Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಮುಜರಾಯಿ ಇಲಾಖೆ ಅರ್ಚಕರಿಗೆ ಗುಡ್ ನ್ಯೂಸ್, ತಸ್ತಿಕ್​​ ಹಣ ರಿಲೀಸ್​

Karnataka government releases priests tastik: ಕರ್ನಾಟಕದ ಅರ್ಚಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. 27000 ದೇವಾಲಯಗಳ ಅರ್ಚಕರಿಗೆ ತಸ್ತಿಕ್ ಬಿಡುಗಡೆ ಮಾಡಿದೆ.

ಕರ್ನಾಟಕದ ಮುಜರಾಯಿ ಇಲಾಖೆ ಅರ್ಚಕರಿಗೆ ಗುಡ್ ನ್ಯೂಸ್, ತಸ್ತಿಕ್​​ ಹಣ ರಿಲೀಸ್​
ವಿಧಾನಸೌಧ
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on: Sep 03, 2023 | 10:59 AM

ಬೆಂಗಳೂರು, (ಸೆಪ್ಟೆಂಬರ್, 03): ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಅರ್ಚಕರ(Temples priests) ಭತ್ಯೆಯನ್ನು ರಾಜ್ಯ ಸರ್ಕಾರ(Karnataka government) ಬಿಡುಗಡೆ ಮಾಡಿದೆ. ಧಾರ್ಮಿಕ ದತ್ತಿ ಇಲಾಖೆ ದೇಗುಲಗಳ ಅರ್ಚಕ ಭತ್ಯೆಯ ಒಟ್ಟು 77.85 ಕೋಟಿ ರೂ. ಬಿಡುಗಡೆಗೊಳಿಸಿದೆ.  ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿನ ಸಿ ದರ್ಜೆ ದೇವಸ್ಥಾನಗಳ ಅರ್ಚಕರು ತಸ್ತಿಕ್​ ಹಣವನ್ನು ತಹಶೀಲ್ದಾರ್ ಮೂಲಕ ಪಡೆಯುತ್ತಿದ್ದಾರೆ. ಗುಮಾಸ್ತು, ಶಿರಸ್ತೇದಾರರು, ಟ್ರಿಜರಿ ಅಧಿಕಾರಿಗಳು ಕಮೀಷನ್​ ಬೇಡಿಕೆ ಇಡುತ್ತಿರುವ ಆರೋಪ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ನೇರವಾಗಿ ಅರ್ಚಕರ ಬ್ಯಾಂಕ್​ ಖಾತೆಗಳಿಗೆಗೆ ಹಣ ಜಮೆ ಮಾಡುವುದಾಗಿ ಹೇಳಿದ್ದರು. ಇದೀಗ ಸರ್ಕಾರ ಹಣ ಬಿಡುಗಡೆ ಮಾಡಿದ್ದು, ಇದನ್ನು ನೇರವಾಗಿ ಅರ್ಚಕರ ಖಾತೆಗೆ ಜಮೆ ಮಾಡುತ್ತಾ ಅಥವಾ ತಹಶೀಲ್ದಾರ್​ ಕಚೇರಿಗೆ ಕಳುಹಿಸುತ್ತಾ ಎನ್ನುವುದು ತಿಳಿದುಬರಬೇಕಿದೆ.

ಕಮೀಷನ್​ ಆರೋಪ ಮಾಡಿದ್ದ ಅರ್ಚಕರ ಸಂಘ

ರಾಜ್ಯದ ದೇವಸ್ಥಾನಗಳ ಪೂಜಾ ಕಾರ್ಯ ಇತ್ಯಾದಿಗಳ ಕೆಲಸಕ್ಕೆಂದು ಸರ್ಕಾರ ಬಿಡುಗಡೆ ಮಾಡುವ ‘ತಸ್ತಿಕ್‌’ ಹಣಕ್ಕೂ ಖಜಾನೆ ಅಧಿಕಾರಿಗಳು ಪರ್ಸೆಂಟೇಜ್‌ ಕೇಳುತ್ತಿದ್ದಾರೆಂದು ಮುಜರಾಯಿ ಇಲಾಖೆಗೆ ಒಳಪಟ್ಟದೇವಸ್ಥಾನಗಳ ಅರ್ಚಕರ ಸಂಘ ಇತ್ತೀಚೆಗೆ ಆರೋಪಿಸಿತ್ತು. ಈ ಕುರಿತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮುಜರಾಯಿ ಇಲಾಖೆಯ ಸಿ ದರ್ಜೆ ದೇವಸ್ಥಾನಗಳ ಅರ್ಚಕರ ಸಂಘ ಪತ್ರ ಬರೆದಿತ್ತು. ಸರ್ಕಾರ ಪ್ರತಿ ವರ್ಷ ದೇವಸ್ಥಾನಗಳಲ್ಲಿ ನಿತ್ಯ ಪೂಜಾ ಕಾರ್ಯ ಇತ್ಯಾದಿ ಸಣ್ಣ ಪುಟ್ಟಗಳ ಕೆಲಸಗಳಿಗೆ ತಸ್ತಿಕ್‌ ಹಣ ಬಿಡುಗಡೆ ಮಾಡುತ್ತಿದೆ. ಈ ಹಣ ಬಿಡುಗಡೆ ಮಾಡಲು ಖಜಾನೆ ಅಧಿಕಾರಿಗಳಿಗೆ ಶೇ.20ರಷ್ಟುಕಮಿಷನ್‌ ಕೇಳುತ್ತಿದ್ದಾರೆ. ಕಮಿಷನ್‌ ಕೊಡದೇ ಇದ್ದರೆ ಹಣ ಬಿಡುಗಡೆ ಮಾಡುತ್ತಿಲ್ಲ. ಹಣ ಬಿಡುಗಡೆಗೂ ದಲ್ಲಾಳಿಗಳಿಗೆ ಹಣ ಕೊಡಬೇಕಾಗಿದೆ. ಆದ್ದರಿಂದ ಕಮಿಷನ್‌ ವ್ಯವಹಾರವನ್ನು ಸರ್ಕಾರ ತಡೆಯಬೇಕು ಎಂದು ಆಗ್ರಹಿಸಿತ್ತು. ಅರ್ಚಕರ ಮನವಿಗೆ ಸ್ಪಂದಿಸಿದ್ದ ಸಚಿವ ರಾಮಲಿಂಗರೆಡ್ಡಿ. ಇನ್ಮುಂದೆ ಅರ್ಚಕರ ಖಾತೆಗೆ ನೇರವಾಗಿ ತಸ್ತಿಕ್‌ ಹಣ ಜಮೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ