AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ರೆಮ್​ಡೆಸಿವಿರ್ ಇಂಜೆಕ್ಷನ್ ಅಭಾವ ಹೆಚ್ಚಳ; ಅವಧಿ ಮುಗಿದ ಇಂಜೆಕ್ಷನ್ ಮರುಬಳಕೆಗೆ ಅನುಮತಿ ನೀಡಿದ ಸರ್ಕಾರ

ಏಪ್ರಿಲ್ 5 ರಂದು ಅವಧಿ ಮುಗಿದ ರೆಮ್​ಡೆಸಿವಿರ್​ ಇಂಜೆಕ್ಷನ್ ಮೇಲೆ ಅಕ್ಟೋಬರ್ 5ರ ವರೆಗೂ ಅವಧಿ ಎಂದು ತೋರಿಸಲು ಸ್ಟಿಕರ್ ಅಂಟಿಸಲಾಗ್ತಿದೆ ಎಂಬ ಮಾತು ಕೇಳಿಬಂದಿದೆ.

ರಾಜ್ಯದಲ್ಲಿ ರೆಮ್​ಡೆಸಿವಿರ್ ಇಂಜೆಕ್ಷನ್ ಅಭಾವ ಹೆಚ್ಚಳ; ಅವಧಿ ಮುಗಿದ ಇಂಜೆಕ್ಷನ್ ಮರುಬಳಕೆಗೆ ಅನುಮತಿ ನೀಡಿದ ಸರ್ಕಾರ
ರೆಮ್​​ಡೆಸಿವಿರ್​ ಚುಚ್ಚುಮದ್ದು
Follow us
preethi shettigar
|

Updated on:Apr 22, 2021 | 12:06 PM

ಬೆಂಗಳೂರು: ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿದ್ದು, ಕರ್ನಾಟಕದಲ್ಲಂತೂ ಪರಿಸ್ಥಿತಿ ಕೈ ಮೀರುತ್ತಿದೆ. ಒಂದೆಡೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇನ್ನೊಂದೆಡೆ ಪರಣ ಪ್ರಮಾಣವೂ ಜಅಸ್ತಿ ಆಗುತ್ತಿರುವುದು ಆತಂಕ ಸೃಷ್ಟಿಸಿದೆ. ಈ ನಡುವೆ ಕೊರೊನಾ ಸೋಂಕಿನಿಂದ ಗಂಭೀರಾವಸ್ಥೆಗೆ ತಲುಪಿದವರಿಗೆ ಸಂಜೀವಿನಿ ಎನ್ನಲಾಗುತ್ತಿದ್ದ ರೆಮ್​ಡೆಸಿವಿರ್ ಇಂಜೆಕ್ಷನ್ ಕೊರತೆಯೂ ತಲೆದೋರಿದೆ. ರಾಜ್ಯದಲ್ಲಿ ರೆಮ್​ಡೆಸಿವಿರ್ ಅಭಾವ ಹೆಚ್ಚಾಗಿರುವುದರಿಂದ ಕಂಗೆಟ್ಟ ಸರ್ಕಾರ ಅವಧಿ ಮುಗಿದ ಇಂಜೆಕ್ಷನ್​ಗಳನ್ನ ಮುಂದಿನ ಆರು ತಿಂಗಳ ಕಾಲ‌ ಮರುಬಳಕೆ ಮಾಡಲು ಅನುಮತಿ ನೀಡಿದೆ. ಇದರ ಪರಿಣಾಮ ಸರ್ಕಾರಿ ಆಸ್ಪತ್ರೆಗಳಲ್ಲಿ ಅವಧಿ ಮುಗಿದ ರೆಮ್​ಡೆಸಿವಿರ್ ಇಂಜೆಕ್ಷನ್ ಮರು ಬಳಕೆ ಮಾಡಲಾಗುತ್ತಿದೆ ಎಂಬ ಸಂಗತಿ ಹೊರಬಿದ್ದಿದೆ.

ಏಪ್ರಿಲ್ 5 ರಿಂದ ಅವಧಿ ಮುಗಿದ ರೆಮಿಡಿಸಿವಿರ್ ಇಂಜೆಕ್ಷನ್ ಅನ್ನು ವೈದ್ಯರು ಕೊರೊನಾ ಸೋಂಕಿತರಿಗೆ ನೀಡುತ್ತಿದ್ದಾರೆ ಎಂಬ ಸಂಗತಿ ಬಯಲಾಗಿದ್ದು, ಅವಧಿ ಮುಗಿದ  ಮೇಲೆ ಮುಂದಿನ ಆರು ತಿಂಗಳ ಕಾಲ ಮುಂದುವರೆದ ಸ್ಟಿಕರ್ ಅಂಟಿಸಿ ಬಳಕೆ ಮಾಡುತ್ತಿದ್ದಾರೆ ಎನ್ನಲಾದಾಗಿದೆ. ಏಪ್ರಿಲ್ 5 ರಂದು ಅವಧಿ ಮುಗಿದ ರೆಮ್​ಡೆಸಿವಿರ್​ ಇಂಜೆಕ್ಷನ್ ಮೇಲೆ ಅಕ್ಟೋಬರ್ 5ರ ವರೆಗೂ ಅವಧಿ ಎಂದು ತೋರಿಸಲು ಸ್ಟಿಕರ್ ಅಂಟಿಸಲಾಗ್ತಿದೆ ಎಂಬ ಮಾತು ಕೇಳಿಬಂದಿದೆ.

ಈ ಬಗ್ಗೆ ವೈದ್ಯರ ಅಭಿಪ್ರಾಯ ಏನು? ಅವಧಿ ಮುಗಿದ ರೆಮ್​ಡೆಸಿವಿರ್ ಇಂಜೆಕ್ಷನ್ ಆರು ತಿಂಗಳ ಕಾಲ ಮರು ಬಳಕೆ ಮಾಡಬಹುದು. ಹೊಸ ಔಷಧಿ ಆಗಿರುವ ಕಾರಣ ಬಳಕೆ ಮಾಡಬಹುದಾಗಿದೆ. ಹೀಗೆ ಬಳಕೆ ಮಾಡುವುದರಿಂದ ರೋಗಿಗಳಿಗೆ ತೊಂದರೆ ಆಗುವ ಸಾಧ್ಯತೆ ಇದೆಯಾದರೂ ಕಡಿಮೆ ಪರಿಣಾಮ ಆಗುವುದರಿಂದ ಆತಂಕ ಕಡಿಮೆ ಇದೆ. ಅವಧಿ ಮುಗಿದ ರೆಮ್​ಡೆಸಿವಿರ್ ಇಂಜೆಕ್ಷನ್ ರೋಗಿಗಳನ್ನ ಗುಣಮುಖರಾಗಿ ಮಾಡುವಲ್ಲಿ ಸ್ವಲ್ಪಮಟ್ಟಿಗೆ ವಿಫಲವಾಗುವ ಸಾಧ್ಯತೆ ಕೂಡ ಇದೆ. ಆದರೆ, ಸದ್ಯದಮಟ್ಟಿಗೆ ಇದು ಅನಿವಾರ್ಯವಾಗಿರುವುದರಿಂದ ಅವಧಿ ಮುಗಿದ ಇಂಜೆಕ್ಷನ್ ಬಳಕೆಗೆ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ರೆಮ್‌ಡಿಸಿವಿರ್ ಅತ್ಯಗತ್ಯ ಲಸಿಕೆ ಅಲ್ಲ ವೈದ್ಯರಿಂದ ಸ್ಪಷ್ಟನೆ ರೆಮ್‌ಡಿಸಿವಿರ್ ಅತ್ಯಗತ್ಯ ಲಸಿಕೆ ಅಲ್ಲ ಎನ್ನುತ್ತಿರುವ ಸರ್ಕಾರದ ಮಾತಿಗೆಹಿರಿಯ ಪಲ್ಮನಾಲಜಿಸ್ಟ್ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ಕೊಡಿಸಿದ್ದಾರೆ. 9 ದಿನಗಳವರೆಗೆ ಸೋಂಕಿತನ ರಕ್ತದ ಆಕ್ಸಿಜನ್ 95ಕ್ಕಿಂತ ಕಡಿಮೆ ಇದ್ದರಷ್ಟೇ ರೆಮ್‌ಡಿಸಿವಿರ್ ನೀಡಬಹುದು. ರೆಮ್‌ಡಿಸಿವಿರ್ ನೀಡಿದರಷ್ಟೇ ಗುಣಮುಖರೆಂಬ ಭಾವನೆ ಬೇಡ ಎಂದು ವೈದ್ಯರು ತಿಳಿಸಿದ್ದಾರೆ.

ಆದರೆ ಕೆಲ ಆಸ್ಪತ್ರೆಗಳಿಂದ ಅನಗತ್ಯವಾಗಿ ರೆಮ್‌ಡಿಸಿವಿರ್ ಬಳಕೆ ಮಾಡುತ್ತಿದ್ದಾರೆ. ರೋಗಿ ನಾರ್ಮಲ್ ಕಂಡಿಷನ್​ನಲ್ಲಿದ್ದರೂ ರೆಮ್ಡಿಸಿವಿರ್ ಬಳಕೆ ಮಾಡಲಾಗುತ್ತಿದೆ. ರೆಮ್ಡಿಸಿವಿರ್ ತರಲೇಬೇಕು ಎಂದು ಒತ್ತಡ ಹೇರುತ್ತಿರುವ ಕೆಲ ಖಾಸಗಿ ಆಸ್ಪತ್ರೆಗಳ ಬಗ್ಗೆ ಸರ್ಕಾರ ಗಮನ ಕೊಡದೆ ಅವುಗಳನ್ನು ನಿಯಂತ್ರಿಸದೆ ಕೈ ಚೆಲ್ಲಿ ಕುಳಿತಿದೆ ಎಂದು ಸದ್ಯ ಆರೋಪಗಳು ಕೇಳಿ ಬರುತ್ತಿದೆ.

ಇದನ್ನೂ ಓದಿ:

ರಾಜ್ಯದಲ್ಲಿ ರೆಮ್‍ಡೆಸಿವಿರ್ ಇಂಜೆಕ್ಷನ್‍, ಆಮ್ಲಜನಕದ ಕೊರತೆಯಿಲ್ಲ; ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರಿಂದ ಸಿಎಂ ಯಡಿಯೂರಪ್ಪಗೆ ಭರವಸೆ

ಕೊರೊನಾ ಲಸಿಕೆಯೂ ಪೋಲಾಗುತ್ತಿದೆ; ತಮಿಳುನಾಡಿನಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಲಸಿಕೆ ವ್ಯರ್ಥ: ಆರ್​ಟಿಐ ವರದಿ

(Karnataka Government sanctioning expired injection recycling in the wake of Remdesivir injection in the state)

Published On - 9:59 am, Thu, 22 April 21

ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ