Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿ ಸರ್ಕಾರದ 34 ನಿಗಮಗಳು ನಷ್ಟದಲ್ಲಿ, 16 ಬಂದ್

ಕರ್ನಾಟಕ ಸರ್ಕಾರವು ವಿಧಾನ ಪರಿಷತ್ತಿನಲ್ಲಿ 125 ಸರ್ಕಾರಿ ಸಾರ್ವಜನಿಕ ಉದ್ದಿಮೆಗಳ ಪೈಕಿ 16 ಮುಚ್ಚಿವೆ ಎಂದು ಘೋಷಿಸಿದೆ. ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಸೇರಿದಂತೆ 34 ಉದ್ದಿಮೆಗಳು ನಷ್ಟದಲ್ಲಿದ್ದು, ಬೆಂಗಳೂರು ಉಪನಗರ ರೈಲು ಮತ್ತು ವಿಮಾನ ನಿಲ್ದಾಣ ರೈಲು ಸಂಪರ್ಕ ನಿಗಮಗಳು ಸೇರಿದಂತೆ ಹಲವು ಉದ್ದಿಮೆಗಳು ಬಂದ್ ಆಗಿವೆ. ನಷ್ಟದಲ್ಲಿರುವ ಉದ್ದಿಮೆಗಳ ಮೌಲ್ಯಮಾಪನಕ್ಕೆ ಸರ್ಕಾರ ಸೂಚನೆ ನೀಡಿದೆ.

ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿ ಸರ್ಕಾರದ 34 ನಿಗಮಗಳು ನಷ್ಟದಲ್ಲಿ, 16 ಬಂದ್
ಕೆಎಸ್​ಆರ್​ಟಿಸಿ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on: Mar 11, 2025 | 2:53 PM

ಬೆಂಗಳೂರು, ಮಾರ್ಚ್​ 11: ಕರ್ನಾಟಕದ 125 ಸರ್ಕಾರಿ ಸಾರ್ವಜನಿಕ ಉದ್ದಿಮೆಗಳ ಪೈಕಿ 16 ಉದ್ದಿಮೆಗಳ ಬಾಗಿಲು ಮುಚ್ಚಿವೆ ಎಂದು ಸರ್ಕಾರ ವಿಧಾನ ಪರಿಷತ್​ನಲ್ಲಿ (Legislative Council) ಹೇಳಿದೆ. ಪರಿಷತ್ ಸದಸ್ಯರಾದ ಟಿಎ ಶರವಣ (TA Sharavana) ಹಾಗೂ ಕೆಎಸ್ ನವೀನ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸರ್ಕಾರ, ಬಿಎಂಟಿಸಿ ಕೆಎಸ್​ಆರ್​ಟಿಸಿ ಮತ್ತು ಐದು ವಿದ್ಯುತ್ ಸರಬರಾಜು ಕಂಪನಿಗಳು ಸೇರಿದಂತೆ 34 ಸಾರ್ವಜನಿಕ ಉದ್ದಿಮೆಗಳು ನಷ್ಟದಲ್ಲಿ ನಡೆಯುತ್ತಿವೆ ತಿಳಿಸಿದೆ.

ನಷ್ಟದಲ್ಲಿರುವ ಹಿನ್ನೆಲೆಯಲ್ಲಿ 16ಕ್ಕೂ ಹೆಚ್ಚು ಸರ್ಕಾರಿ ಸಾರ್ವಜನಿಕ ಉದ್ದಿಮೆಗಳ ಬಾಗಿಲು ಮುಚ್ಚಲಾಗಿದೆ. ಬೆಂಗಳೂರು ಉಪನಗರ ರೈಲು ಕಂಪನಿ, ಬೆಂಗಳೂರು ವಿಮಾನ ನಿಲ್ದಾಣ ರೈಲು ಸಂಪರ್ಕ ನಿಗಮ ಬಂದ್​ ಆಗಿವೆ. ಆರ್ಥಿಕವಾಗಿ ಭಾರೀ ನಷ್ಟದಲ್ಲಿರುವ ಸಾರ್ವಜನಿಕ ಉದ್ದಿಮೆಗಳನ್ನು ನಡೆಸುವ ಕುರಿತು ಮೌಲ್ಯಮಾಪನ ಕೈಗೊಳ್ಳಲು ಸರ್ಕಾರ ಸೂಚನೆ ನೀಡಿದೆ.

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ವಿಚಾರ ಪ್ರಸ್ತಾಪ

ಬುಡಾ ಅಡಿಯಲ್ಲಿ ಎಲ್ಲ ಲೇಔಟ್ ಅನುಮತಿಗಳು ಸ್ಥಗಿತ ಆಗಿವೆ. ಬುಡಾದಲ್ಲಿ ಏನೇನೂ ಕೆಲಸ ಆಗಿಲ್ಲ. ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿಯಮದ ಪ್ರಕಾರ ಸಭೆ ಆಗುತ್ತಿಲ್ಲ. ಶಾಸಕರ ದೂರಿನ ಅನ್ವಯ ಲೋಕಾಯುಕ್ತ ದಾಳಿ ಮಾಡಿತ್ತು. ಸದ್ಯ ಬಳ್ಳಾರಿ ನಗರಾಭಿವೃದ್ಧಿ ಪಾಲಿಕೆಯಲ್ಲಿ ಕಮೀಷನರ್ ಇಲ್ಲ. ಹೀಗಾಗಿ ಯಾವುದೇ ಕೆಲಸ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಗುತ್ತಿಲ್ಲ. ಬುಡಾ ಅಡಿಯಲ್ಲಿ ಎಲ್ಲಾ ಲೇಔಟ್ ಗಳ ಕೆಲಸ ನಿಂತಿದೆ. ಈ ಬಗ್ಗೆ ಕ್ರಮ ಆಗಬೇಕು ಎಂದು ವೈಎಂ ಸತೀಶ್ ಸರ್ಕಾರಕ್ಕೆ ಪ್ರಶ್ನೆಸಿದರು.

ಇದನ್ನೂ ಓದಿ
Image
ಪೊಲೀಸ್​ ಠಾಣೆಗೆ ಬೆಂಕಿ ಹಚ್ಚಿದ್ದವರಿಗೆ ಕಾದಿದೆ ಶಿಕ್ಷೆ: ಆರೋಪ ಸಾಬೀತು
Image
ತೆರಿಗೆ ನೀಡುವ ಆಧಾರದಲ್ಲಿ ಸಿದ್ದರಾಮಯ್ಯ ಅನುದಾನ ಹಂಚಿಕೆ ಮಾಡಲಿ: ಪ್ರತಾಪ್
Image
ಮಸೀದಿ ತೆರೆಸಿ ನೋಡಿ: ಸಿದ್ದರಾಮಯ್ಯಗೆ ಪ್ರತಾಪ್​ ಸಿಂಹ ಸವಾಲು
Image
ವಿರೋಧ ಪಕ್ಷಗಳ ಶಾಸಕರು ಅನುದಾನ ಕೇಳೋದ್ರಲ್ಲಿ ತಪ್ಪಿಲ್ಲ: ಪ್ರಿಯಾಂಕ್ ಖರ್ಗೆ

ಇದನ್ನೂ ನೋಡಿ: ಸದನದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತಾಡುವಾಗ ಶಿವಕುಮಾರ್ ಪಕ್ಷದ ಶಾಸಕನನ್ನು ಗದರಿದ್ದು ಯಾಕೆ ಗೊತ್ತಾ?

ಬುಡಾದ ಕೊನೆ ಸಭೆ 2024ರ ಜುಲೈನಲ್ಲಿ ನಡೆದಿದೆ. ಈ ಬಳಿಕ ಮತ್ತೆ ಸಭೆ ನಡೆದಿಲ್ಲ. ಬುಡಾದ ಮೇಲೆ ‌ಲೋಕಾಯುಕ್ತ ದಾಳಿ ಆಗಿ 6 ಜನರ ಬಂಧನವಾಗಿದೆ. ಲೋಕಾಯುಕ್ತ ತನಿಖೆ ಆದ ಹಿನ್ನಲೆಯಲ್ಲಿ ಯಾವುದೇ ಪ್ರಕ್ರಿಯೆ ಮಾಡಲು ಅನುಮತಿ ಕೊಟ್ಟಿಲ್ಲ. ಮಾಡದೇ ಇರುವ ತಪ್ಪಿಗೆ ಮುಡಾದಲ್ಲಿ ಏನೇನು ಅಪಾದನೆ ಮಾಡಿದರು ಅಂತ ಎಲ್ಲರಿಗೂ ಗೊತ್ತಿದೆ. ತಣ್ಣಗಿರುವ ಮೈಸೂರು ಮುಡಾದಲ್ಲಿ ದೊಡ್ಡ ಕಾಟ ಕೊಟ್ಟರು. ಬುಡಾದಲ್ಲಿ ಈ ತರಹ ಆಗಬಾರದು ಅಂತ ತಡವಾಗಿ ಆದರೂ ಪರವಾಗಿಲ್ಲ ಸರಿಯಾಗಿ ಆಗಲಿ ಅನ್ನೋದು ನನ್ನ ಅನಿಸಿಕೆ. ಹೀಗಾಗಿ ತನಿಖೆಗೆ ಆದೇಶ ಮಾಡಲಾಗಿದೆ. ಅಧಿವೇಶನ ಮುಗಿದ ಬಳಿಕ ಸಭೆ ಮಾಡಿ ಬುಡಾದಲ್ಲಿ ವ್ಯವಸ್ಥೆ ಸರಿ ಮಾಡಲು ಕ್ರಮವಹಿಸುತ್ತೇವೆ ಎಂದು ಸಚಿವ ಭೈರತಿ ಸುರೇಶ್ ಉತ್ತರಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಯ್ಯೋ ಕರ್ಮವೇ..ನಿಂತ ಕಾರಿನ ನಾಲ್ಕು ಟೈರ್ ಬಿಚ್ಚಿಕೊಂಡು ಹೋದ ಖದೀಮರು!
ಅಯ್ಯೋ ಕರ್ಮವೇ..ನಿಂತ ಕಾರಿನ ನಾಲ್ಕು ಟೈರ್ ಬಿಚ್ಚಿಕೊಂಡು ಹೋದ ಖದೀಮರು!
ಪುನೀತ್ ಸಮಾಧಿಗೆ ಶಿವಣ್ಣ-ಗೀತಕ್ಕ ಭೇಟಿ; ಭಾವುಕರಾದ ದಂಪತಿ
ಪುನೀತ್ ಸಮಾಧಿಗೆ ಶಿವಣ್ಣ-ಗೀತಕ್ಕ ಭೇಟಿ; ಭಾವುಕರಾದ ದಂಪತಿ
ಯುವ ಪದಾಧಿಕಾರಿಗಳಿಗೆ ಶಿಸ್ತಿನ ಮಹತ್ವ ಬೋಧಿಸಿದ ಶಿವಕುಮಾರ್
ಯುವ ಪದಾಧಿಕಾರಿಗಳಿಗೆ ಶಿಸ್ತಿನ ಮಹತ್ವ ಬೋಧಿಸಿದ ಶಿವಕುಮಾರ್
ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!