AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಮೊಂಡುತನ ಹೆಚ್ಚು ದಿನ ನಡೆಯದು: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ

ಇತ್ತ ಇಂದೂ ಸಾರಿಗೆ ಸಿಬ್ಬಂದಿ ಮುಷ್ಕರ ಮುಂದುವರೆದಿದೆ. ಬೆಂಗಳೂರಿನ ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ವೋಲ್ವೋ ಬಸ್‌ ಮೇಲೆ ಕಲ್ಲೆಸೆತ ನಡೆಸಲಾಗಿದೆ. ಬೆಳಗ್ಗೆ 8.30 ರ ಸುಮಾರಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬಂದಿದ್ದ ಬಸ್ ಪ್ರಯಾಣಿಕರನ್ನು ಇಳಿಸುವ ವೇಳೆ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ.

ಸರ್ಕಾರದ ಮೊಂಡುತನ ಹೆಚ್ಚು ದಿನ ನಡೆಯದು: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ
guruganesh bhat
|

Updated on: Apr 15, 2021 | 9:22 PM

Share

ಬೆಂಗಳೂರು: ಸಾರಿಗೆ ಸಂಸ್ಥೆಯಿಂದ ರಿಯಾಯಿತಿಯಲ್ಲಿ ನೀಡುವ ಬಸ್​ಪಾಸ್​ನ ಬಾಕಿ ಹಣ 3400 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಬೇಕಿದ್ದು, ಅದರಲ್ಲಿ ಸಾರಿಗೆ ನೌಕರರ ಸಂಬಳಕ್ಕಾಗಿ ಈಗಾಗಲೇ 1920 ಕೋಟಿ ಬಿಡುಗಡೆ ಮಾಡಿದೆ. ಆದರೆ ಉಳಿದ ಬಾಕಿ ಹಣವನ್ನು ಇನ್ನೂ ಬಿಡುಗಡೆ ಮಾಡಬೇಕಿದೆ. ಸರ್ಕಾರ ಸಾರಿಗೆ ಸಿಬ್ಬಂದಿಗಳನ್ನು ಮಾತುಕತೆಗೆ ಕರೆಯುವುದಿಲ್ಲ ಎಂದು ಮೊಂಡುತನ ತೋರುತ್ತಿದೆ. ಸರ್ಕಾರದ ಇಂತಹ ಮೊಂಡುತನ ಹೆಚ್ಚು ದಿನ ನಡೆಯುವುದಿಲ್ಲ ಎಂದು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಎಚ್ಚರಿಕೆ ನೀಡಿದರು.

ಸಿಎಂ ಯಡಿಯೂರಪ್ಪ ಅವರ ‌ಮಾತಿಗೆ‌ ಹೆಚ್ಚು ಮಹತ್ವ ಕೊಡಬೇಕಿಲ್ಲ. ನಾವು ಸಂಘಟಿತರಾಗಿರಬೇಕು. ಸಂಘಟಿತರಾಗಿದ್ದಾಗ ಬೇಡಿಕೆಯನ್ನು ಸಾಧಿಸಿಕೊಳ್ಳಬಹುದು. ಸಂಘಟನೆ ಬಲಿಷ್ಠವಾಗಿದ್ದರೆ ಸರ್ಕಾರವೇ‌ ಕೆಲಸ ಮಾಡಿಕೊಡುತ್ತದೆ ಎಂದು ಅವರು ಸಾರಿಗೆ ಸಿಬ್ಬಂದಿ ಮತ್ತು ಸರ್ಕಾರದ ನಡುವಿನ ಹಗ್ಗ ಜಗ್ಗಾಟದ ಕುರಿತು ಅವರು ವಿವರಿಸಿದರು.

ಇತ್ತ ಇಂದೂ ಸಾರಿಗೆ ಸಿಬ್ಬಂದಿ ಮುಷ್ಕರ ಮುಂದುವರೆದಿದೆ. ಬೆಂಗಳೂರಿನ ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ವೋಲ್ವೋ ಬಸ್‌ ಮೇಲೆ ಕಲ್ಲೆಸೆತ ನಡೆಸಲಾಗಿದೆ. ಬೆಳಗ್ಗೆ 8.30 ರ ಸುಮಾರಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬಂದಿದ್ದ ಬಸ್ ಪ್ರಯಾಣಿಕರನ್ನು ಇಳಿಸುವ ವೇಳೆ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ಕಲ್ಲೆಸೆತದಿಂದ ಬಸ್‌ನ ಹಿಂಬದಿಯ ಗಾಜು ಸಂಪೂರ್ಣ ಪುಡಿಪುಡಿಯಾಗಿದೆ.

ಮುಷ್ಕರದ 9ನೇ ದಿನವಾದ ಇಂದಿನವರೆಗೆ ಸಾರಿಗೆ ಸಿಬ್ಬಂದಿಗಳ  4 ನಿಗಮದ 62 ಬಸ್ಸುಗಳಿಗೆ ಹಾನಿಯಾಗಿದೆ. KSRTC 36, BMTC 3, NEKRTC 20, NWKRTC 3 ಬಸ್ಸುಗಳಿಗೆ ಹಾನಿ ಉಂಟಾಗಿದೆ.

ಇದನ್ನೂ ಓದಿ:  ಸಾರಿಗೆ ನೌಕರರ ಪತ್ರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ರಾಕಿಂಗ್​ ಸ್ಟಾರ್​.. ಮುಷ್ಕರಕ್ಕೆ ಕೈ ಜೋಡಿಸುತ್ತಾರಾ ಯಶ್?

KSRTC BMTC Strike: ಸಾರಿಗೆ ಸಿಬ್ಬಂದಿಯಿಂದ 60 ಬಸ್​ಗಳ ಮೇಲೆ ದಾಳಿ; ಪೊಲೀಸ್ ಕ್ರಮ ಗ್ಯಾರೆಂಟಿ ಎಂದ ಸಚಿವ ಲಕ್ಷ್ಮಣ ಸವದಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?