Sign In

By signing in or creating an account, you agree with Associated Broadcasting Company's Terms & Conditions and Privacy Policy.

Menstrual Leave: ಕರ್ನಾಟಕ ಮಹಿಳಾ ಉದ್ಯೋಗಿಗಳಿಗೆ ಸಿಗಲಿದೆ ವೇತನ ಸಹಿತ ಮುಟ್ಟಿನ ರಜೆ

Menstrual Leave in Karnataka: ಕೊನೆಗೂ ಕರ್ನಾಟಕದ ಮಹಿಳಾ ಉದ್ಯೋಗಿಗಳಿಗೆ ಶುಭ ಸುದ್ದಿ ನೀಡಲು ರಾಜ್ಯ ಸರ್ಕಾರ ಮನಮಾಡಿದೆ. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ನಂತರ ಇದೀಗ ಕರ್ನಾಟಕದಲ್ಲಿಯೂ ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆ ನೀಡಲು ಸರ್ಕಾರ ಮುಂದಾಗಿದೆ. ಆ ಬಗ್ಗೆ ವಿವರ ಇಲ್ಲಿದೆ.

Menstrual Leave: ಕರ್ನಾಟಕ ಮಹಿಳಾ ಉದ್ಯೋಗಿಗಳಿಗೆ ಸಿಗಲಿದೆ ವೇತನ ಸಹಿತ ಮುಟ್ಟಿನ ರಜೆ
ಮುಟ್ಟಿನ ರಜೆ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on:Sep 20, 2024 | 11:41 AM

ಬೆಂಗಳೂರು, ಸೆಪ್ಟೆಂಬರ್ 20: ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಮಹಿಳೆಳಾ ಉದ್ಯೋಗಿಗಳಿಗೆ ವಾರ್ಷಿಕವಾಗಿ 6 ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ನೀಡಲು ನೀತಿ ರೂಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಮುಟ್ಟಿನ ರಜೆ ಸಾಧ್ಯಾಸಾಧ್ಯತೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿಯ ಆಧಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವರದಿಯಾಗಿದೆ.

ವರದಿ ಸಿದ್ಧಪಡಿಸಲು ಡಾ ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿತ್ತು. ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಸಂಬಂಧಪಟ್ಟ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಅನುಮೋದನೆಗಾಗಿ ಶಾಸಕಾಂಗದ ಮುಂದೆ ಪ್ರಸ್ತಾಪಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಖಾಸಗಿ ಕಂಪನಿಗಳಲ್ಲೇ ಮೊದಲು ಜಾರಿ

ಆರಂಭದಲ್ಲಿ ಖಾಸಗಿ ವಲಯಕ್ಕೆ ಮುಟ್ಟಿನ ರಜೆ ನೀತಿ ಪರಿಚಯಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಪೂರ್ಣ ಪ್ರಮಾಣದಲ್ಲಿ ನೀತಿ ರೂಪಿಸಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಮೊಹ್ಸಿನ್ ಹೇಳಿದ್ದಾರೆ. ಮುಟ್ಟಿನ ರಜೆ ವಿಚಾರವಾಗಿ ಒಂದು ನೀತಿಯನ್ನು ಹೊಂದುವ ಅಗತ್ಯತೆಯ ಬಗ್ಗೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಅನುಗುಣವಾಗಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ ನೀಡುವುದರ ಸಾಧ್ಯಾಸಾಧ್ಯತೆ ಬಗ್ಗೆ ಗಮನಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ಈ ವರ್ಷದ ಜುಲೈನಲ್ಲಿ ನಿರ್ದೇಶನ ನೀಡಿತ್ತು. ಉದ್ಯೋಗದಾತರು ಮುಟ್ಟಿನ ರಜೆ ನೀಡುವುದನ್ನು ಕಡ್ಡಾಯಗೊಳಿಸುವುದರಿಂದ ಮಹಿಳೆಯರಿಗೆ ಅನುಕೂಲವಾಗಬೇಕು. ಅದರ ಬದಲಿಗೆ ಮುಟ್ಟಿನ ರಜೆ ನೀಡುವುದರಿಂದ ಉದ್ಯೋಗಗಳಲ್ಲಿ ಅವರ ಭಾಗವಹಿಸುವಿಕೆಗೆ ಪ್ರತಿಕೂಲವಾಗದಂತೆ ಗಮನಹರಿಸಬೇಕು ಎಂದು ಕೋರ್ಟ್ ಹೇಳಿತ್ತು. ಮುಟ್ಟಿನ ರಜೆಯಿಂದ ಮಹಿಳೆಯರಿಗೆ ಉದ್ಯೋಗಾವಕಾಶ ಕಡಿಮೆ ಆಗಿಬಿಟ್ಟರೆ ಎಂಬ ಆತಂಕವನ್ನೂ ಕೋರ್ಟ್ ವ್ಯಕ್ತಪಡಿಸಿತ್ತು.

ಕರ್ನಾಟಕದಲ್ಲಿ ಮುಟ್ಟಿನ ರಜೆ ನೀತಿ ರೂಪಿಸುವ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೂಡ ಸುಳಿವು ನೀಡಿದ್ದರು ಎನ್ನಲಾಗಿದೆ.

ಮುಟ್ಟಿನ ರಜೆ ಪ್ರಸ್ತಾವನೆ ಚರ್ಚೆ ಹಂತದಲ್ಲಿದೆ. ಸಚಿವರು ಆ ಬಗ್ಗೆ ನೀತಿ ರೂಪಿಸಲು ಚಿಂತನೆ ನಡೆಸಿದ್ದರು. ಕಾರ್ಮಿಕ ಇಲಾಖೆಯು ಕೆಲವೇ ದಿನಗಳಲ್ಲಿ ಪ್ರಸ್ತಾವನೆಯನ್ನು ಪರಿಶೀಲಿಸಲಿದೆ. ಆ ನಂತರ ಅದು ಇಲಾಖೆ ಮತ್ತು ಸರ್ಕಾರಿ ಹಂತಗಳಲ್ಲಿ ಮುಂದುವರಿಯಲಿದೆ ಎಂದು ಕಾರ್ಮಿಕ ಆಯುಕ್ತ ಡಾ. ಎಚ್ಎನ್ ಗೋಪಾಲಕೃಷ್ಣ ತಿಳಿಸಿದ್ದಾರೆ.

ಮುಟ್ಟಿನ ರಜೆ ಘೋಷಿಸಿದ ಮೊದಲ ರಾಜ್ಯ ಬಿಹಾರ

ಬಿಹಾರವು 1992 ರಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಘೋಷಿಸಿತ್ತು. ಆ ಮೂಲಕ ಮುಟ್ಟಿನ ರಜೆ ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿ ಹೊರಹೊಮ್ಮಿತ್ತು. ಅಲ್ಲಿ ಪ್ರತಿ ತಿಂಗಳು ಎರಡು ದಿನಗಳ ಮುಟ್ಟಿನ ರಜೆಯನ್ನು ಒದಗಿಸಲಾಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೂಡ ಮಹಿಳೆಯರಿಗೆ ಕೆಲವು ನಿಬಂಧನೆಗಳೊಂದಿಗೆ ಮುಟ್ಟಿನ ರಜೆ ನೀಡಲಾಗುತ್ತಿದೆ.

ಇದನ್ನೂ ಓದಿ: ಮಹಿಳೆಯರಿಗೆ ಉದ್ಯೋಗಾವಕಾಶ ಕಡಿಮೆ ಆಗಿಬಿಟ್ರೆ..? ಮುಟ್ಟು ರಜೆ ಕಡ್ಡಾಯಗೊಳಿಸಲು ಸುಪ್ರೀಂ ಹಿಂದೇಟು

ಜಾಗತಿಕವಾಗಿ ಸ್ವೀಡನ್, ಇಟಲಿ, ದಕ್ಷಿಣ ಕೊರಿಯಾ, ತೈವಾನ್ ಮತ್ತು ಜಪಾನ್ ಮಹಿಳೆಯರಿಗೆ ಮುಟ್ಟಿನ ರಜೆಗಳನ್ನು ನೀಡುತ್ತವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:10 am, Fri, 20 September 24

ಮೋದಿ ಬೆಂಗಾವಲು ವಾಹನ ರಿಹರ್ಸಲ್ ಮಾಡುತ್ತಿದ್ದ ರಸ್ತೆಯಲ್ಲಿ ಅಡ್ಡ ಬಂದ ಸೈಕಲ್
ಮೋದಿ ಬೆಂಗಾವಲು ವಾಹನ ರಿಹರ್ಸಲ್ ಮಾಡುತ್ತಿದ್ದ ರಸ್ತೆಯಲ್ಲಿ ಅಡ್ಡ ಬಂದ ಸೈಕಲ್
ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು ಸಮರ್ಥಿಸಿಕೊಂಡ ಡಿಸಿಎಂ
ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು ಸಮರ್ಥಿಸಿಕೊಂಡ ಡಿಸಿಎಂ
ಯುವತಿ ಜತೆ ಬೈಕ್​ನಲ್ಲಿ ಯುವಕರಿಬ್ಬರ ತ್ರಿಬಲ್ ರೈಡಿಂಗ್, ಕಿಸ್ಸಿಂಗ್​
ಯುವತಿ ಜತೆ ಬೈಕ್​ನಲ್ಲಿ ಯುವಕರಿಬ್ಬರ ತ್ರಿಬಲ್ ರೈಡಿಂಗ್, ಕಿಸ್ಸಿಂಗ್​
ಎಲ್ಲರಲ್ಲೂ ದೇವರಿದ್ದಾನೆ, ಎಲ್ಲರಿಗೂ ಒಳ್ಳೇದು ಮಾಡುತ್ತಾನೆ: ಸಿಟಿ ರವಿ
ಎಲ್ಲರಲ್ಲೂ ದೇವರಿದ್ದಾನೆ, ಎಲ್ಲರಿಗೂ ಒಳ್ಳೇದು ಮಾಡುತ್ತಾನೆ: ಸಿಟಿ ರವಿ
VIDEO: ನೀ ನಿನ್ ಕೆಲ್ಸ ನೋಡ್ಕೊ... ಹರ್ಮನ್​ಪ್ರೀತ್ ಕೌರ್ ಆವಾಜ್
VIDEO: ನೀ ನಿನ್ ಕೆಲ್ಸ ನೋಡ್ಕೊ... ಹರ್ಮನ್​ಪ್ರೀತ್ ಕೌರ್ ಆವಾಜ್
ಸರಿಗಮಪ ವೇದಿಕೆ ಮೇಲೆ 28 ವರ್ಷಗಳ ಬಳಿಕ ತಮ್ಮದೇ ಚಿತ್ರದ ಹಾಡು ಕೇಳಿದ ರಮೇಶ್
ಸರಿಗಮಪ ವೇದಿಕೆ ಮೇಲೆ 28 ವರ್ಷಗಳ ಬಳಿಕ ತಮ್ಮದೇ ಚಿತ್ರದ ಹಾಡು ಕೇಳಿದ ರಮೇಶ್
ಚಿಕಿತ್ಸೆ ಬೇಕಂದ್ರೆ ಇಲಿಗಳ ಜತೆ ಮಲಗುವುದು ಅನಿವಾರ್ಯ
ಚಿಕಿತ್ಸೆ ಬೇಕಂದ್ರೆ ಇಲಿಗಳ ಜತೆ ಮಲಗುವುದು ಅನಿವಾರ್ಯ
ಮನೆಯಲ್ಲಿನ ಆರತಿಯ ಮಹತ್ವ ಮತ್ತು ಪದ್ಧತಿಗಳು ತಿಳಿಯಿರಿ
ಮನೆಯಲ್ಲಿನ ಆರತಿಯ ಮಹತ್ವ ಮತ್ತು ಪದ್ಧತಿಗಳು ತಿಳಿಯಿರಿ
Daily Horoscope: ಶನಿವಾರ, ಈ ದಿನ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily Horoscope: ಶನಿವಾರ, ಈ ದಿನ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಸಾರಾ ಗೋವಿಂದು ಕಡೆಯವರಿಂದ ನಿರ್ಮಾಪಕ ನರಸಿಂಹ ರಾಜು ಮೇಲೆ ಅಟ್ಯಾಕ್?
ಸಾರಾ ಗೋವಿಂದು ಕಡೆಯವರಿಂದ ನಿರ್ಮಾಪಕ ನರಸಿಂಹ ರಾಜು ಮೇಲೆ ಅಟ್ಯಾಕ್?