AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಬರಸ್ತಾನಗಳಿಗೆ ಸರ್ಕಾರಿ, ಕಂದಾಯ ಭೂಮಿ ನೀಡಲು ಮುಂದಾದ ಕರ್ನಾಟಕ ಸರ್ಕಾರ

ಕರ್ನಾಟಕದಲ್ಲಿ ವಕ್ಫ್​ ಭೂ ವಿವಾದ ಬೆನ್ನಲ್ಲೇ ಮತ್ತೊಂದು ಭೂ ಸಮರ ಉದ್ಭವಿಸುವ ಸಾಧ್ಯತೆ ಇದೆ. ಖಬರಸ್ತಾನಗಳಿಗೆ ಸರ್ಕಾರಿ, ಕಂದಾಯ ಭೂಮಿ ನೀಡಲು ಸರ್ಕಾರ ಮುಂದಾಗಿದ್ದು, ಪರ-ವಿರೋಧ ಚರ್ಚೆ ಶುರುವಾಗಿದೆ. ಈಗಾಗಲೇ ವಕ್ಫ್​ ವಿಚಾರವಾಗಿ ದೊಡ್ಡ ಕದನವೇ ರಾಜ್ಯದಲ್ಲಿ ನಡೆಯುತ್ತಿದ್ದು, ಈಗ ಹೊಸದೊಂದು ವಿವಾದ ತಲೆದೋರಿದೆ.

ಖಬರಸ್ತಾನಗಳಿಗೆ ಸರ್ಕಾರಿ, ಕಂದಾಯ ಭೂಮಿ ನೀಡಲು ಮುಂದಾದ ಕರ್ನಾಟಕ ಸರ್ಕಾರ
ಖಬರಸ್ತಾನImage Credit source: Morocco world news
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Nov 15, 2024 | 9:05 AM

Share

ಕರ್ನಾಟಕದಲ್ಲಿ ವಕ್ಫ್​ ಭೂ ವಿವಾದ ಬೆನ್ನಲ್ಲೇ ಮತ್ತೊಂದು ಭೂ ಸಮರ ಉದ್ಭವಿಸುವ ಸಾಧ್ಯತೆ ಇದೆ. ಮುಸ್ಲಿಮರ ಖಬರಸ್ತಾನಗಳಿಗೆ ಸರ್ಕಾರಿ, ಕಂದಾಯ ಭೂಮಿ ನೀಡಲು ಸರ್ಕಾರ ಮುಂದಾಗಿದ್ದು, ಪರ-ವಿರೋಧ ಚರ್ಚೆ ಶುರುವಾಗಿದೆ. ಈಗಾಗಲೇ ವಕ್ಫ್​ ವಿಚಾರವಾಗಿ ದೊಡ್ಡ ಕದನವೇ ರಾಜ್ಯದಲ್ಲಿ ನಡೆಯುತ್ತಿದ್ದು, ಈಗ ಹೊಸದೊಂದು ವಿವಾದ ತಲೆದೋರಿದೆ.

ರಾಜ್ಯದ 328 ಖಬರಸ್ತಾನಗಳಿಗೆ ಸರ್ಕಾರಿ ಭೂಮಿ ನೀಡುವ ಬಗ್ಗೆ ಸರ್ಕಾರ ತೀರ್ಮಾನ ಮಾಡಿದೆ. ಸರ್ಕಾರಿ ಜಮೀನನ್ನು ಮಂಜುರಾತಿ ನೀಡಲು ಸರ್ಕಾರ ಮುಂದಾಗಿದೆ. ಸುಮಾರು 2750 ಎಕರೆ ಭೂಮಿ ಮಂಜುರಾತಿ ನೀಡಲು ತಯಾರಿ ನಡೆಸಿದ್ದು, ಸರ್ಕಾರಿ ಭೂಮಿಯನ್ನು ಖಬರಸ್ತಾನವಾಗಿ ಪರಿವರ್ತಿಸುವ ಯೋಜನೆ ಇದಾಗಿದೆ.

ಬೆಂಗಳೂರು, ರಾಯಚೂರು, ಕಲಬುರಗಿ, ಹಾಸನ, ದಕ್ಷಿಣಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೋಜನೆ ಕಾರ್ಯಗತಗೊಳಿಸಲಾಗುತ್ತಿದೆ. ವಕ್ಫ್ ಅಧೀನದ ಮಸೀದಿ, ಪ್ರಾರ್ಥನಾ ಮಂದಿರದ ಅಧೀನದಲ್ಲಿರುವ ಖಬರಸ್ತಾನಗಳಿಗೆ ಜಮೀನು ನೀಡಲಾಗುತ್ತಿದೆ.

ಮತ್ತಷ್ಟು ಓದಿ: ಮುಡಾ ಹಗರಣ ಬಗೆಯುತ್ತಿದೆ ಇಡಿ: ಸಿಎಂ ಸಿದ್ದರಾಮಯ್ಯ ಖಾಸಗಿ ಆಪ್ತ ಸಹಾಯಕನಿಗೆ ಗ್ರಿಲ್

ಈ ಬಗ್ಗೆ ಈ ಹಿಂದೆಯೇ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದರು. ಕಳೆದ ಎಪ್ರಿಲ್ 16ರಂದು ಅಂದಿನ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ , ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಗೆ ಸೂಚನೆ ನೀಡಿದ್ದರು.

ರಾಜ್ಯ ಮಟ್ಟದ ವಕ್ಫ್ ಆಸ್ತಿಗಳ ಕಾರ್ಯಪಡೆಯು ಈ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ಕಾರವನ್ನು 328 ಖಬರಸ್ತಾನಗಳಿಗೆ ಕಂದಾಯ ಭೂಮಿಯನ್ನು ಮಂಜುರಾತಿ ಮಾಡುವಂತೆ ಕೋರಿದ್ದರು. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಡಾ ಶಾಲಿನಿ ರಜನೀಶ್ ಸೂಚನೆ ನೀಡಿದ್ದರು. ಸರ್ಕಾರಿ ಭೂಮಿ ಲಭ್ಯವಿಲ್ಲದಿದ್ದರೆ ಖಾಸಗಿ ಜಮೀನು ಖರೀದಿಸಿ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದ್ದರು.

ಇನ್ನೊಂದೆಡೆ  ರಾಜ್ಯದ 34,223 ಸಿ ಗ್ರೇಡ್ ದೇವಾಲಯಗಳ ಸುತ್ತಲಿನ ಬಹುತೇಕ ಜಾಗ ಸರ್ಕಾರಿ ಭೂಮಿ. ಈ ಭೂಮಿಗೆ ದೇವಾಲಯದ ಹೆಸರಿನಲ್ಲಿ ಮಂಜೂರಾತಿ ನೀಡುವಂತೆ 2013ರಿಂದ ಧಾರ್ವಿುಕ ಪರಿಷತ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಲೇ ಇದೆ. ರಾಜ್ಯದ 5,730 ಪುರಾತನ ಧಾರ್ವಿುಕ ದೇವಾಲಯಕ್ಕೆ ಪಹಣಿ ಇಲ್ಲ. ಇವು ಇನ್ನೂ ಕಂದಾಯ ಇಲಾಖೆಯ ಭೂಮಿಯಲ್ಲೇ ಇವೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ