AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮುಂದುವರಿದ ಅಧಿಕಾರಿಗಳ ವರ್ಗಾವಣೆ ಪರ್ವ: ಬರೋಬ್ಬರಿ 15 IPS ಟ್ರಾನ್ಸ್​ಫರ್, ಪಟ್ಟಿ ಇಲ್ಲಿದೆ

ಮೊನ್ನೇ ಅಷ್ಟೇ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ವರ್ಗಾವಣೆಯಲ್ಲಿ ಮುಖಂಭ ಅನುಭವಿಸಿದ್ದ ಕರ್ನಾಟಕ ಸರ್ಕಾರ ಮತ್ತೆ ಬರೋಬ್ಬರಿ 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇಲ್ಲಿದೆ ಪೂರ್ಣ ಪಟ್ಟಿ

ಕರ್ನಾಟಕದಲ್ಲಿ ಮುಂದುವರಿದ ಅಧಿಕಾರಿಗಳ ವರ್ಗಾವಣೆ ಪರ್ವ: ಬರೋಬ್ಬರಿ 15 IPS ಟ್ರಾನ್ಸ್​ಫರ್, ಪಟ್ಟಿ ಇಲ್ಲಿದೆ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on:Jun 20, 2023 | 2:20 PM

Share

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ(Karnataka Congress Government)  ಅಧಿಕಾರಕ್ಕೆ ಬರುತ್ತಿದ್ದಂತೆಯೇ ಅಧಿಕಾರಿಗಳು ವರ್ಗಾವಣೆ(Transfers) ಜೋರಾಗಿದೆ. ಅದರಲ್ಲೂ ಮುಖ್ಯವಾಗಿ ಹೆಚ್ಚಾಗಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡುತ್ತಿದೆ. ಅದರಂತೆ ಇಂದು (ಜೂನ್ 20) ಬರೋಬ್ಬರಿ 15 IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟ ಸರ್ಕಾರ ಆದೇಶ ಹೊರಡಿಸಿದೆ.  ಐಪಿಎಸ್​ ರವಿ ಡಿ ಚನ್ನಣ್ಣನವರ್(Ravi D Channannavar) ತಮ್ಮ ವರ್ಗಾವಣೆಗೆ ತಡೆ ತಂದಿದ್ದರಿಂದ ಮುಖಭಂಗಕ್ಕೀಡಾಗಿದ್ದ ಸರ್ಕಾರ,  ಯಾವುದೇ ಐಪಿಎಸ್ ಅಧಿಕಾರಿಗಳನ್ನು ಟ್ರಾನ್ಸ್​ಫರ್ ಮಾಡದಿರಲು ತಾತ್ಕಾಲಿಕವಾಗಿ ತಡೆ ಹಿಡಿದಿತ್ತು. ಅಂದು ತಡೆ ಹಿಡಿಯಲಾಗಿದ್ದ ಐಪಿಎಸ್​ ಅಧಿಕಾರಿಗಳನ್ನು ಇಂದು ವರ್ಗಾವಣೆ ಮಾಡಿದೆ. ವರ್ಗಾವಣೆಗೊಂಡ 15 ಐಪಿಎಸ್ ಅಧಿಕಾರಿಗಳು ಯಾರ್ಯಾರು ಎನ್ನುವ ಪಟ್ಟಿ ಈ ಕೆಳಗಿನಂತಿದೆ.

ಇದನ್ನೂ ಓದಿ: ಮುಜುಗರ ತಂದಿಟ್ಟ ಐಪಿಎಸ್ ವರ್ಗಾವಣೆ, 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕೈ ಬಿಟ್ಟ ರಾಜ್ಯ ಸರ್ಕಾರ

ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳ ಪಟ್ಟಿ

  1. ರಾಮಚಂದ್ರ ರಾವ್- ಎಡಿಜಿಪಿ, ಪೊಲೀಸ್​ ಗೃಹ ನಿರ್ಮಾಣ ನಿಗಮ
  2. ಮಾಲಿನಿ ಕೃಷ್ಣಮೂರ್ತಿ- ಎಡಿಜಿಪಿ, ಬಂದಿಖಾನೆ
  3. ಅರುಣ್ ಚಕ್ರವರ್ತಿ- ಎಡಿಜಿಪಿ, ಡಿಸಿಆರ್​ಇ
  4. ಮನೀಷ್ ಕರ್ಬಿಕರ್- ಎಡಿಜಿಪಿ, ಸಿಐಡಿ
  5. ಚಂದ್ರಶೇಖರ್- ಐಎಸ್ ಡಿ, ಎಡಿಜಿಪಿ
  6. ವಿಪುಲ್ ಕುಮಾರ್- ಹೆಚ್ಚುವರಿ ಪೊಲೀಸ್ ಆಯುಕ್ತ ಪೂರ್ವ ವಲಯ
  7. ಪ್ರವೀಣ್ ಮಧುಕರ್ ಪವಾರ್- ಐಜಿಪಿ ಸಿಐಡಿ
  8. ಸತೀಶ್ ಕುಮಾರ್- ಹೆಚ್ಚುವರಿ ಪೊಲೀಸ್ ಆಯುಕ್ತ ಪಶ್ಚಿಮ ವಲಯ
  9. ಸಂದೀಪ್ ಪಾಟಿಲ್- ಕೆಎಸ್ಆರ್ ಪಿ ಐಜಿಪಿ
  10. ವಿಕಾಸ್ ಕುಮಾರ್ ವಿಕಾಸ್- ಐಜಿಪಿ ಐಎಸ್ ಡಿ
  11. ರಮಣ್ ಗುಪ್ತಾ-ಬೆಳಗಾವಿ ವಲಯ ಐಜಿಪಿ
  12. ಸಿದ್ದರಾಮಪ್ಪ- ಕೇಂದ್ರ ಕಚೇರಿ ಐಜಿಪಿ
  13. ಬೋರಲಿಂಗಯ್ಯ- ಮೈಸೂರು ವಲಯ ಡಿಐಜಿ
  14. ವಂಶಿಕೃಷ್ಣ- ಡಿಐಜಿ ಸಿಐಡಿ
  15. ರಿಷ್ಯಂತ್ – ದಕ್ಷಿಣ ಕನ್ನಡ ಎಸ್ ಪಿ

ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ವರ್ಗಾವಣೆಗೆ ತಡೆ ತಂದಿರುವ ಹಿನ್ನಲೆಯಲ್ಲಿ ಮುಜುಗರಕ್ಕೀಡಾಗಿದ್ದ ಸರ್ಕಾರ, ಐಪಿಎಸ್ ಅಧಿಕಾರಿಗಳ ವರ್ಗಾವಣೆ ನಿರ್ಧಾರ ಬದಲಾವಣೆ ಮಾಡಿಕೊಂಡಿತ್ತು. ಬೆಂಗಳೂರಿನ ಕೇಂದ್ರ ವಿಭಾಗ, ಪಶ್ಚಿಮ, ಪೂರ್ವ, ಉತ್ತರ ಸೇರಿದಂತೆ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ ಸಿಎಂ ಸಿದ್ದರಾಮಯ್ಯನವರ ಬಳಿ ಇತ್ತು. ಆದ್ರೆ, ರವಿ ಡಿ ಚೆನ್ನಣ್ಣನವರ್ ಕೊಟ್ಟ ಶಾಕ್​ನಿಂದಾಗಿ ಸಿಎಂ, ಅಧಿಕಾರಿಗಳ ವರ್ಗಾವಣೆ ಕೈಬಿಟ್ಟಿತ್ತು. ಆದ್ರೆ, ಇದೀಗ ಮತ್ತೆ ವರ್ಗಾವಣೆ ಸರ್ಕಾರ ಆದೇಶ ಹೊರಡಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:14 pm, Tue, 20 June 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?