AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ; ಯಾವ ನಿಗಮಕ್ಕೆ ಎಷ್ಟು ಸಿಕ್ತು?

ಈವರೆಗೆ 4 ನಿಗಮಗಳಲ್ಲಿ 29,32,49,151 ಮಹಿಳೆಯರು ಪ್ರಯಾಣಿಸಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ನಾಲ್ಕು ನಿಗಮಗಳು ಒಟ್ಟು 6,87,49,57,753 ರೂ., ಮೌಲ್ಯದ ಶೂನ್ಯ ಟಿಕೆಟ್ ವಿತರಣೆ ಮಾಡಿವೆ.

ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ; ಯಾವ ನಿಗಮಕ್ಕೆ ಎಷ್ಟು ಸಿಕ್ತು?
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Aug 01, 2023 | 10:57 PM

Share

ಬೆಂಗಳೂರು, ಆಗಸ್ಟ್ 1: ಶಕ್ತಿ ಯೋಜನೆ (Shakti Scheme) ಅಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್​​ಗಳಲ್ಲಿ ವಿತರಿಸಲಾಗಿರುವ ಟಿಕೆಟ್​​ನ ಒಟ್ಟು ಮೊತ್ತದ ಮೊದಲ ಕಂತನ್ನು ಕರ್ನಾಟಕ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ. ನಾಲ್ಕೂ ನಿಗಮಗಳು ಒಟ್ಟಾಗಿ ವಿತರಿಸಿರುವ ಶೂನ್ಯ ಟಿಕೆಟ್‌ ದರ 6,87,49,57,753 ರೂ. ಆಗಿದ್ದು, ಈ ಮೊತ್ತದ ಒಂದು ಪಾಲನ್ನು ಅಥವಾ ಮೊದಲ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ. ನಿಗಮಗಳಿಗೆ ಮೊದಲ ಕಂತಿನ ಹಣವಾಗಿ 125.48 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್‌ಆರ್‌ಟಿಸಿ) 47.15 ಕೋಟಿ ರೂ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 21.85 ಕೋಟಿ ರೂ., ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWRTC) 32.57 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ (KKRTC) 23.90 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನಾಲ್ಕು ನಿಗಮಗಳಿಗೂ ಪ್ರತೇಕವಾಗಿ ಹಣ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ, ಧಾರವಾಡ, ಬೆಳಗಾವಿಯಿಂದ ಜಲಪಾತಗಳ ವೀಕ್ಷಣೆಗಾಗಿ ವಿಶೇಷ ಬಸ್ ವ್ಯವಸ್ಥೆ

ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಜೂನ್ 11ರಂದು ಚಾಲನೆ ನೀಡಲಾಗಿತ್ತು. ಈವರೆಗೆ 4 ನಿಗಮಗಳಲ್ಲಿ 29,32,49,151 ಮಹಿಳೆಯರು ಪ್ರಯಾಣಿಸಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ನಾಲ್ಕು ನಿಗಮಗಳು ಒಟ್ಟು 6,87,49,57,753 ರೂ., ಮೌಲ್ಯದ ಶೂನ್ಯ ಟಿಕೆಟ್ ವಿತರಣೆ ಮಾಡಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ