಕೇಂದ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

‘ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರದ ವಿರೋಧವಿದೆ’: ಕೇಂದ್ರಕ್ಕೆ ಸಿಎಂ ಬೊಮ್ಮಾಯಿ ಸ್ಪಷ್ಟನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 04, 2021 | 9:27 PM

Share

ಬೆಂಗಳೂರು: ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಆ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಆ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು. ಅವರು ಇಂದು ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರು ನಡೆಸಿದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ರಾಜ್ಯದ ಈ ನಿಲುವನ್ನು ಸ್ಪಷ್ಟಪಡಿಸಿದರು. ಪಶ್ಚಿಮ ಘಟ್ಟ ಪ್ರದೇಶದ ನಿವಾಸಿಗಳು, ಅಧಿಕಾರಿಗಳು ಮತ್ತು ಸಂಬಂಧಪಟ್ಟ ಎಲ್ಲರೊಂದಿಗೆ ಕೂಲಂಕಷವಾಗಿ ಸಮಾಲೋಚನೆ ನಡೆಸಿ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂಬುದನ್ನು ಸಿಎಂ ಬೊಮ್ಮಾಯಿ ಸಭೆಯ ಗಮನಕ್ಕೆ ತಂದರು.

‘‘ಕರ್ನಾಟಕ ರಾಜ್ಯ ಅತಿ ಹೆಚ್ಚು ಅರಣ್ಯ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನಮ್ಮ ಸರ್ಕಾರ ಹಾಗೂ ಜನತೆ ಪಶ್ಚಿಮ ಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರಿದೆ. ಯಾವುದೇ ಕಾಯ್ದೆ ಕಾನೂನು ಜಾರಿಯಾಗುವ ಮುನ್ನವೂ ಆ ಭಾಗದ ಜನರು ಪ್ರಕೃತಿಗೆ ಸಹಜವಾದ ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು, ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದಾರೆ. ಈ ಮೂಲಕ ಪಶ್ಚಿಮ ಘಟ್ಟದ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಬಂದಿದ್ದಾರೆ. ಈಗಾಗಲೇ ಜೀವ ವೈವಿಧ್ಯ ಸಂರಕ್ಷಣೆ ಕಾಯ್ದೆ, ಅರಣ್ಯ ಸಂರಕ್ಷಣೆ ಕಾಯ್ದೆ ಮೊದಲಾದ ಹಲವಾರು ಕಾನೂನುಗಳಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಕಾನೂನು ಜಾರಿಗೆ ತರುವ ಮೂಲಕ ಈ ಭಾಗದ ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ’’ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಉಪಗ್ರಹ ಸಮೀಕ್ಷೆಯ ಆಧಾರದಲ್ಲಿ ಕಸ್ತೂರಿ ರಂಗನ್ ವರದಿ ರೂಪಿಸಲಾಗಿದೆ. ಆದರೆ ವಸ್ತುಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಪ್ರತಿ ಎಕರೆಯನ್ನು ಪ್ರತ್ಯಕ್ಷವಾಗಿ ಸಮೀಕ್ಷೆ ನಡೆಸುವುದರಿಂದ ಜನರ ಪರಿಸರ ಸ್ನೇಹಿ ಜೀವನಶೈಲಿಯನ್ನು ಗಮನಿಸಬಹುದಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಈ ಹಿನ್ನೆಲೆಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ತಿಳಿಸಿದರು. ಸಚಿವರಾದ ಅರಗ ಜ್ಞಾನೇಂದ್ರ , ಆನಂದ್ ಸಿಂಗ್, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸೇರಿದಂತೆ ಇತರರು ವರ್ಚುವಲ್ ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:

Covid 19 Karnataka Update: ಒಮಿಕ್ರಾನ್ ಆತಂಕದ ನಡುವೆ ಕರ್ನಾಟಕದಲ್ಲಿ 397 ಮಂದಿಗೆ ಕೊವಿಡ್ ಸೋಂಕು, ನಾಲ್ವರು ಸಾವು

Omicron in India: ಭಾರತದಲ್ಲಿ ಈಗಾಗಲೇ ಹರಡಿದೆ ಒಮಿಕ್ರಾನ್, ಆದರೆ ನಾವು ಹೆದರಬೇಕಿಲ್ಲ: ವಿಜ್ಞಾನಿ ಡಾ ರಾಕೇಶ್ ಮಿಶ್ರಾ

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ