AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಮೊಂಡುತನ ಹೆಚ್ಚು ದಿನ ನಡೆಯದು: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ

ಇತ್ತ ಇಂದೂ ಸಾರಿಗೆ ಸಿಬ್ಬಂದಿ ಮುಷ್ಕರ ಮುಂದುವರೆದಿದೆ. ಬೆಂಗಳೂರಿನ ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ವೋಲ್ವೋ ಬಸ್‌ ಮೇಲೆ ಕಲ್ಲೆಸೆತ ನಡೆಸಲಾಗಿದೆ. ಬೆಳಗ್ಗೆ 8.30 ರ ಸುಮಾರಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬಂದಿದ್ದ ಬಸ್ ಪ್ರಯಾಣಿಕರನ್ನು ಇಳಿಸುವ ವೇಳೆ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ.

ಸರ್ಕಾರದ ಮೊಂಡುತನ ಹೆಚ್ಚು ದಿನ ನಡೆಯದು: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ
guruganesh bhat
|

Updated on: Apr 15, 2021 | 9:22 PM

Share

ಬೆಂಗಳೂರು: ಸಾರಿಗೆ ಸಂಸ್ಥೆಯಿಂದ ರಿಯಾಯಿತಿಯಲ್ಲಿ ನೀಡುವ ಬಸ್​ಪಾಸ್​ನ ಬಾಕಿ ಹಣ 3400 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಬೇಕಿದ್ದು, ಅದರಲ್ಲಿ ಸಾರಿಗೆ ನೌಕರರ ಸಂಬಳಕ್ಕಾಗಿ ಈಗಾಗಲೇ 1920 ಕೋಟಿ ಬಿಡುಗಡೆ ಮಾಡಿದೆ. ಆದರೆ ಉಳಿದ ಬಾಕಿ ಹಣವನ್ನು ಇನ್ನೂ ಬಿಡುಗಡೆ ಮಾಡಬೇಕಿದೆ. ಸರ್ಕಾರ ಸಾರಿಗೆ ಸಿಬ್ಬಂದಿಗಳನ್ನು ಮಾತುಕತೆಗೆ ಕರೆಯುವುದಿಲ್ಲ ಎಂದು ಮೊಂಡುತನ ತೋರುತ್ತಿದೆ. ಸರ್ಕಾರದ ಇಂತಹ ಮೊಂಡುತನ ಹೆಚ್ಚು ದಿನ ನಡೆಯುವುದಿಲ್ಲ ಎಂದು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಎಚ್ಚರಿಕೆ ನೀಡಿದರು.

ಸಿಎಂ ಯಡಿಯೂರಪ್ಪ ಅವರ ‌ಮಾತಿಗೆ‌ ಹೆಚ್ಚು ಮಹತ್ವ ಕೊಡಬೇಕಿಲ್ಲ. ನಾವು ಸಂಘಟಿತರಾಗಿರಬೇಕು. ಸಂಘಟಿತರಾಗಿದ್ದಾಗ ಬೇಡಿಕೆಯನ್ನು ಸಾಧಿಸಿಕೊಳ್ಳಬಹುದು. ಸಂಘಟನೆ ಬಲಿಷ್ಠವಾಗಿದ್ದರೆ ಸರ್ಕಾರವೇ‌ ಕೆಲಸ ಮಾಡಿಕೊಡುತ್ತದೆ ಎಂದು ಅವರು ಸಾರಿಗೆ ಸಿಬ್ಬಂದಿ ಮತ್ತು ಸರ್ಕಾರದ ನಡುವಿನ ಹಗ್ಗ ಜಗ್ಗಾಟದ ಕುರಿತು ಅವರು ವಿವರಿಸಿದರು.

ಇತ್ತ ಇಂದೂ ಸಾರಿಗೆ ಸಿಬ್ಬಂದಿ ಮುಷ್ಕರ ಮುಂದುವರೆದಿದೆ. ಬೆಂಗಳೂರಿನ ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ವೋಲ್ವೋ ಬಸ್‌ ಮೇಲೆ ಕಲ್ಲೆಸೆತ ನಡೆಸಲಾಗಿದೆ. ಬೆಳಗ್ಗೆ 8.30 ರ ಸುಮಾರಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬಂದಿದ್ದ ಬಸ್ ಪ್ರಯಾಣಿಕರನ್ನು ಇಳಿಸುವ ವೇಳೆ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ಕಲ್ಲೆಸೆತದಿಂದ ಬಸ್‌ನ ಹಿಂಬದಿಯ ಗಾಜು ಸಂಪೂರ್ಣ ಪುಡಿಪುಡಿಯಾಗಿದೆ.

ಮುಷ್ಕರದ 9ನೇ ದಿನವಾದ ಇಂದಿನವರೆಗೆ ಸಾರಿಗೆ ಸಿಬ್ಬಂದಿಗಳ  4 ನಿಗಮದ 62 ಬಸ್ಸುಗಳಿಗೆ ಹಾನಿಯಾಗಿದೆ. KSRTC 36, BMTC 3, NEKRTC 20, NWKRTC 3 ಬಸ್ಸುಗಳಿಗೆ ಹಾನಿ ಉಂಟಾಗಿದೆ.

ಇದನ್ನೂ ಓದಿ:  ಸಾರಿಗೆ ನೌಕರರ ಪತ್ರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ರಾಕಿಂಗ್​ ಸ್ಟಾರ್​.. ಮುಷ್ಕರಕ್ಕೆ ಕೈ ಜೋಡಿಸುತ್ತಾರಾ ಯಶ್?

KSRTC BMTC Strike: ಸಾರಿಗೆ ಸಿಬ್ಬಂದಿಯಿಂದ 60 ಬಸ್​ಗಳ ಮೇಲೆ ದಾಳಿ; ಪೊಲೀಸ್ ಕ್ರಮ ಗ್ಯಾರೆಂಟಿ ಎಂದ ಸಚಿವ ಲಕ್ಷ್ಮಣ ಸವದಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ