AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿಎಸ್​ಪಿ-ಟಿಎಸ್​ಪಿಯ 9 ಸಾವಿರ ಕೋಟಿ ರೂ. ಹಣ ಗ್ಯಾರಂಟಿಗೆ ಬಳಸಿಕೊಂಡ ಸರ್ಕಾರ

ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಬಳಸಿಕೊಂಡಿರುವುದಾಗಿ ವಿಧಾನ ಪರಿಷತ್​ ನಲ್ಲಿ ಒಪ್ಪಿಕೊಂಡಿದೆ. ಇದಕ್ಕೆ ಬಿಜೆಪಿ ಮತ್ತು ಜೆಡಿಎಸ್ ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ವಿಪಕ್ಷಗಳು ಸರ್ಕಾರದ ವಿರುದ್ಧ ದಲಿತ ವಿರೋಧಿ ನೀತಿ ಎಂದು ಆರೋಪಿಸಿದವು. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನ ವಿಚಾರವಾಗಿ ವಿಧಾನ ಪರಿಷತ್​ನಲ್ಲಿ ಸರ್ಕಾರ ಮತ್ತು ವಿಪಕ್ಷ ನಾಯಕರ ನಡುವೆ ವಾಗ್ವಾದ ನಡೆಯಿತು.

ಎಸ್​ಸಿಎಸ್​ಪಿ-ಟಿಎಸ್​ಪಿಯ 9 ಸಾವಿರ ಕೋಟಿ ರೂ. ಹಣ ಗ್ಯಾರಂಟಿಗೆ ಬಳಸಿಕೊಂಡ ಸರ್ಕಾರ
ವಿಧಾನಸೌಧ, ಗ್ಯಾರಂಟಿ
ಪ್ರಸನ್ನ ಗಾಂವ್ಕರ್​
| Edited By: |

Updated on:Mar 14, 2025 | 1:12 PM

Share

ಬೆಂಗಳೂರು, ಮಾರ್ಚ್​ 14: ಪ್ರಸಕ್ತ ಹಣಕಾಸು ವರ್ಷದಲ್ಲೂ ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ (Guarantee) ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ (SCSP-TSP) ಅನುದಾನವನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಆರೋಪಿಸುತ್ತಿವೆ. ಈ ನಡುವೆ ಗ್ಯಾರಂಟಿ ಯೋಜನೆಗಳಿಗೆ ಎಸ್​ಸಿಎಸ್​ಪಿ-ಟಿಎಸ್​ಪಿ ಅನುದಾನ ಬಳಕೆ ವಿಚಾರವನ್ನು ವಿಧಾನ ಪರಿಷತ್​ನಲ್ಲಿ ಸದಸ್ಯರಾದ ಹೇಮಲತಾ ನಾಯಕ್, ಟಿ.ಎ.ಶರವಣ ಪ್ರಸ್ತಾಪಿಸಿದರು.

ಗ್ಯಾರಂಟಿಗಳಿಗೆ ಪ್ರತ್ಯೇಕವಾಗಿ 52 ಸಾವಿರ ಕೋಟಿ ಮೀಸಲಿಟ್ಟಿದ್ದೀರಿ. ಆದರೂ, ಗ್ಯಾರಂಟಿ ಯೋಜನೆಗಳಿಗೆ ಎಸ್​ಸಿಎಸ್​ಪಿ-ಟಿಎಸ್​ಪಿ ಹಣ ಯಾಕೆ ಅಗತ್ಯವಿದೆ?, ಹಾಗಾದರೆ ಬಜೆಟ್​​ನಲ್ಲಿ ಮೀಸಲಿಟ್ಟ ಈ ಹಣ ಎಲ್ಲಿಗೆ ಹೋಯ್ತು? ಹೇಳೋದೊಂದು ಮಾಡೋದೊಂದು ಎಂದು ಹೇಮಲತಾ ನಾಯಕ್​ ಪ್ರಶ್ನಿಸಿದರು.

ಸಾರಿಗೆ ಬಸ್​ಗಳಲ್ಲಿ ಓಡಾಡುವ ಎಸ್​ಸಿ, ಎಸ್​ಟಿ ಮಹಿಳೆಯರ ಸಂಖ್ಯೆ ಎಷ್ಟು? ಸರ್ಕಾರದ ಬಳಿ ಫಲಾನುಭವಿಗಳ ಸಂಖ್ಯೆಯೇ ಇಲ್ಲ ಅನಿಸುತ್ತದೆ ಎಂದು ಟಿ.ಎ.ಶರವಣ ಪ್ರಶ್ನಿಸಿದರು.

ಇದನ್ನೂ ಓದಿ
Image
ನಿಮ್ಹಾನ್ಸ್​​​​ನಲ್ಲಿ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ನೇರ ಸಂದರ್ಶನ
Image
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
Image
ಪೋಕ್ಸೋ ಕೇಸ್​: ಸಮನ್ಸ್​ಗೆ ತಡೆ ನೀಡಿದ ಹೈಕೋರ್ಟ್, ಯಡಿಯೂರಪ್ಪಗೆ ರಿಲೀಫ್
Image
ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡ ಆಯೋಗ

ಹೇಮಲತಾ ನಾಯಕ್ ಮತ್ತು ಟಿ.ಎ ಶರವಣ ಪ್ರಶ್ನೆಗೆ ಸಚಿವ ಮಹದೇವಪ್ಪ ಉತ್ತರ ನೀಡಿದರು. “2011ರ ಜನಗಣತಿ ಪ್ರಕಾರ 21.78 ಲಕ್ಷ ಎಸ್​ಸಿ ಕುಟುಂಬಗಳಿವೆ. 8.76 ಲಕ್ಷ ಎಸ್​ಟಿ ಕುಟುಂಬಗಳಿವೆ. ಈ ಎಲ್ಲಾ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆ ಲಭಿಸುತ್ತಿದೆ. 52.10 ಲಕ್ಷ ಎಸ್​ಸಿ ಮಹಿಳೆಯರು, 21.42 ಲಕ್ಷ ಎಸ್​ಟಿ ಮಹಿಳೆಯರಿಗೆ ಗ್ಯಾರಂಟಿ ಯೋಜನೆ ತಲುಪುತ್ತಿದೆ. ಎಸ್​ಸಿ, ಎಸ್​ಟಿ ಸಮುದಾಯದ ಹಣವನ್ನು ಬೇರೆ ಯೋಜನೆಗೆ ಬಳಸುವುದಿಲ್ಲ. ಬೇರೆ ಯೋಜನೆಗೆ ಆ ಹಣ ಬಳಸುವ ಪ್ರಮೆಯವೇ ಬರುವುದಿಲ್ಲ” ಎಂದು ಉತ್ತರಿಸಿದರು.

ಸರ್ಕಾರ ಹಾರಿಕೆ ಉತ್ತರವನ್ನು ಕೊಡುತ್ತಿದೆ. ಬೇರೆ ಉದ್ದೇಶಗಳಿಗೆ ಎಸ್​ಸಿಎಸ್​ಪಿ-ಟಿಎಸ್​ಪಿ ಹಣ ಬಳಸಬಾರದು. ಎಸ್​ಸಿಎಸ್​ಪಿ-ಟಿಎಸ್​ಪಿ ಯೋಜನೆಗೆ ಘೋಷಣೆ ಮಾಡಿದ್ದು 42 ಸಾವಿರ ಕೋಟಿ ರೂ. ಆದರೆ ಸಿಗುತ್ತಿರುವುದು ಕೇವಲ 7 ಸಾವಿರ ಕೋಟಿ ರೂ. ದಲಿತರಿಗೆ ಈ ಸರ್ಕಾರದಿಂದ ಆದಷ್ಟು ಅನ್ಯಾಯ ಬೇರೆ ಯಾರಿಂದಲೂ ಆಗಿಲ್ಲ. ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಮೋಸ ಆಗುತ್ತಿದೆ. ದಲಿತರಿಗೆ ಮೋಸ ಆಗುತ್ತಿರುವುದನ್ನು ಕೇಳಬಾರದಾ? ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆಸಿದರು.

ಉತ್ತರದ ವೇಳೆ ಎಸ್​ಸಿಎಸ್​ಪಿ-ಟಿಎಸ್​ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿದ ದಾಖಲೆಯನ್ನು ಸರ್ಕಾರ ನೀಡಿದೆ. ಎಸ್​ಸಿಎಸ್​ಪಿ-ಟಿಎಸ್​ಪಿ ಯೋಜನೆಗೆ ​2024-25 ರಲ್ಲಿ 42 ಕೋಟಿ ರೂ. ಮೀಸಲು ಇಡಲಾಗಿತ್ತು. ಇದರಲ್ಲಿ 14282 ಕೋಟಿ ರೂ. ಗ್ಯಾರಂಟಿಗೆ ಮೀಸಲು. ಇದರಲ್ಲಿ 9797 ಕೋಟಿ ರೂ. ಗ್ಯಾರಂಟಿಗೆ ಬಳಕೆ ಮಾಡಲಾಗಿದೆ ಎಂದು ಉತ್ತರ ನೀಡಿದೆ.

ಇದನ್ನೂ ಓದಿ: ದಲಿತರ ಬಗ್ಗೆ ಕಾಳಜಿ ಇದ್ರೆ ರಾಷ್ಟ್ರ ಮಟ್ಟದಲ್ಲಿ SCSP/TSPI ಕಾಯ್ದೆ ಜಾರಿಗೆ ತನ್ನಿ: ಮೋದಿಗೆ ಸಿಎಂ ಸವಾಲ್

ಎಸ್​ಸಿಎಸ್​ಪಿ-ಟಿಎಸ್​ಪಿ ಹಣವನ್ನು ಗ್ಯಾರಂಟಿ ಬಳಸುವ ವಿಚಾರವಾಗಿ ಆಡಳಿತ ಮತ್ತು ವಿಪಕ್ಷ ನಾಯಕರ ನಡುವೆ ವಾಗ್ವಾದ ನಡೆಯಿತು. ಈ ಹಿನ್ನೆಲೆಯಲ್ಲಿ ಪರಿಷತ್​ ಕಲಾಪವನ್ನು ಮತ್ತೆ ಮುಂದೂಡಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:05 pm, Fri, 14 March 25

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ