
ಬೆಂಗಳೂರು, (ಜುಲೈ 01): ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯು ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೆಚ್ಚು ಜನ ಸೇರುವ ಕಾರ್ಯಕ್ರಮಗಳಲ್ಲಿ ಜನಜಂಗುಳಿ ನಿಯಂತ್ರಣಕ್ಕೆ ಈ ಮಾರ್ಗಸೂಚಿ ಜಾರಿಗೆ ತರಲಾಗಿದ್ದು, ಯಾವುದೇ ಬಹಳಷ್ಟು ಸಂಖ್ಯೆಯಲ್ಲಿ ಜನ ಸೇರುವ ಸಭೆ ಸಮಾರಂಭಗಳಿಗೆ ಈ ಮಾರ್ಗಸೂಚಿಗಳು ಅನ್ವಯವಾಗಲಿದೆ. ಹಾಗಾದ್ರೆ, ಮಾರ್ಗಸೂಚಿಯಲ್ಲಿ ಏನೆಲ್ಲಾ ಅಂಶಗಳು ಇವೆ ಎನ್ನುವುದು ಈ ಕೆಳಗಿನಂತಿದೆ ನೋಡಿ.
ಹಬ್ಬಗಳು, ಪ್ರತಿಭಟನೆಗಳು, ಮೆರವಣಿಗೆಗಳು ಮತ್ತು ಕ್ರೀಡಾ ಕೂಟಗಳಂತಹ ಬೃಹತ್ ಜನ ಸಮುದಾಯ ಸೇರುವ ಯಾವುದೇ ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಭದ್ರತೆ, ಕಾನೂನು-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಮಾರ್ಗಸೂಚಿ ಜಾರಿಗೆ ತರಲಾಗಿದೆ.
Karnataka government releases SOPs for crowd control events and mass gatherings.
The SoPs mention that Police responses must prioritise life safety, protection of rights, prevention of property damage, and de-escalation of potential conflicts. Modern gatherings are often… pic.twitter.com/huDIRBent7
— ANI (@ANI) July 1, 2025
ಸಾರ್ವಜನಿಕ ಕಾರ್ಯಕ್ರಮಕ್ಕೂ ಮುನ್ನ ಸ್ಥಳದ ಸಂಪೂರ್ಣ ಪರಿಶೀಲನೆ ಮತ್ತು ಕಾರ್ಯಕ್ರಮ ಆಯೋಜಕರ ಸಹಯೋಗದೊಂದಿಗೆ ವಿವರವಾದ ಯೋಜನೆ ರಚಿಸುವುದು ಈಗ ಕಡ್ಡಾಯ. ಕಾರ್ಯಕ್ರಮ ನಡೆಯುವ ಸ್ಥಳದ ಸಾಮರ್ಥ್ಯ, ತುರ್ತು ನಿರ್ಗಮನ ಮಾರ್ಗಗಳ ಲಭ್ಯತೆ ಮತ್ತು ತಂತ್ರಜ್ಞಾನದ ಬಳಕೆಯ ಸಾಧ್ಯತೆಗಳನ್ನು ಪರಿಶೀಲಿಸಲೇಬೇಕು. ಜನಸಂದಣಿ ನಿರ್ವಹಣೆಗೆ ಪೊಲೀಸರ ಹೊಣೆಗಾರಿಕೆಗಳು, ಟ್ರಾಫಿಕ್ ನಿಯಂತ್ರಣ, ವೈದ್ಯಕೀಯ ನೆರವು ಮತ್ತು ಟಿಕೆಟ್ ವ್ಯವಸ್ಥೆಗಳನ್ನು ಮಾಡಲೇಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಪ್ರತಿಭಟನೆ ಅಥವಾ ಹವಾಮಾನ ದುರಂತಗಳಂತಹ ಅನಿರೀಕ್ಷಿತ ಪರಿಸ್ಥಿತಿಗಳಿಗೆ ತಯಾರಿ ನಡೆಸಲು ಸಿಮ್ಯುಲೇಷನ್ ಡ್ರಿಲ್ಗಳನ್ನು ನಡೆಸುವ ಮೂಲಕ ರಕ್ಷಣಾ ತಂಡಗಳ ಜವಾಬ್ದಾರಿಗಳನ್ನು ಮೊದಲೇ ಗುರುತಿಸಬೇಕು. ಯಾವುದೇ ಘಟನೆಯ ಸಮಯದಲ್ಲಿ, ಪೊಲೀಸರು ಅನಗತ್ಯ ತಕರಾರುಗಳನ್ನು ತಪ್ಪಿಸಿ, ಸ್ಥಳೀಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ಜನಸಂದಣಿ ನಿಯಂತ್ರಿಸಲು ಅಥವಾ ಚದುರಿಸಲು ಬಲವನ್ನು ಬಳಸುವ ಅನಿವಾರ್ಯತೆ ಬಂದಾಗ, ಮೂರು ಬಾರಿ ಎಚ್ಚರಿಕೆಗಳನ್ನು ನೀಡಿದ ನಂತರವೇ ಕಾನೂನು ರೀತಿ ನಡೆದಯಕೊಳ್ಳಬೇಕು ಮತ್ತು ಕಾನೂನುಬದ್ಧ ಬಂಧನಕ್ಕೆ ಮುಂದಾಗಬೇಕೆಂದು ಎಂದು ಮಾರ್ಗಸೂಚಿಯಲ್ಲಿದೆ.
ಜನಸಂದಣಿಯ ಸಂಚಾರ, ತೆಗೆದುಕೊಂಡ ನಿರ್ಧಾರಗಳು ಮತ್ತು ನೀಡಿದ ಎಚ್ಚರಿಕೆಗಳನ್ನು ಆಡಿಯೋ/ವಿಡಿಯೋ ದಾಖಲೆಗಳ ಮೂಲಕ ದಾಖಲಿಸಬೇಕು. ಕರ್ನಾಟಕ ಪೊಲೀಸ್ ಕಾಯಿದೆ (KP Act) ಮತ್ತು ಬಿಎನ್ಎಸ್ಎಸ್ (BNSS – CrPC) ಪಾಲನೆಯ ಮೂಲಕ ಸಾರ್ವಜನಿಕ ಭದ್ರತೆ, ಕಾನೂನು ಸುವ್ಯವಸ್ಥೆ ಮತ್ತು ಮಾನವ ಘನತೆ ಎತ್ತಿಹಿಡಿಯುವ ಗುರಿ ಹೊಂದಿದೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:03 pm, Tue, 1 July 25