Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿಎಸ್​ಪಿ-ಟಿಎಸ್​ಪಿಯ 9 ಸಾವಿರ ಕೋಟಿ ರೂ. ಹಣ ಗ್ಯಾರಂಟಿಗೆ ಬಳಸಿಕೊಂಡ ಸರ್ಕಾರ

ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಬಳಸಿಕೊಂಡಿರುವುದಾಗಿ ವಿಧಾನ ಪರಿಷತ್​ ನಲ್ಲಿ ಒಪ್ಪಿಕೊಂಡಿದೆ. ಇದಕ್ಕೆ ಬಿಜೆಪಿ ಮತ್ತು ಜೆಡಿಎಸ್ ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ವಿಪಕ್ಷಗಳು ಸರ್ಕಾರದ ವಿರುದ್ಧ ದಲಿತ ವಿರೋಧಿ ನೀತಿ ಎಂದು ಆರೋಪಿಸಿದವು. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನ ವಿಚಾರವಾಗಿ ವಿಧಾನ ಪರಿಷತ್​ನಲ್ಲಿ ಸರ್ಕಾರ ಮತ್ತು ವಿಪಕ್ಷ ನಾಯಕರ ನಡುವೆ ವಾಗ್ವಾದ ನಡೆಯಿತು.

ಎಸ್​ಸಿಎಸ್​ಪಿ-ಟಿಎಸ್​ಪಿಯ 9 ಸಾವಿರ ಕೋಟಿ ರೂ. ಹಣ ಗ್ಯಾರಂಟಿಗೆ ಬಳಸಿಕೊಂಡ ಸರ್ಕಾರ
ವಿಧಾನಸೌಧ, ಗ್ಯಾರಂಟಿ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on:Mar 14, 2025 | 1:12 PM

ಬೆಂಗಳೂರು, ಮಾರ್ಚ್​ 14: ಪ್ರಸಕ್ತ ಹಣಕಾಸು ವರ್ಷದಲ್ಲೂ ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ (Guarantee) ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ (SCSP-TSP) ಅನುದಾನವನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಆರೋಪಿಸುತ್ತಿವೆ. ಈ ನಡುವೆ ಗ್ಯಾರಂಟಿ ಯೋಜನೆಗಳಿಗೆ ಎಸ್​ಸಿಎಸ್​ಪಿ-ಟಿಎಸ್​ಪಿ ಅನುದಾನ ಬಳಕೆ ವಿಚಾರವನ್ನು ವಿಧಾನ ಪರಿಷತ್​ನಲ್ಲಿ ಸದಸ್ಯರಾದ ಹೇಮಲತಾ ನಾಯಕ್, ಟಿ.ಎ.ಶರವಣ ಪ್ರಸ್ತಾಪಿಸಿದರು.

ಗ್ಯಾರಂಟಿಗಳಿಗೆ ಪ್ರತ್ಯೇಕವಾಗಿ 52 ಸಾವಿರ ಕೋಟಿ ಮೀಸಲಿಟ್ಟಿದ್ದೀರಿ. ಆದರೂ, ಗ್ಯಾರಂಟಿ ಯೋಜನೆಗಳಿಗೆ ಎಸ್​ಸಿಎಸ್​ಪಿ-ಟಿಎಸ್​ಪಿ ಹಣ ಯಾಕೆ ಅಗತ್ಯವಿದೆ?, ಹಾಗಾದರೆ ಬಜೆಟ್​​ನಲ್ಲಿ ಮೀಸಲಿಟ್ಟ ಈ ಹಣ ಎಲ್ಲಿಗೆ ಹೋಯ್ತು? ಹೇಳೋದೊಂದು ಮಾಡೋದೊಂದು ಎಂದು ಹೇಮಲತಾ ನಾಯಕ್​ ಪ್ರಶ್ನಿಸಿದರು.

ಸಾರಿಗೆ ಬಸ್​ಗಳಲ್ಲಿ ಓಡಾಡುವ ಎಸ್​ಸಿ, ಎಸ್​ಟಿ ಮಹಿಳೆಯರ ಸಂಖ್ಯೆ ಎಷ್ಟು? ಸರ್ಕಾರದ ಬಳಿ ಫಲಾನುಭವಿಗಳ ಸಂಖ್ಯೆಯೇ ಇಲ್ಲ ಅನಿಸುತ್ತದೆ ಎಂದು ಟಿ.ಎ.ಶರವಣ ಪ್ರಶ್ನಿಸಿದರು.

ಇದನ್ನೂ ಓದಿ
Image
ನಿಮ್ಹಾನ್ಸ್​​​​ನಲ್ಲಿ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ನೇರ ಸಂದರ್ಶನ
Image
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
Image
ಪೋಕ್ಸೋ ಕೇಸ್​: ಸಮನ್ಸ್​ಗೆ ತಡೆ ನೀಡಿದ ಹೈಕೋರ್ಟ್, ಯಡಿಯೂರಪ್ಪಗೆ ರಿಲೀಫ್
Image
ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡ ಆಯೋಗ

ಹೇಮಲತಾ ನಾಯಕ್ ಮತ್ತು ಟಿ.ಎ ಶರವಣ ಪ್ರಶ್ನೆಗೆ ಸಚಿವ ಮಹದೇವಪ್ಪ ಉತ್ತರ ನೀಡಿದರು. “2011ರ ಜನಗಣತಿ ಪ್ರಕಾರ 21.78 ಲಕ್ಷ ಎಸ್​ಸಿ ಕುಟುಂಬಗಳಿವೆ. 8.76 ಲಕ್ಷ ಎಸ್​ಟಿ ಕುಟುಂಬಗಳಿವೆ. ಈ ಎಲ್ಲಾ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆ ಲಭಿಸುತ್ತಿದೆ. 52.10 ಲಕ್ಷ ಎಸ್​ಸಿ ಮಹಿಳೆಯರು, 21.42 ಲಕ್ಷ ಎಸ್​ಟಿ ಮಹಿಳೆಯರಿಗೆ ಗ್ಯಾರಂಟಿ ಯೋಜನೆ ತಲುಪುತ್ತಿದೆ. ಎಸ್​ಸಿ, ಎಸ್​ಟಿ ಸಮುದಾಯದ ಹಣವನ್ನು ಬೇರೆ ಯೋಜನೆಗೆ ಬಳಸುವುದಿಲ್ಲ. ಬೇರೆ ಯೋಜನೆಗೆ ಆ ಹಣ ಬಳಸುವ ಪ್ರಮೆಯವೇ ಬರುವುದಿಲ್ಲ” ಎಂದು ಉತ್ತರಿಸಿದರು.

ಸರ್ಕಾರ ಹಾರಿಕೆ ಉತ್ತರವನ್ನು ಕೊಡುತ್ತಿದೆ. ಬೇರೆ ಉದ್ದೇಶಗಳಿಗೆ ಎಸ್​ಸಿಎಸ್​ಪಿ-ಟಿಎಸ್​ಪಿ ಹಣ ಬಳಸಬಾರದು. ಎಸ್​ಸಿಎಸ್​ಪಿ-ಟಿಎಸ್​ಪಿ ಯೋಜನೆಗೆ ಘೋಷಣೆ ಮಾಡಿದ್ದು 42 ಸಾವಿರ ಕೋಟಿ ರೂ. ಆದರೆ ಸಿಗುತ್ತಿರುವುದು ಕೇವಲ 7 ಸಾವಿರ ಕೋಟಿ ರೂ. ದಲಿತರಿಗೆ ಈ ಸರ್ಕಾರದಿಂದ ಆದಷ್ಟು ಅನ್ಯಾಯ ಬೇರೆ ಯಾರಿಂದಲೂ ಆಗಿಲ್ಲ. ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಮೋಸ ಆಗುತ್ತಿದೆ. ದಲಿತರಿಗೆ ಮೋಸ ಆಗುತ್ತಿರುವುದನ್ನು ಕೇಳಬಾರದಾ? ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆಸಿದರು.

ಉತ್ತರದ ವೇಳೆ ಎಸ್​ಸಿಎಸ್​ಪಿ-ಟಿಎಸ್​ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿದ ದಾಖಲೆಯನ್ನು ಸರ್ಕಾರ ನೀಡಿದೆ. ಎಸ್​ಸಿಎಸ್​ಪಿ-ಟಿಎಸ್​ಪಿ ಯೋಜನೆಗೆ ​2024-25 ರಲ್ಲಿ 42 ಕೋಟಿ ರೂ. ಮೀಸಲು ಇಡಲಾಗಿತ್ತು. ಇದರಲ್ಲಿ 14282 ಕೋಟಿ ರೂ. ಗ್ಯಾರಂಟಿಗೆ ಮೀಸಲು. ಇದರಲ್ಲಿ 9797 ಕೋಟಿ ರೂ. ಗ್ಯಾರಂಟಿಗೆ ಬಳಕೆ ಮಾಡಲಾಗಿದೆ ಎಂದು ಉತ್ತರ ನೀಡಿದೆ.

ಇದನ್ನೂ ಓದಿ: ದಲಿತರ ಬಗ್ಗೆ ಕಾಳಜಿ ಇದ್ರೆ ರಾಷ್ಟ್ರ ಮಟ್ಟದಲ್ಲಿ SCSP/TSPI ಕಾಯ್ದೆ ಜಾರಿಗೆ ತನ್ನಿ: ಮೋದಿಗೆ ಸಿಎಂ ಸವಾಲ್

ಎಸ್​ಸಿಎಸ್​ಪಿ-ಟಿಎಸ್​ಪಿ ಹಣವನ್ನು ಗ್ಯಾರಂಟಿ ಬಳಸುವ ವಿಚಾರವಾಗಿ ಆಡಳಿತ ಮತ್ತು ವಿಪಕ್ಷ ನಾಯಕರ ನಡುವೆ ವಾಗ್ವಾದ ನಡೆಯಿತು. ಈ ಹಿನ್ನೆಲೆಯಲ್ಲಿ ಪರಿಷತ್​ ಕಲಾಪವನ್ನು ಮತ್ತೆ ಮುಂದೂಡಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:05 pm, Fri, 14 March 25

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ