AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಗುಡ್​ನ್ಯೂಸ್: ರಾಜ್ಯ ಸರ್ಕಾರದಿಂದ ಬರ ಪರಿಹಾರ ಹಣ ಬಿಡುಗಡೆ, ನಿಮ್ಮ ಜಿಲ್ಲೆಗೆ ಎಷ್ಟು?

Drought relief fund : ಈ ಬಾರಿ ಮಳೆ ಕೊರತೆಯಿಂದ ಬೆಳೆಗಳು ಕೈಕೊಟ್ಟಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಮಳೆ ಬೆಳೆ ಇಲ್ಲದೇ ರಾಜ್ಯದೆಲ್ಲೆಡೆ ತೀವ್ರ ಬರ ಆವರಿಸಿದೆ. ಇದಕ್ಕೆ ಇದೀಗ ರಾಜ್ಯ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ.

ರೈತರಿಗೆ ಗುಡ್​ನ್ಯೂಸ್: ರಾಜ್ಯ ಸರ್ಕಾರದಿಂದ ಬರ ಪರಿಹಾರ ಹಣ ಬಿಡುಗಡೆ, ನಿಮ್ಮ ಜಿಲ್ಲೆಗೆ ಎಷ್ಟು?
ವಿಧಾನಸೌಧ
ಪ್ರಸನ್ನ ಗಾಂವ್ಕರ್​
| Edited By: |

Updated on:Nov 03, 2023 | 5:29 PM

Share

ಬೆಂಗಳೂರು, (ನವೆಂಬರ್ 03): ಕರ್ನಾಟಕರ ಸರ್ಕಾರ ಬರ ಪರಿಹಾರ ಹಣ (Drought relief fund ) ಬಿಡುಗಡೆ ಮಾಡಿದೆ. 31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ ಎಸ್.ಡಿ.ಆರ್.ಎಫ್ ಅಡಿಯಲ್ಲಿ ಇಂದು (ನವೆಂಬರ್ 03) 324 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಮುಂಗಾರು ವೈಫಲ್ಯದಿಂದ ರೈತರಿಗೆ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಕಲ ರೈತರು ಬೆಳೆದಿದ್ದರೂ ನೀರಿನ ಕೊರತೆಯಿಂದ ಬೆಳೆ ಒಣಗಿ ಹೋಗಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದ ಹಲವು ರೈತ ಸಂಘಟನೆಗಳು ಬೆಳೆ ಪರಿಹಾರ ಘೋಷಣೆ ಮಾಡಿಬೇಕೆಂದು ಆಗ್ರಹಿಸಿದ್ದವು. ಅದರಂತೆ ಇದೀಗ ರಾಜ್ಯ ಸರ್ಕಾರ ಬೆಳೆ ಪರಿಹಾರಕ್ಕೆ ಅನುದಾನ ರಿಲೀಸ್ ಮಾಡಿದ್ದು, ಬೆಳೆ ಕಳೆದುಕೊಂಡು ಕಂಗಾಲಾಗಿರುವ ಅರ್ಹ ರೈತರಿಗೆ ಸರ್ಕಾರದ ಈ ಬರ ಪರಿಹಾರ ಸಿಗುವಂತಾಗಲಿ. ಹಾಗಾದ್ರೆ ಯಾವ ಜಿಲ್ಲೆಗೆ ಎಷ್ಟು ಬರ ಪರಿಹಾರ ಹಣ ನೀಡಿದೆ ಎನ್ನುವ ವಿವರ ಈ ಕೆಳಗಿನಂತಿದೆ.

ರಾಜ್ಯದ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಕೇಂದ್ರ ಸರ್ಕಾರಕ್ಕೆ ಬರಪರಿಹಾರವಾಗಿ 17 ಸಾವಿರ ಕೋಟಿ ರೂ. ನೀಡುವಂತೆ ಬೇಡಿಕೆ ಇಟ್ಟಿದೆ. ಆದ್ರೆ ಕೇಂದ್ರ ಇದುವರೆಗೂ ಇನ್ನೂ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ರೈತರಿಗಾಗಿ ಸಣ್ಣ ಪ್ರಮಾಣದ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಮೋದಿ ಅವರೇ ನೀವು ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ಕೇಂದ್ರದ ವಿರುದ್ಧ ಸಿಎಂ ಗರಂ 

ಯಾವ ಜಿಲ್ಲೆಗೆ ಎಷ್ಟು ಅನುದಾನ..?

  • ಬೆಂಗಳೂರು ನಗರ- 7.50 ಕೋಟಿ ರೂಪಾಯಿ
  • ಬೆಂಗಳೂರು ಗ್ರಾಮಾಂತರ- 6 ಕೋಟಿ ರೂ.
  • ರಾಮನಗರ-7.50 ಕೋಟಿ ರೂ.
  • ಕೋಲಾರ – 9 ಕೋಟಿ ರೂ.
  • ಚಿಕ್ಕಬಳ್ಳಾಪುರ- 9 ಕೋಟಿ ರೂ.
  • ತುಮಕೂರು-15 ಕೋಟಿ ರೂ.
  • ಚಿತ್ರದುರ್ಗ- 9 ಕೋಟಿ ರೂ.
  • ದಾವಣಗೆರೆ- 9 ಕೋಟಿ ರೂ.
  • ಚಾಮರಾಜನಗರ-7.50 ಕೋಟಿ ರೂ.
  • ಮೈಸೂರು – 13.50 ಕೋಟಿ ರೂ.
  • ಮಂಡ್ಯ- 10.50 ಕೋಟಿ ರೂ.
  • ಬಳ್ಳಾರಿ- 7.50 ಕೋಟಿ ರೂ.
  • ಕೊಪ್ಪಳ- 10.50 ಕೋಟಿ ರೂ.
  • ರಾಯಚೂರು- 9 ಕೋಟಿ ರೂ.
  • ಕಲಬುರಗಿ- 16.50 ಕೋಟಿ ರೂ.
  • ಬೀದರ್- 4.50 ಕೋಟಿ ರೂ.
  • ಬೆಳಗಾವಿ- 22.50 ಕೋಟಿ ರೂ.
  • ಬಾಗಲಕೋಟೆ- 13.50 ಕೋಟಿ. ರೂ.
  • ವಿಜಯಪುರ- 18 ಕೋಟಿ ರೂ.
  • ಗದಗ-10.50 ಕೋಟಿ ರೂ.
  • ಹಾವೇರಿ-12 ಕೋಟಿ.
  • ಧಾರವಾಡ-12 ಕೋಟಿ ರೂ.
  • ಶಿವಮೊಗ್ಗ-10.50 ಕೋಟಿ ರೂ.
  • ಹಾಸನ- 12 ಕೋಟಿ ರೂ.
  • ಚಿಕ್ಕಮಗಳೂರು-12 ಕೋಟಿ ರೂ
  • ಕೊಡಗು-7.50 ಕೋಟಿ ರೂ.
  • ದಕ್ಷಿಣ ಕನ್ನಡ- 3 ಕೋಟಿ ರೂ.
  • ಉಡುಪಿ- 4.50 ಕೋಟಿ ರೂ.
  • ಉತ್ತರ ಕನ್ನಡ-16.50 ಕೋಟಿ ರೂ.
  • ಯಾದಗಿರಿ-9 ಕೋಟಿ ರೂ.
  • ವಿಜಯನಗರ-9 ಕೋಟಿ ರೂ.

Published On - 11:52 am, Fri, 3 November 23

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?