AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕರ್ನಾಟಕದಲ್ಲಿ ಸಕಲ ಸಿದ್ಧತೆ

ಗುಣಮಟ್ಟದ ಶಾಲಾ ಶಿಕ್ಷಣಕ್ಕಾಗಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಪರಿಷತ್ (ಕೆಎಸ್​ಎಸ್​ಇಸಿ) ಮತ್ತು ಸ್ವಾಯತ್ತ ನಿಯಂತ್ರಕ ಪ್ರಾಧಿಕಾರವಾಗಿ ಶಾಲಾ ಗುಣಮಟ್ಟ ಪ್ರಾಧಿಕಾರ ರಚನೆ ಆಗಬೇಕಿದೆ.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕರ್ನಾಟಕದಲ್ಲಿ ಸಕಲ ಸಿದ್ಧತೆ
Skanda
| Edited By: |

Updated on: Nov 30, 2020 | 2:43 PM

Share

ಬೆಂಗಳೂರು: ಡಾ.ಕೆ.ಕಸ್ತೂರಿ ರಂಗನ್ ವರದಿಯನ್ನು ಆಧರಿಸಿದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನಕ್ಕೆ ಮಾರ್ಚ್​ನಲ್ಲಿಯೇ ಕಾರ್ಯಪಡೆ ರಚಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿತ್ತು. ಇದೀಗ ಶಿಕ್ಷಣ ನೀತಿಗೆ ಸಂಬಂಧಿಸಿದ ವರದಿಯನ್ನೂ ಉಳಿದೆಲ್ಲಾ ರಾಜ್ಯಗಳಿಗಿಂತ ಮೊದಲು ಕರ್ನಾಟಕ ಸಲ್ಲಿಸಿದ್ದು ನೂತನ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಭರದ ಸಿದ್ಧತೆ ಸಾಗಿದೆ.

2030ರ ವೇಳೆಗೆ ಭಾರತದ ಪ್ರತಿ ಮಗುವಿಗೂ ಅತ್ಯುನ್ನತ ಶಿಕ್ಷಣ ಲಭಿಸಬೇಕೆಂಬ ಉದ್ದೇಶದೊಂದಿಗೆ ಜಾರಿಗೊಳಿಸಲಾಗಿರುವ ಈ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಲು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮೂರ್ನಾಲ್ಕು ಸುತ್ತಿನ ಚರ್ಚೆ ನಡೆದಿದೆ.

ಶಿಕ್ಷಣದ ಕ್ಷೇತ್ರದ ಸಮಗ್ರ ಏಳ್ಗೆಗೆ ಯೋಜನೆ ಕರ್ನಾಟಕದಲ್ಲಿ ಪ್ರಸ್ತುತ 1.13 ಕೋಟಿ ಶಾಲಾ ವಿದ್ಯಾರ್ಥಿಗಳಿದ್ದು 78,233 ಶಾಲೆಗಳಲ್ಲಿ ಅವರು ವ್ಯಾಸಂಗ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆ, ಬುಡಕಟ್ಟು ಮತ್ತು ಸಮಾಜ ಕಲ್ಯಾಣ ಇಲಾಖೆ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ಒಟ್ಟು 8 ವಿಭಿನ್ನ ಸಂಸ್ಥೆಗಳು ಈ ಶಾಲೆಗಳನ್ನು ನಿರ್ವಹಿಸುತ್ತಿವೆ.

ಸದ್ಯ ರಚನೆಯಾಗಿರುವ ಕಾರ್ಯಪಡೆಯು ಶಾಸನಾತ್ಮಕ, ಆಡಳಿತಾತ್ಮಕ, ರಚನಾತ್ಮಕ, ಶೈಕ್ಷಣಿಕ ಹಾಗೂ ಹಣಕಾಸಿಗೆ ಸಂಬಂಧಿಸಿದ ವಿಚಾರಗಳನ್ನು ಶಿಫಾರಸು ಮಾಡಿದೆ. ಉನ್ನತ ಶಿಕ್ಷಣವನ್ನೂ ಗಮನದಲ್ಲಿರಿಸಿಕೊಂಡು ಈ ಶಿಫಾರಸನ್ನು ಮಾಡಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ 2020

ಕರ್ನಾಟಕ ಶಿಕ್ಷಣ ಆಯೋಗದ ರಚನೆ ಕಾರ್ಯಪಡೆಯ ಪ್ರಸ್ತಾವದ ಪ್ರಕಾರ ಕರ್ನಾಟಕ ಶಿಕ್ಷಣ ಆಯೋಗದ ರಚನೆಯಾಗಬೇಕಿದ್ದು ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಲಿದ್ದಾರೆ. ಉನ್ನತ ಶಿಕ್ಷಣ ಸಚಿವರು ಹಾಗೂ ಶಾಲಾ ಶಿಕ್ಷಣ ಸಚಿವರು ಉಪಾಧ್ಯಕ್ಷ ಹುದ್ದೆಯಲ್ಲಿ ಇರಲಿದ್ದು ಸಚಿವರು, ಅಧಿಕಾರಿಗಳು ಹಾಗೂ ತಜ್ಞರು ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಗುಣಮಟ್ಟದ ಶಾಲಾ ಶಿಕ್ಷಣಕ್ಕಾಗಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಪರಿಷತ್ ಗುಣಮಟ್ಟದ ಶಾಲಾ ಶಿಕ್ಷಣಕ್ಕಾಗಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಪರಿಷತ್ (ಕೆಎಸ್​ಎಸ್​ಇಸಿ) ಮತ್ತು ಸ್ವಾಯತ್ತ ನಿಯಂತ್ರಕ ಪ್ರಾಧಿಕಾರವಾಗಿ ಶಾಲಾ ಗುಣಮಟ್ಟ ಪ್ರಾಧಿಕಾರ ರಚನೆ ಆಗಬೇಕಿದೆ. ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಕಮಿಷನ್ ಸ್ಥಾಪಿಸಿ ಅದರಡಿಯಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಧನ ಸಹಾಯ ಪರಿಷತ್, ಉನ್ನತ ಶಿಕ್ಷಣ ನಿಯಂತ್ರಕ ಪ್ರಾಧಿಕಾರ, ಸಂಶೋಧನೆ ಮತ್ತು ನಾವೀನ್ಯತಾ ಪರಿಷತ್, ಮತ್ತು ನ್ಯಾಕ್​ನಿಂದ ಮಾನ್ಯತಾ ಸಂಸ್ಥೆಗಳನ್ನು ಸ್ಥಾಪಿಸಲು ಶಿಫಾರಸು ನೀಡಲಾಗಿದೆ.

ವಿಶೇಷ ಶೈಕ್ಷಣಿಕ ವಲಯಗಳ ರಚನೆ ಇದರೊಂದಿಗೆ ಶಿಕ್ಷಣ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಲವು ಯೋಜನೆಗಳನ್ನು ಜಾರಿಗೆ ತರಲು ಉದ್ದೇಶಿಸಲಾಗಿದ್ದು ವಿಶೇಷ ಶೈಕ್ಷಣಿಕ ವಲಯಗಳನ್ನು ಗುರುತಿಸಬೇಕು ಹಾಗೂ ಮತ್ತೊಂದು ಹೊಸ ಕಾಯಿದೆಯನ್ನು ತರಬೇಕು ಎನ್ನಲಾಗಿದೆ.

ಕಾರ್ಯಪಡೆ ವರದಿಗೆ ಕ್ಯಾಬಿನೆಟ್ ಅನುಮೋದನೆ ಸಿಕ್ಕು ಅನುಷ್ಠಾನಗೊಳಿಸಿದರೆ ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ್ದಾಗಲಿದೆ.

ಇದನ್ನೂ ಓದಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಹೀಗಿರುತ್ತದೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ