AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿನ್​ಗೆ ಪರ್ಯಾಯವಾಗಿ ಕರ್ನಾಟಕ ಸರ್ಕಾರದಿಂದ ಹೊಸ ಪೋರ್ಟಲ್; ಇನ್ನುಮುಂದೆ ಬೇಕೆಂದಲ್ಲಿ ಲಸಿಕೆ ಕಾಯ್ದಿರಿಸುವಂತಿಲ್ಲ

CoWin Portal: ಕೊವಿನ್​ ಪೋರ್ಟಲ್​ನಲ್ಲಿ ಕೆಲ ಅಡೆತಡೆಗಳಿದ್ದವು. ಜನರಿಗೆ ಲಸಿಕೆ ಪಡೆಯಲು ಕೇಂದ್ರಗಳನ್ನು ಆರಿಸಲು ತೊಂದರೆಯಾಗುತ್ತಿತ್ತು. ಹೀಗಾಗಿ ಇದಕ್ಕೆ ಪರಿಹಾರವಾಗಿ ರಾಜ್ಯ ಸರ್ಕಾರ ಹೊಸ ಪೋರ್ಟಲ್ ತಯಾರಿಸುತ್ತಿದೆ.

ಕೊವಿನ್​ಗೆ ಪರ್ಯಾಯವಾಗಿ ಕರ್ನಾಟಕ ಸರ್ಕಾರದಿಂದ ಹೊಸ ಪೋರ್ಟಲ್; ಇನ್ನುಮುಂದೆ ಬೇಕೆಂದಲ್ಲಿ ಲಸಿಕೆ ಕಾಯ್ದಿರಿಸುವಂತಿಲ್ಲ
ಬಿ.ಎಸ್.ಯಡಿಯೂರಪ್ಪ
Skanda
|

Updated on:May 15, 2021 | 1:36 PM

Share

ಬೆಂಗಳೂರು: ಕೊರೊನಾ ಲಸಿಕೆ ವಿತರಣೆಗೆ ನಾಗರೀಕರು ಹೆಸರು ನೋಂದಾಯಿಸಿಕೊಳ್ಳಲು ಅನುವಾಗುವಂತೆ ಭಾರತ ಸರ್ಕಾರ ಬಿಡುಗಡೆಮಾಡಿರುವ ಕೊವಿನ್​ ಪೋರ್ಟಲ್​ನಲ್ಲಿ ಮೇಲಿಂದ ಮೇಲೆ ಸಮಸ್ಯೆಗಳು ತಲೆದೋರುತ್ತಿರುವ ಕಾರಣ ಕರ್ನಾಟಕದಲ್ಲಿ ಪ್ರತ್ಯೇಕ ಪೋರ್ಟಲ್ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೊವಿನ್​ ಪೋರ್ಟಲ್​ನಲ್ಲಿ ಲಸಿಕೆ ಪಡೆಯಲು ಕೇಂದ್ರಗಳನ್ನು ಆರಿಸಿಕೊಳ್ಳುವಾಗ ಸಮಸ್ಯೆ ಆಗುತ್ತಿರುವುದರ ಜತೆಗೆ ಇನ್ನೂ ಕೆಲ ಸಣ್ಣಪುಟ್ಟ ದೋಷಗಳು ಕಂಡುಬಂದಿರುವ ಕಾರಣ ಕರ್ನಾಟಕದಲ್ಲಿ ಲಸಿಕೆ ವಿತರಣೆಗಾಗಿ ಪ್ರತ್ಯೇಕ ಪೋರ್ಟಲ್​ ತಯಾರಿಸಲು ನಿರ್ಧರಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ನೂತನ ಪೋರ್ಟಲ್ ಜಾರಿಗೊಳಿಸಲು ಸಿದ್ಧತೆ ನಡೆಯುತ್ತಿದೆ. ಆದರೆ, 18ರಿಂದ 44 ವರ್ಷ ವಯಸ್ಸಿನವರಿಗೆ ಲಸಿಕೆ ವಿತರಣೆ ಆರಂಭಿಸಿದ ನಂತರವೇ ಅದನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದಾರೆ. ಮೇ 1ರಿಂದಲೇ 18-44 ವರ್ಷದವರಿಗೆ ಲಸಿಕೆ ನೀಡುವುದಾಗಿ ಭಾರತ ಸರ್ಕಾರ ಘೋಷಿಸಿದೆಯಾದರೂ ಸದ್ಯ ರಾಜ್ಯದಲ್ಲಿ ಲಸಿಕೆ ಅಭಾವ ತಲೆದೋರಿದ ಕಾರಣ ವಿತರಣೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.

ಕೊವಿನ್​ ಪೋರ್ಟಲ್​ ಬಗ್ಗೆ ಮಾತನಾಡಿದ ಬಿ.ಎಸ್​.ಯಡಿಯೂರಪ್ಪ, ಅದರಲ್ಲಿ ಕೆಲ ಅಡೆತಡೆಗಳಿದ್ದವು. ಜನರಿಗೆ ಲಸಿಕೆ ಪಡೆಯಲು ಕೇಂದ್ರಗಳನ್ನು ಆರಿಸಲು ತೊಂದರೆಯಾಗುತ್ತಿತ್ತು. ಹೀಗಾಗಿ ಇದಕ್ಕೆ ಪರಿಹಾರವಾಗಿ ರಾಜ್ಯ ಸರ್ಕಾರ ಹೊಸ ಪೋರ್ಟಲ್ ತಯಾರಿಸುತ್ತಿದೆ ಎಂದು ವಿವರಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಮಾಹಿತಿ ನೀಡಿದ ಹಿರಿಯ ಅಧಿಕಾರಿಗಳು ರಾಜ್ಯದಲ್ಲಿ ಜಾರಿಗೆ ತರುವ ಹೊಸ ಪೋರ್ಟಲ್​ನಲ್ಲಿ ಒಂದು ಪ್ರದೇಶದ ಜನರು ಇನ್ನೊಂದೆಡೆ ಲಸಿಕೆ ಕಾಯ್ದಿರಿಸುವುದನ್ನು ತಡೆಹಿಡಿಯಲಾಗುವುದು. ಅಲ್ಲದೇ ಕೊವಿನ್​ನಲ್ಲಿ ಒಟಿಪಿ ಸಮಸ್ಯೆ ಎದುರಾಗುತ್ತಿದ್ದ ಕಾರಣ ಅವೆಲ್ಲವನ್ನೂ ಪರಿಹಾರಗೊಳಿಸಲು ಹೊಸ ಪೋರ್ಟಲ್​ ತರಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಆರಂಭಿಕ ಹಂತದಲ್ಲಿ ಕೊರೊನಾ ಲಸಿಕೆ ಅಭಾವ ಕಂಡುಬಂದ ತಕ್ಷಣ ಅಲ್ಲಿನ ಜನರು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಹಾಗೂ ತುಮಕೂರು ಭಾಗದಲ್ಲಿ ಲಸಿಕೆ ಕಾಯ್ದಿರಿಸಿ ಲಸಿಕೆಗಾಗಿ 50ರಿಂದ 70 ಕಿಲೋ ಮೀಟರ್ ದೂರ ಕ್ರಮಿಸುತ್ತಿರುವುದು ಬೆಳಕಿಗೆ ಬಂದಿತ್ತು. ಇದೀಗ ನೂತನ ವ್ಯವಸ್ಥೆ ಜಾರಿಯಾದಲ್ಲಿ ಇದಕ್ಕೆ ತಡೆಬೀಳಲಿದೆ.

(Karnataka Government to launch new portal as alternative for CoWin after facing glitches while booking corona vaccine)

ಇದನ್ನೂ ಓದಿ: ನಮಗೆ ಕೊವಿನ್ ಆ್ಯಪ್​ ಬೇಡ.. ಪ್ರತ್ಯೇಕ ಆ್ಯಪ್​ ಬಳಕೆಗೆ ಅನುಮತಿ ನೀಡಿ’-ಕೇಂದ್ರ ಸರ್ಕಾರಕ್ಕೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮನವಿ

Published On - 1:26 pm, Sat, 15 May 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ