AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Menstrual Leave: ಕರ್ನಾಟಕ ಮಹಿಳಾ ಉದ್ಯೋಗಿಗಳಿಗೆ ಸಿಗಲಿದೆ ವೇತನ ಸಹಿತ ಮುಟ್ಟಿನ ರಜೆ

Menstrual Leave in Karnataka: ಕೊನೆಗೂ ಕರ್ನಾಟಕದ ಮಹಿಳಾ ಉದ್ಯೋಗಿಗಳಿಗೆ ಶುಭ ಸುದ್ದಿ ನೀಡಲು ರಾಜ್ಯ ಸರ್ಕಾರ ಮನಮಾಡಿದೆ. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ನಂತರ ಇದೀಗ ಕರ್ನಾಟಕದಲ್ಲಿಯೂ ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆ ನೀಡಲು ಸರ್ಕಾರ ಮುಂದಾಗಿದೆ. ಆ ಬಗ್ಗೆ ವಿವರ ಇಲ್ಲಿದೆ.

Menstrual Leave: ಕರ್ನಾಟಕ ಮಹಿಳಾ ಉದ್ಯೋಗಿಗಳಿಗೆ ಸಿಗಲಿದೆ ವೇತನ ಸಹಿತ ಮುಟ್ಟಿನ ರಜೆ
ಮುಟ್ಟಿನ ರಜೆ (ಸಾಂದರ್ಭಿಕ ಚಿತ್ರ)
Ganapathi Sharma
|

Updated on:Sep 20, 2024 | 11:41 AM

Share

ಬೆಂಗಳೂರು, ಸೆಪ್ಟೆಂಬರ್ 20: ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಮಹಿಳೆಳಾ ಉದ್ಯೋಗಿಗಳಿಗೆ ವಾರ್ಷಿಕವಾಗಿ 6 ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ನೀಡಲು ನೀತಿ ರೂಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಮುಟ್ಟಿನ ರಜೆ ಸಾಧ್ಯಾಸಾಧ್ಯತೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿಯ ಆಧಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವರದಿಯಾಗಿದೆ.

ವರದಿ ಸಿದ್ಧಪಡಿಸಲು ಡಾ ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿತ್ತು. ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಸಂಬಂಧಪಟ್ಟ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಅನುಮೋದನೆಗಾಗಿ ಶಾಸಕಾಂಗದ ಮುಂದೆ ಪ್ರಸ್ತಾಪಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಖಾಸಗಿ ಕಂಪನಿಗಳಲ್ಲೇ ಮೊದಲು ಜಾರಿ

ಆರಂಭದಲ್ಲಿ ಖಾಸಗಿ ವಲಯಕ್ಕೆ ಮುಟ್ಟಿನ ರಜೆ ನೀತಿ ಪರಿಚಯಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಪೂರ್ಣ ಪ್ರಮಾಣದಲ್ಲಿ ನೀತಿ ರೂಪಿಸಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಮೊಹ್ಸಿನ್ ಹೇಳಿದ್ದಾರೆ. ಮುಟ್ಟಿನ ರಜೆ ವಿಚಾರವಾಗಿ ಒಂದು ನೀತಿಯನ್ನು ಹೊಂದುವ ಅಗತ್ಯತೆಯ ಬಗ್ಗೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಅನುಗುಣವಾಗಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ ನೀಡುವುದರ ಸಾಧ್ಯಾಸಾಧ್ಯತೆ ಬಗ್ಗೆ ಗಮನಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ಈ ವರ್ಷದ ಜುಲೈನಲ್ಲಿ ನಿರ್ದೇಶನ ನೀಡಿತ್ತು. ಉದ್ಯೋಗದಾತರು ಮುಟ್ಟಿನ ರಜೆ ನೀಡುವುದನ್ನು ಕಡ್ಡಾಯಗೊಳಿಸುವುದರಿಂದ ಮಹಿಳೆಯರಿಗೆ ಅನುಕೂಲವಾಗಬೇಕು. ಅದರ ಬದಲಿಗೆ ಮುಟ್ಟಿನ ರಜೆ ನೀಡುವುದರಿಂದ ಉದ್ಯೋಗಗಳಲ್ಲಿ ಅವರ ಭಾಗವಹಿಸುವಿಕೆಗೆ ಪ್ರತಿಕೂಲವಾಗದಂತೆ ಗಮನಹರಿಸಬೇಕು ಎಂದು ಕೋರ್ಟ್ ಹೇಳಿತ್ತು. ಮುಟ್ಟಿನ ರಜೆಯಿಂದ ಮಹಿಳೆಯರಿಗೆ ಉದ್ಯೋಗಾವಕಾಶ ಕಡಿಮೆ ಆಗಿಬಿಟ್ಟರೆ ಎಂಬ ಆತಂಕವನ್ನೂ ಕೋರ್ಟ್ ವ್ಯಕ್ತಪಡಿಸಿತ್ತು.

ಕರ್ನಾಟಕದಲ್ಲಿ ಮುಟ್ಟಿನ ರಜೆ ನೀತಿ ರೂಪಿಸುವ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೂಡ ಸುಳಿವು ನೀಡಿದ್ದರು ಎನ್ನಲಾಗಿದೆ.

ಮುಟ್ಟಿನ ರಜೆ ಪ್ರಸ್ತಾವನೆ ಚರ್ಚೆ ಹಂತದಲ್ಲಿದೆ. ಸಚಿವರು ಆ ಬಗ್ಗೆ ನೀತಿ ರೂಪಿಸಲು ಚಿಂತನೆ ನಡೆಸಿದ್ದರು. ಕಾರ್ಮಿಕ ಇಲಾಖೆಯು ಕೆಲವೇ ದಿನಗಳಲ್ಲಿ ಪ್ರಸ್ತಾವನೆಯನ್ನು ಪರಿಶೀಲಿಸಲಿದೆ. ಆ ನಂತರ ಅದು ಇಲಾಖೆ ಮತ್ತು ಸರ್ಕಾರಿ ಹಂತಗಳಲ್ಲಿ ಮುಂದುವರಿಯಲಿದೆ ಎಂದು ಕಾರ್ಮಿಕ ಆಯುಕ್ತ ಡಾ. ಎಚ್ಎನ್ ಗೋಪಾಲಕೃಷ್ಣ ತಿಳಿಸಿದ್ದಾರೆ.

ಮುಟ್ಟಿನ ರಜೆ ಘೋಷಿಸಿದ ಮೊದಲ ರಾಜ್ಯ ಬಿಹಾರ

ಬಿಹಾರವು 1992 ರಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಘೋಷಿಸಿತ್ತು. ಆ ಮೂಲಕ ಮುಟ್ಟಿನ ರಜೆ ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿ ಹೊರಹೊಮ್ಮಿತ್ತು. ಅಲ್ಲಿ ಪ್ರತಿ ತಿಂಗಳು ಎರಡು ದಿನಗಳ ಮುಟ್ಟಿನ ರಜೆಯನ್ನು ಒದಗಿಸಲಾಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೂಡ ಮಹಿಳೆಯರಿಗೆ ಕೆಲವು ನಿಬಂಧನೆಗಳೊಂದಿಗೆ ಮುಟ್ಟಿನ ರಜೆ ನೀಡಲಾಗುತ್ತಿದೆ.

ಇದನ್ನೂ ಓದಿ: ಮಹಿಳೆಯರಿಗೆ ಉದ್ಯೋಗಾವಕಾಶ ಕಡಿಮೆ ಆಗಿಬಿಟ್ರೆ..? ಮುಟ್ಟು ರಜೆ ಕಡ್ಡಾಯಗೊಳಿಸಲು ಸುಪ್ರೀಂ ಹಿಂದೇಟು

ಜಾಗತಿಕವಾಗಿ ಸ್ವೀಡನ್, ಇಟಲಿ, ದಕ್ಷಿಣ ಕೊರಿಯಾ, ತೈವಾನ್ ಮತ್ತು ಜಪಾನ್ ಮಹಿಳೆಯರಿಗೆ ಮುಟ್ಟಿನ ರಜೆಗಳನ್ನು ನೀಡುತ್ತವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:10 am, Fri, 20 September 24

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ