AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ನಿಷೇಧ: ಉದ್ದೇಶವೇನು?

ಇತ್ತೀಚೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಂಕ್ ಫುಡ್​ನತ್ತ ವಾಲುತ್ತಿದ್ದು, ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತವಾಗಿದೆ. ಹೀಗಾಗಿ ಮಕ್ಕಳ ಆರೋಗ್ಯದ ಮೇಲೆ ಜಂಕ್ ಫುಡ್ ಬೀರುವ ದುಷ್ಪರಿಣಾಮ ಮನಗಂಡ ಆಹಾರ ಸುರಕ್ಷತೆ ಇಲಾಖೆ ಮಹತ್ವದ ಘೋಷಣೆಯನ್ನ ಮಾಡಿದೆ. ಇನ್ನು ರೂಲ್ಸ್ ಉಲ್ಲಂಘನೆ ಮಾಡಿದ್ರೆ ಏನು ಶಿಕ್ಷೆ? ಈ ಬಗ್ಗೆ ಆಹಾರ ಸಚಿವರು ವಿವರಿಸಿದ್ದಾರೆ.

ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ನಿಷೇಧ: ಉದ್ದೇಶವೇನು?
ಯುಟಿ ಖಾದರ್Image Credit source: tv9
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on:Jul 31, 2026 | 10:46 PM

Share

ಬೆಂಗಳೂರು, (ಜುಲೈ 31): ಕರ್ನಾಟಕದ Karnataka) ಶಾಲೆಗಳ ಸುತ್ತಮುತ್ತ ಮಕ್ಕಳನ್ನ ಜಂಕ್ ಫುಡ್ ಗಳು (junk food) ಕೈ ಬೀಸಿ ಕರೆಯುತ್ತವೆ. ಇನ್ನು ಮಕ್ಕಳೂ (Children)  ಕೂಡ ಬಾಯಿ ಚಪ್ಪರಿಸಿಕೊಂಡು ಹಿಂದೆ ಮುಂದೆ ನೋಡದೆ ಖರೀದಿ ಮಾಡ್ತಾರೆ. ಆದರೆ ಇನ್ಮುಂದೆ ಸರ್ಕಾರ ಇದಕ್ಕೆ ಅವಕಾಶ ಕೊಡಲ್ಲ. ಶಾಲೆ ಹಾಗೂ ಪಿಯು ಕಾಲೇಜುಗಳ 50 ಮೀಟರ್ ಸುತ್ತಳತೆಯಲ್ಲಿ ಜಂಕ್ ಫುಡ್​ಗಳ ಮಾರಾಟವನ್ನ ಆಹಾರ ಸುರಕ್ಷತಾ ಇಲಾಖೆ ಸಂಪೂರ್ಣವಾಗಿ ನಿಷೇಧಿಸಿದೆ. ಈ ಕುರಿತಾಗಿ ಇಂದು (ಜುಲೈ 31) ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ (UT Khader) ಮಹತ್ವದ ಘೋಷಣೆ ಮಾಡಿದ್ದಾರೆ.

ಹೈ ಫ್ಯಾಟ್, ಹೈ ಶುಗರ್, ಹೈ ಸಾಲ್ಟ್ ಉತ್ಪನ್ನಗಳ ನಿಷೇಧ

ಹೈ ಫ್ಯಾಟ್, ಹೈ ಶುಗರ್, ಹೈ ಸಾಲ್ಟ್ ಅಂಶಗಳಿರುವ ಆಹಾರ ಉತ್ಪನ್ನಗಳನ್ನ ಮಾರಾಟವನ್ನ ಇನ್ಮುಂದೆ ಸಹಿಸಲ್ಲ ಎಂದಿದ್ದಾರೆ. 134 ಶಾಲೆಗಳಿಗೆ ಭೇಟಿ ನೀಡಿ ಸರ್ವೆ ನಡೆಸಿದ ಬಳಿಕ ಈ ಮಹತ್ವದ ನಿರ್ಧಾರವನ್ನ ಪ್ರಕಟಿಸಲಾಗಿದೆ. ಶೈಕ್ಷಣಿಕ ಸಂಸ್ಥೆಗಳ ಕ್ಯಾಂಟೀನ್​ಗಳಿಗೂ ಈ ನಿಯಮ ಅನ್ವಯವಾಗಲಿದೆ.

ಇದನ್ನೂ ಓದಿ: KSRTC, BMTC ಸೇರಿದಂತೆ 4 ನಿಗಮಗಳ ಬಸ್ ಟಿಕೆಟ್ ‌ದರ ಏರಿಕೆ ಫಿಕ್ಸ್: ಎಷ್ಟು, ಯಾವಾಗಿನಿಂದ?

ನಿಯಮಗಳನ್ನ ಉಲ್ಲಂಘಿಸಿದ್ರೆ ದಂಡ

ಇನ್ನು ಈ ನಿಯಮಗಳನ್ನ ಉಲ್ಲಂಘನೆ ಮಾಡಿ ಜಂಕ್ ಫುಡ್​ಗಳನ್ನ ಮಕ್ಕಳಿಗೆ ನೀಡಿದರೆ, ಅಂಗಡಿಗಳಿಗೆ ಭಾರೀ ದಂಡ ಹಾಗೂ ಪರವಾನಗಿ ರದ್ದು ಮಾಡಿಸುವ ಎಚ್ಚರಿಕೆ ನೀಡಲಾಗಿದೆ. ಒಟ್ಟಾರೆ ಆಳು ಮೂಳು ಅಂತಾ ಜಂಕ್ ಫುಡ್​ಗಳನ್ನ ತಿಂದು ಆರೋಗ್ಯ ಕೆಡಿಸಿಕೊಳ್ಳುತ್ತಿರುವ ಮಕ್ಕಳನ್ನ ಕಾಪಾಡಬೇಕಿದೆ. ಈ ನಿಯಮ ಕಟ್ಟುನಿಟ್ಟಾಗಿ ಜಾರಿಯಾಗಲಿ.

ಆಹಾರ ಸಚಿವ ಯುಟಿ ಖಾದರ್ ಹೇಳಿದ್ದೇನು?

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಆರೋಗ್ಯ ಸಚಿವ ಯುಟಿ ಖಾದರ್, ರೋಗ ಬರುವುದಕ್ಕಿಂತ ಮೊದಲು ಅದನ್ನು ತಡೆಗಟ್ಟಬೇಕು. ಅವರವರ ಆರೋಗ್ಯ ಅವರವರ ಜವಾಬ್ದಾರಿ, ರೋಗ ಬಂದರೆ ಔಷಧ ಕೊಡೋದು ನಮ್ಮ ಕೆಲಸ. ನಾವು ಏನು ತಿನ್ನುತ್ತೇವೆ ಎನ್ನುವುದರ ಮೇಲೆ ನಮ್ಮ ಆರೋಗ್ಯ ಇರುತ್ತೆ. ಸಣ್ಣ ಮಕ್ಕಳಾದರೂ ಕೂಡ ಆರೋಗ್ಯವಂತ ಸಮಾಜ ನೋಡಬೇಕು.

ಕಟ್ಟುನಿಟ್ಟಾಗಿ ಈ ನಿಯಮ ಜಾರಿಗೆ ತರುತ್ತೇವೆ

ಅನಾರೋಗ್ಯ ಆದರೆ ಕೆಲವರಿಗೆ ವ್ಯಾಪಾರ ಆಗುತ್ತೆ. ಶಾಲೆಯಲ್ಲಿ ಮತ್ತು ಸುತ್ತಮುತ್ತ 50 ಮೀಟರ್ ವ್ಯಾಪ್ತಿ ಜಂಕ್ ಫುಡ್ ನಿಷೇಧ ಹಾಗೂ ಹೈ ಫ್ಯಾಟ್, ಹೈ ಶುಗರ್, ಹೈ ಸಾಲ್ಟ್ ಉತ್ಪನ್ನಗಳ ನಿಷೇಧ ಮಾಡಲಾಗಿದೆ. ಹಲವು ಕಡೆಗಳಲ್ಲಿ ನಾವು ಸರ್ವೇ ಮಾಡಿದ್ದೇವೆ. ಶಾಲೆಯ ಕ್ಯಾಂಟೀನ್ ಗಳಲ್ಲೇ ಜಂಕ್ ಫುಡ್ ಕೊಡಲಾಗುತ್ತಿದೆ. ಪಿಯುಸಿ ವರೆಗಿನ ಶೈಕ್ಷಣಿಕ ಸಂಸ್ಥೆಗಳ 50 ಮೀಟರ್ ಆವರಣದಲ್ಲಿ ಜಂಕ್ ಫುಡ್ ನಿಷೇಧಿಸಲಾಗಿದ್ದು, ಕಟ್ಟುನಿಟ್ಟಾಗಿ ಈ ನಿಯಮ ಜಾರಿಗೆ ತರುತ್ತೇವೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:45 pm, Fri, 31 July 26

Follow Us
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!