AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡ್​ನ್ಯೂಸ್: ಇಂದಿನಿಂದ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿಗೆ ಅವಕಾಶ

ಬಿಪಿಎಲ್ ಕಾರ್ಡ್ ನಲ್ಲಿ ಪುರುಷ ಮುಖ್ಯಸ್ಥರಾಗಿದ್ದರಿಂದ ಕೆಲ ಮಹಿಳೆಯರಿಗೆ ಸಂಕಷ್ಟ ಎದುರಾಗಿದೆ. ಮನೆ ಮುಖ್ಯಸ್ಥರು ಪುರುಷನಾಗಿದ್ದರಿಂದ ಮಹಿಳೆಗೆ ಗೃಹಲಕ್ಷ್ಮೀ ಯೋಜನೆ ಸಿಗುತ್ತಿಲ್ಲ. 2000 ರೂ.ಸಿಗುತ್ತಿಲ್ಲ ಎಂದು ನಿರಾಸೆಗೊಂಡ ಮಹಿಳೆಯರಿಗೆ ಸರ್ಕಾರದ ಸಿಹಿ ಸುದ್ದಿ ನೀಡಿದೆ. ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಅವಕಾಶ ಮಾಡಿಕೊಟ್ಟಿದೆ.

ಗುಡ್​ನ್ಯೂಸ್: ಇಂದಿನಿಂದ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿಗೆ ಅವಕಾಶ
ರೇಷನ್ ಕಾರ್ಡ್
Poornima Agali Nagaraj
| Edited By: |

Updated on: Sep 01, 2023 | 8:59 AM

Share

ಬೆಂಗಳೂರು, (ಸೆಪ್ಟೆಂಬರ್ 01): ಹೊಸ ಪಡಿತರ ಚೀಟಿ (ration card) ವಿತರಣೆಗೆ ಸರ್ಕಾರ ಯಾವಾಗ ಅನುಮತಿ ಕೊಡುತ್ತದೆ ಎಂಬ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ಇನ್ನು ಈಗಾಗಲೇ ಬಿಪಿಎಲ್ ಕಾರ್ಡ್​​ಗೆ ಸಲ್ಲಿಕೆಯಾದ ಅರ್ಜಿಗಳು ವಿಲೇವಾರಿಯಾಗಿಲ್ಲ. ಇದರ ಮಧ್ಯೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪಡೆದುಕೊಳ್ಳಲು ಬಿಪಿಎಲ್​ ಕಾರ್ಡ್​ಗಾಗಿ ಜನರು ಅಲೆದಾಡುತ್ತಿದ್ದಾರೆ. ಇದರ ಮಧ್ಯೆ ಬಿಪಿಎಲ್ ದಾರರಿಗೆ ಹೊಸ ಸಂಕಷ್ಟ ಎದುರಾಗಿದೆ. ಹೌದು…ಬಿಪಿಎಲ್​ ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರಿಂದ ಮಹಿಳೆಯರಿಗೆ ಸರ್ಕಾರ ನೀಡುತ್ತಿರುವ 2000 ರೂ. ಗೃಹಲಕ್ಷ್ಮೀ ಯೋಜನೆಯಿಂದ(gruha lakshmi scheme)  ವಂಚಿತರಾಗಿದ್ದಾರೆ. ಇದೀಗ ಸರ್ಕಾರ, ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಇಂದಿನಿಂದ(ಸೆಪ್ಟೆಂಬರ್ 01) ಅವಕಾಶ ನೀಡಿದೆ.

ಇಂದಿನಿಂದ ತಿದ್ದುಪಡಿಗೆ ಅವಕಾಶ

ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ವಯಸ್ಕ ಮಹಿಳೆ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ. ಆದ್ರೆ, ಆಹಾರ ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪುರುಷ ಮುಖ್ಯಸ್ಥ ಕಾರ್ಡ್ ದಾರರು ಇದ್ದಾರೆ. ವಯಸ್ಕ ಮಹಿಳೆ ಇದ್ದೂ ಪುರುಷ ಮುಖ್ಯಸ್ಥ ಇರುವ ಕಾರ್ಡ್ ನಿಂದ ಅರ್ಜಿ ಸಲ್ಲಿಸಲು ಬರಲ್ಲ. ಅಲ್ಲದೇ ಮನೆಯ ಮಹಿಳೆ ಇದ್ದರೂ ಗೃಹಲಕ್ಷ್ಮಿ ಎರಡು ಸಾವಿರ ದುಡ್ಡು ಸಿಗದ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಮನೆಯೊಡತಿ ಹೆಸರು ಬದಲಾವಣೆಗೆ ಸೆಪ್ಟೆಂಬರ್​ 1ರಿಂದ ಸೆ,10ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಈ ಹತ್ತು ದಿನದಲ್ಲಿ ಹೆಸರು ಬದಲಾವಣೆ ಮಾಡಿಸಿಕೊಳ್ಳಬೇಕು.

ಇದನ್ನೂ ಓದಿ: ಸೆಪ್ಟೆಂಬರ್​ 4 ರಂದು ರಾಜ್ಯದ ಬರ ಪೀಡಿತ ತಾಲೂಕು ಘೋಷಣೆ : ಚೆಲುವರಾಯಸ್ವಾಮಿ

ರೇಷನ್ ಕಾರ್ಡ್​ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್​ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್, ಬೇರೆ ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ಕೊಟ್ಟಿದೆ. ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಓನ್ ಹಾಗೂ ಕರ್ನಾಟಕ ಓನ್ ಸೇರಿ ಇತರ ಕಡೆಗಳಲ್ಲಿ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.

ಆಹಾರ ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪುರುಷ ಮುಖ್ಯಸ್ಥ ಕಾರ್ಡ್ ದಾರರು ಇದ್ದಾರೆ. ಕಾರ್ಡ್​ನ ಮುಖ್ಯಸ್ಥರು ಪುರುಷಾರಾಗಿದ್ದರೆ ಅನ್ನಭಾಗ್ಯ, ಗೃಹಲಕ್ಷ್ಮಿ ಸ್ಕೀಂ ಸಿಗಲ್ಲ. ಗೃಹಲಕ್ಷ್ಮಿ ಅರ್ಜಿ ಸಲ್ಲಿಸಲು ಬಿಪಿಎಲ್, ಎಪಿಎಲ್ ಕಾರ್ಡ್ ಮನೆಯೊಡತಿಯೇ ಇರಬೇಕು. ಇಲ್ಲದಿದ್ದರೆ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಎರಡೂ ಯೋಜನೆಗೂ ಅನರ್ಹರು. ಅಲ್ಲದೇ ಕಾರ್ಡ್ ನಲ್ಲಿ 18 ವರ್ಷದ ಒಳಗಿದ್ದ ಬಾಲಕಿಯರು ಇದ್ರೆ ತೊಂದರೆ ಇಲ್ಲ. ಆದ್ರೆ ವಯಸ್ಕ ಮಹಿಳೆ ಇದ್ದೂ ಕಾರ್ಡ್ ಮುಖ್ಯಸ್ಥ ಗಂಡಸಾಗಿದ್ದರೆ ಅಂತವರಿಗೆ ಅನ್ನಭಾಗ್ಯ ಸ್ಕೀಂ ಸಿಗಲ್ಲ. ಹೀಗಾಗಿ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಅವಕಾಶ ನೀಡಲಾಗಿದೆ.

ನಿಮ್ಮ ಜಿಲ್ಲೆಗಳ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ