AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಮೊಂಡುತನ ಹೆಚ್ಚು ದಿನ ನಡೆಯದು: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ

ಇತ್ತ ಇಂದೂ ಸಾರಿಗೆ ಸಿಬ್ಬಂದಿ ಮುಷ್ಕರ ಮುಂದುವರೆದಿದೆ. ಬೆಂಗಳೂರಿನ ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ವೋಲ್ವೋ ಬಸ್‌ ಮೇಲೆ ಕಲ್ಲೆಸೆತ ನಡೆಸಲಾಗಿದೆ. ಬೆಳಗ್ಗೆ 8.30 ರ ಸುಮಾರಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬಂದಿದ್ದ ಬಸ್ ಪ್ರಯಾಣಿಕರನ್ನು ಇಳಿಸುವ ವೇಳೆ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ.

ಸರ್ಕಾರದ ಮೊಂಡುತನ ಹೆಚ್ಚು ದಿನ ನಡೆಯದು: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ
Follow us
guruganesh bhat
|

Updated on: Apr 15, 2021 | 9:22 PM

ಬೆಂಗಳೂರು: ಸಾರಿಗೆ ಸಂಸ್ಥೆಯಿಂದ ರಿಯಾಯಿತಿಯಲ್ಲಿ ನೀಡುವ ಬಸ್​ಪಾಸ್​ನ ಬಾಕಿ ಹಣ 3400 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಬೇಕಿದ್ದು, ಅದರಲ್ಲಿ ಸಾರಿಗೆ ನೌಕರರ ಸಂಬಳಕ್ಕಾಗಿ ಈಗಾಗಲೇ 1920 ಕೋಟಿ ಬಿಡುಗಡೆ ಮಾಡಿದೆ. ಆದರೆ ಉಳಿದ ಬಾಕಿ ಹಣವನ್ನು ಇನ್ನೂ ಬಿಡುಗಡೆ ಮಾಡಬೇಕಿದೆ. ಸರ್ಕಾರ ಸಾರಿಗೆ ಸಿಬ್ಬಂದಿಗಳನ್ನು ಮಾತುಕತೆಗೆ ಕರೆಯುವುದಿಲ್ಲ ಎಂದು ಮೊಂಡುತನ ತೋರುತ್ತಿದೆ. ಸರ್ಕಾರದ ಇಂತಹ ಮೊಂಡುತನ ಹೆಚ್ಚು ದಿನ ನಡೆಯುವುದಿಲ್ಲ ಎಂದು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಎಚ್ಚರಿಕೆ ನೀಡಿದರು.

ಸಿಎಂ ಯಡಿಯೂರಪ್ಪ ಅವರ ‌ಮಾತಿಗೆ‌ ಹೆಚ್ಚು ಮಹತ್ವ ಕೊಡಬೇಕಿಲ್ಲ. ನಾವು ಸಂಘಟಿತರಾಗಿರಬೇಕು. ಸಂಘಟಿತರಾಗಿದ್ದಾಗ ಬೇಡಿಕೆಯನ್ನು ಸಾಧಿಸಿಕೊಳ್ಳಬಹುದು. ಸಂಘಟನೆ ಬಲಿಷ್ಠವಾಗಿದ್ದರೆ ಸರ್ಕಾರವೇ‌ ಕೆಲಸ ಮಾಡಿಕೊಡುತ್ತದೆ ಎಂದು ಅವರು ಸಾರಿಗೆ ಸಿಬ್ಬಂದಿ ಮತ್ತು ಸರ್ಕಾರದ ನಡುವಿನ ಹಗ್ಗ ಜಗ್ಗಾಟದ ಕುರಿತು ಅವರು ವಿವರಿಸಿದರು.

ಇತ್ತ ಇಂದೂ ಸಾರಿಗೆ ಸಿಬ್ಬಂದಿ ಮುಷ್ಕರ ಮುಂದುವರೆದಿದೆ. ಬೆಂಗಳೂರಿನ ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ವೋಲ್ವೋ ಬಸ್‌ ಮೇಲೆ ಕಲ್ಲೆಸೆತ ನಡೆಸಲಾಗಿದೆ. ಬೆಳಗ್ಗೆ 8.30 ರ ಸುಮಾರಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬಂದಿದ್ದ ಬಸ್ ಪ್ರಯಾಣಿಕರನ್ನು ಇಳಿಸುವ ವೇಳೆ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ಕಲ್ಲೆಸೆತದಿಂದ ಬಸ್‌ನ ಹಿಂಬದಿಯ ಗಾಜು ಸಂಪೂರ್ಣ ಪುಡಿಪುಡಿಯಾಗಿದೆ.

ಮುಷ್ಕರದ 9ನೇ ದಿನವಾದ ಇಂದಿನವರೆಗೆ ಸಾರಿಗೆ ಸಿಬ್ಬಂದಿಗಳ  4 ನಿಗಮದ 62 ಬಸ್ಸುಗಳಿಗೆ ಹಾನಿಯಾಗಿದೆ. KSRTC 36, BMTC 3, NEKRTC 20, NWKRTC 3 ಬಸ್ಸುಗಳಿಗೆ ಹಾನಿ ಉಂಟಾಗಿದೆ.

ಇದನ್ನೂ ಓದಿ:  ಸಾರಿಗೆ ನೌಕರರ ಪತ್ರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ರಾಕಿಂಗ್​ ಸ್ಟಾರ್​.. ಮುಷ್ಕರಕ್ಕೆ ಕೈ ಜೋಡಿಸುತ್ತಾರಾ ಯಶ್?

KSRTC BMTC Strike: ಸಾರಿಗೆ ಸಿಬ್ಬಂದಿಯಿಂದ 60 ಬಸ್​ಗಳ ಮೇಲೆ ದಾಳಿ; ಪೊಲೀಸ್ ಕ್ರಮ ಗ್ಯಾರೆಂಟಿ ಎಂದ ಸಚಿವ ಲಕ್ಷ್ಮಣ ಸವದಿ

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ