AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕರ್ನಾಟಕದಲ್ಲಿ 11 ಡಿವೈಎಸ್‌ಪಿ, 51 ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಅಷ್ಟೇ ರಾಜ್ಯ ಸರ್ಕಾರ 150ಕ್ಕೂ ಹೆಚ್ಚು ಪೊಲೀಸ್ ಇನ್ಸ್​​ಪೆಕ್ಟರ್​​ ಹಾಗೂ ಡಿವೈಎಸ್​ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಮತ್ತೆ 11 ಡಿವೈಎಸ್‌ಪಿ ಮತ್ತು 51 ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿದೆ.

ಮತ್ತೆ ಕರ್ನಾಟಕದಲ್ಲಿ 11 ಡಿವೈಎಸ್‌ಪಿ, 51 ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Feb 13, 2024 | 10:35 PM

Share

ಬೆಂಗಳೂರು, (ಫೆಬ್ರವರಿ 13) : ಲೋಕಸಭಾ ಚುನಾವಣೆ (Loksabha Elections 2024) ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ನಡೆದಿದ್ದು, 11 ಡಿವೈಎಸ್‌ಪಿ ಮತ್ತು 51 ಪೊಲೀಸ್ ಇನ್‌ಸ್ಪೆಕ್ಟರ್‌ಗಳ (police inspectors) ವರ್ಗಾವಣೆ (Police Transfer) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆ ನಿಮಿತ್ತ ಮಾಡಿದ್ದ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ಭಾಗಶಃ ಮಾರ್ಪಡಿಸಿ ಆದೇಶ ಹೊರಡಿಸಿದೆ.

ಸಂಬಂಧಪಟ್ಟ ಘಟಕಾಧಿಕಾರಿಗಳು, ವರ್ಗಾವಣೆಗೊಂಡ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಯಾವುದೇ ಸೇರುವಿಕೆ ಸಮಯ ತೆಗೆದುಕೊಳ್ಳದೇ ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸಲು ಪೊಲೀಸ್‌ ಇಲಾಖೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಪೊಲೀಸ್ ಇಲಾಖೆಗೆ ಸರ್ಜರಿ, 33 ಡಿವೈಎಸ್ಪಿ ಬೆನ್ನಲ್ಲೇ 218 ಪಿಎಸ್‌ಐಗಳ ವರ್ಗಾವಣೆ

ಡಿವೈಎಸ್‌ಪಿ ಶಿವಕುಮಾರ್‌ ಟಿ.ಎಂ. ಅವರನ್ನು ಕಲಬುರಗಿ ಸಂಚಾರ ಉಪವಿಭಾಗ, ಮೊಹಮ್ಮದ್‌ ಶರೀಫ್‌ ರಾವುತರ್‌(ಆಳಂದ ಉಪವಿಭಾಗ, ಕಲಬುರಗಿ), ಕೋದಂಡ ರಾಮ. ಟಿ (ಸಿಸಿಬಿ, ಮಂಗಳೂರು) ಸೇರಿ 11 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಲಾಗಿದೆ.

ಅದೇ ರೀತಿ ವಸಂತ ಕೆ.ಎಂ. ಅವರನ್ನು ಸೋಮವಾರಪೇಟೆ ಪೊಲೀಸ್‌ ಠಾಣೆ, ರಾಘವೇಂದ್ರ ಎಂ. ಬೈಂದೂರು (ಕಾವೂರು ಪೊಲೀಸ್‌ ಠಾಣೆ, ಮಂಗಳೂರು), ಸುರೇಶ್‌ ಪಿ. ಶಿಂಗಿ (ಉಡುಪಿ ನಗರ) ಸೇರಿ 51 ಪೊಲೀಸ್‌ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾಯಿಸಲಾಗಿದೆ.

ಈ ಹಿಂದೆ 150ಕ್ಕೂ ಹೆಚ್ಚು ಪೊಲೀಸ್ ಇನ್ಸ್​​ಪೆಕ್ಟರ್​​ ಹಾಗೂ ಡಿವೈಎಸ್​ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮತ್ತೆ 11 ಡಿವೈಎಸ್‌ಪಿ ಮತ್ತು 51 ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?