AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ವರ್ಗಾವಣೆ, 50 ಪಿಎಸ್​ಐ ಟ್ರಾನ್ಸ್​ಫರ್

ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆಜೋರಾಗಿದೆ. ಇಷ್ಟು ದಿನ ಐಎಎಸ್-ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗುತ್ತಿದ್ದವು. ಇದೀಗ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಟ್ರಾನ್ಸ್​ಫರ್ ಶುರುವಾಗಿದೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ವರ್ಗಾವಣೆ, 50 ಪಿಎಸ್​ಐ ಟ್ರಾನ್ಸ್​ಫರ್
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Aug 03, 2023 | 9:05 AM

Share

ಬೆಂಗಳೂರು (ಆ.02): ಕರ್ನಾಟಕದಲ್ಲಿ ಕಾಂಗ್ರೆಸ್‌ (Congress) ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ತಡ ಎಗ್ಗಿಲ್ಲದೆ ಅಧಿಕಾರಿಗಳ ವರ್ಗಾವಣೆ(Transfer) ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯನ್ನು ಆರಂಭಿಸಿದೆ ಎಂದು ವಿಪಕ್ಷಗಳು ಗಂಭೀರ ಆರೋಪಗಳನ್ನು ಮಾಡುತ್ತಿವೆ. ಇದರ ಬೆನ್ನಲ್ಲೇ ಇದೀಗ ಮತ್ತೆ ರಾಜ್ಯ ಸರ್ಕಾರ, ಗೃಹ ಇಲಾಖೆಯಲ್ಲಿ ಮತ್ತೊಂದು ಸುತ್ತಿನ ವರ್ಗಾವಣೆ ಮಾಡಿದೆ. ಮೊನ್ನೇ ಅಷ್ಟೇ ಬರೋಬ್ಬರಿ 211 ಇನ್ಸ್​ಪೆಕ್ಟರ್​ಗಳನ್ನು(police inspector) ವರ್ಗಾವಣೆ ಮಾಡಿದ್ದು, ಇದರಲ್ಲಿ ಬೆಳಗಾಗುವಷ್ಟರಲ್ಲೇ ವರ್ಗಾವಣೆಗೆ ತಡೆ ನೀಡಿತ್ತು. ಇಂದು(ಆಗಸ್ಟ್ 03) ಮತ್ತೆ 50 ಪಿಎಸ್​​​​ಐಗಳನ್ನು ವರ್ಗಾವಣೆಗೊಳಿಸಲಾಗಿದೆ.

ಇದನ್ನೂ ಓದಿ: Police Transfer: ಒಂದೇ ದಿನ 211 ಪೊಲೀಸ್​ ಇನ್ಸ್​ಪೆಕ್ಟರ್ ವರ್ಗಾವಣೆ, ಬೆಳಗಾಗುವಷ್ಟರಲ್ಲೇ ಕೆಲವರ ಟ್ರಾನ್ಸ್​ಫರ್​ಗೆ ತಡೆ ನೀಡಿದ ಸರ್ಕಾರ

ಮೊನ್ನೇ ಅಷ್ಟೇ ರಾಜ್ಯದ 211 ಪೊಲೀಸ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿದ್ದ ಸರ್ಕಾರ, ಬೆಳಗಾಗುವಷ್ಟರಲ್ಲೇ 19 ಪೊಲೀಸ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ತಡೆಹಿಡಿದು ವಿಪಕ್ಷಗಳ ಆರೋಪಕ್ಕೆ ಪುಷ್ಟಿ ನೀಡಿದಂತಾಗಿತ್ತು. ಈಗ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ವರ್ಗಾವಣೆಯಾಗಿದ್ದು, ಈ ಬಾರಿ ಒಟ್ಟು 50 ಪಿಎಸ್​​​​ಐಗಳನ್ನು ವರ್ಗಾವಣೆಗೊಳಿಸಲಾಗಿದೆ.

ಸಭೆ ಬಳಿಕವೂ ಬಗೆಹರಿಯದ ಗೃಹ ಇಲಾಖೆ ವರ್ಗಾವಣೆ ಸಮಸ್ಯೆ

ಗೃಹ ಇಲಾಖೆ ವರ್ಗಾವಣೆ ವಿಚಾರ ಬಗೆಹರಿದಿಲ್ಲ. ಸಿಎಂ ಗೃಹ ಸಚಿವರ ರಹಸ್ಯ ಸಭೆ ಬಳಿಕವೂ ಕೂಡ ಸಮಸ್ಯೆ ಬಗೆಹರಿದಿಲ್ಲ. ನಿನ್ನೆ ಮೊನ್ನೆ ಗೃಹ ಇಲಾಖೆ ವರ್ಗಾವಣೆ ಆದ ಬಳಿಕವೂ ಶಾಸಕರು ಮಾಜಿ ಶಾಸಕರು ಬೇಸರಗೊಂಡಿದ್ದಾರೆ. ಮಾಜಿ ಶಾಸಕರ ಪತ್ರಗಳಿಗಂತೂ ಮನ್ನಣೆಯೇ ನೀಡಿಲ್ಲ. ಕೆಲವು ಕಡೆ ಹಾಲಿ ಶಾಸಕರ ಶಿಫಾರಸುಗಳಿಗೂ ಮನ್ನಣೆ ನೀಡದೇ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸದ್ಯಕ್ಕೆ ಗೊಂದಲಗಳ ಹಿನ್ನೆಲೆಯಲ್ಲಿ ವರ್ಗಾವಣೆಗೆ ತಡೆ ನೀಡಲಾಗಿತ್ತು.

ದೆಹಲಿಯಲ್ಲಿ ಸಭೆ ಬಳಿಕವೂ ಕೂಡ ಸಮಸ್ಯೆ ಬಗೆಹರಿಯದೇ ಇದ್ದರೆ ಶಾಸಕರು ಮತ್ತಷ್ಟು ಅಸಮಧಾನಗೊಳ್ಳಬಹುದು. ಇನ್ನು ಸಿಎಂ ಬಳಿಯೇ ಉಳಿದ ಎಲ್ಲ ಇಲಾಖೆಗಳ ವರ್ಗಾವಣೆ ಫೈಲ್ ಗಳೂ ಕೂಡ ತಲುಪಿವೆ. ವರ್ಗಾವಣೆ ವಿಚಾರದಲ್ಲಿ ಸಿಎಂ ಕೂಡ ತಮ್ಮ ಬೇಡಿಕೆಗಳಿಗೆ ಮನ್ನಣೆ ನೀಡುತ್ತಿಲ್ಲ ಎಂದು ಶಾಸಕರು ಅಸಮಾಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು