AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Govt Employees Strike: ಕರ್ತವ್ಯಕ್ಕೆ ಹಾಜರಾಗದ ನೌಕರರಿಗೆ ಸರ್ಕಾರ ಖಡಕ್​ ಎಚ್ಚರಿಕೆ, ಆದೇಶದಲ್ಲೇನಿದೆ?

7ನೇ ವೇತನ ಆಯೋಗ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರಕ್ಕೆ ಮುಂದಾಗಿರುವ ಸರ್ಕಾರಿ ನೌಕರರಿಗೆ ಸರ್ಕಾರ ಎಚ್ಚರಿಕೆ ಸುತ್ತೋಲೆ ಹೊರಡಿಸಿದೆ.

Govt Employees Strike: ಕರ್ತವ್ಯಕ್ಕೆ ಹಾಜರಾಗದ ನೌಕರರಿಗೆ ಸರ್ಕಾರ ಖಡಕ್​ ಎಚ್ಚರಿಕೆ, ಆದೇಶದಲ್ಲೇನಿದೆ?
ರಮೇಶ್ ಬಿ. ಜವಳಗೇರಾ
| Updated By: Digi Tech Desk|

Updated on:Mar 01, 2023 | 12:11 PM

Share

ಬೆಂಗಳೂರು: 7ನೇ ವೇತನ ಆಯೋಗ (7th pay commission)ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಇಂದಿನಿಂದ (ಮಾರ್ಚ್​ 01) ಮುಷ್ಕರ ನಡೆಸುತ್ತಿರುವ ತನ್ನ ನೌಕರರಿಗೆ (Karnataka Government Employees) ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ. ಅನುಮತಿ ಪಡೆಯದೇ ಕರ್ತವ್ಯಕ್ಕೆ ಗೈರಾದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ನಿರ್ಧಾರ: ಮಧ್ಯಂತರ ಪರಿಹಾರ ವೇತನ ಘೋಷಿಸಿದ ಬೊಮ್ಮಾಯಿ

ಕೆಲಸಕ್ಕೆ ಗೈರಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿರುವ ನೌಕರರ ನಡೆಗೆ ಸುತ್ತೋಲೆಯ ಮೂಲಕ ಸರ್ಕಾರ ಎಚ್ಚರಿಕೆ ನೀಡಿದೆ. ಅನುಮತಿ ಪಡೆಯದೇ ಗೈರಾದರೆ ಯಾವುದೇ ಸರ್ಕಾರದ ಅಧಿಕೃತ ಕೆಲಸ ನಡೆದಿಲ್ಲ ಎಂದು ತೀರ್ಮಾನಿಸಲಾಗುತ್ತದೆ ಮತ್ತು ಶಿಸ್ತುಕ್ರಮದ ತೆಗೆದುಕೊಳ್ಳಲಾಗುತ್ತದೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

ಸರ್ಕಾರದ ಸುತ್ತೋಲೆಯಲ್ಲೇನಿದೆ?

ಕಚೇರಿಯ ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ತಿಳಿಯಪಡಿಸುವುದೇನೆಂದರೆ, ಸರ್ಕಾರಿ ನೌಕರರು ಕಚೇರಿಗೆ ಅನಿವಾರ್ಯ ಕಾರಣಗಳಿಂದ ಹಾಜರಾಗಲು ಸಾಧ್ಯವಾಗದೇ ಇದ್ದಲ್ಲಿ ಮುಂಚಿತವಾಗಿ ಅಥವಾ ಅಧಿಕೃತವಾಗಿ ರಜೆ ಮಂಜೂರಾತಿಯನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ. ಇದಕ್ಕೆ ವಿರುದ್ಧವಾಗಿ ಪೂರ್ವಭಾವಿಯಾಗಿ ರಜೆ ಮಂಜೂರಾತಿ ಪಡೆಯದೆ ಕರ್ತವ್ಯಕ್ಕೆ ಗೈರು ಹಾಜರಾದಲ್ಲಿ Dies Non ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಸರ್ಕಾರದ ವಿರುದ್ಧ ನೌಕರರ ಸಮರ.. ಇಂದಿನಿಂದ ಮುಷ್ಕರ: ಬಹುತೇಕ ಎಲ್ಲಾ ಸರ್ಕಾರಿ ಸೇವೆಗಳು ಬಂದ್

ವಿವಿಧ ಇಲಾಖೆಯ ಸುಮಾರು 10 ಲಕ್ಷ ರಾಜ್ಯ ಸರ್ಕಾರಿ ನೌಕರರು ಕರ್ತವವ್ಯಕ್ಕೆ ಹಾಜರಾಗದೆ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ಆಸ್ಪಯತ್ರೆಗಳಲ್ಲಿ ಓಪಿಡಿ ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಇನ್ನು ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಆಗಮಿಸಿ ಶಿಕ್ಷಕರು ಇಲ್ಲದೇ ವಾಪಸ್ ಮನೆ ಹೋಗುತ್ತಿದ್ದಾರೆ. ಇನ್ನು ಪ್ರಥಮ ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ಪೂರ್ವಭಾವಿ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಮತ್ತೊಂದೆಡೆ ಕೆಲವೆಡೆ ನೌಕರರು ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Published On - 11:46 am, Wed, 1 March 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್