AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಮ ಮಂಡಳಿ ನೇಮಕದಲ್ಲಿ ಮತ್ತೆ ಗೊಂದಲ: ಅಧ್ಯಕ್ಷ-ಉಪಾಧ್ಯಕ್ಷರ ಅದಲು-ಬದಲು

ಕರ್ನಾಟಕದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿ ಮತ್ತೆ ಗೊಂದಲ ಸೃಷ್ಟಿಸಿದೆ. ಹೈಕಮಾಂಡ್ ಒಟ್ಟು 37 ಮಂದಿ ಅಧ್ಯಕ್ಷರನ್ನು ಪಟ್ಟಿಯನ್ನು ರವಾನಿಸಿತ್ತು. ಆದ್ರೆ, ಸಿಎಂ ಸಿದ್ದರಾಮಯ್ಯ ಪಟ್ಟಿಯನ್ನು ತಿದ್ದಿ 34ಕ್ಕೆ ಇಳಿಸಿದ್ದು. ಆದ್ರೆ, ಇದೀಗ ಮತ್ತೆ ಗೊದಲವಾಗಿದ್ದು, ಅಧ್ಯಕ್ಷ-ಉಪಾಧ್ಯಕ್ಷರನ್ನು ಅದಲು ಬದಲು ಮಾಡಲಾಗಿದೆ.

ನಿಗಮ ಮಂಡಳಿ ನೇಮಕದಲ್ಲಿ ಮತ್ತೆ ಗೊಂದಲ: ಅಧ್ಯಕ್ಷ-ಉಪಾಧ್ಯಕ್ಷರ ಅದಲು-ಬದಲು
Niketh Raj Maurya
ಪ್ರಸನ್ನ ಗಾಂವ್ಕರ್​
| Edited By: |

Updated on: Sep 29, 2025 | 5:12 PM

Share

ಬೆಂಗಳೂರು, (ಸೆಪ್ಟೆಂಬರ್ 29): ಕರ್ನಾಟಕದ ವಿವಿಧ ನಿಗಮ ಮಂಡಳಿ ನೇಮಕದಲ್ಲಿ ಗೊಂದಲ ಮುಂದುವರಿದಿದ್ದು, ಬಾಕಿ ಉಳಿದಿದ್ದ ಐದು ನಿಗಮ ಮಂಡಳಿಗಳಿಗೂ ಅಧ್ಯಕ್ಷರ ನೇಮಕ ಮಾಡಲಾಗಿದೆ. ಇನ್ನು ಬಿಎಂಟಿಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅದಲು ಬದಲು ಮಾಡಿ ಸರ್ಕಾರ ಆದೇಶಿಸಿದೆ. ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದ ನಿಕೇತ್ ರಾಜ್ ಮೌರ್ಯಗೆ (Niketh Raj Maurya) ಇದೀಗ ಬಿಎಂಟಿಸಿ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಬಿಎಂಟಿಸಿ ಅಧ್ಯಕ್ಷರಾಗಿ ವಿ ಎಸ್ ಆರಾಧ್ಯ ಅವರನ್ನ ನೇಮಕ ಮಾಡಲಾಗಿದೆ. ಇದರಿಂದ ಈಗಾಗಲೇ ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ನಿಕೇತ್ ರಾಜ್ ಮೌರ್ಯಗೆ ಒಂದು ರೀತಿ ಮುಜುಗರವೆನಿಸಿದೆ.

ಹೈಕಮಾಂಡ್ ಕಳುಹಿಸಿದ್ದ ಪಟ್ಟಿಯಲ್ಲಿ ನಿಕೇತ್ ರಾಜ್ ಮೌರ್ಯ ಹೆಸರೇ ಇರಲಿಲ್ಲ. ಬಳಿಕ ಸಿಎಂ ಸಿದ್ದರಾಮ್ಯನವರ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಬಿಎಂಟಿಸಿ ಅಧ್ಯಕ್ಷರನ್ನಾಗಿ ನಿಕೇತ್ ರಾಜ್ ಮೌರ್ಯ ಅವರನ್ನು ನೇಮಕ ಮಾಡಿದ್ದರು. ಇದರಿಂದ ಫುಲ್ ಖುಷ್ ಆಗಿದ್ದ ನಿಕೇತ್ ರಾಜ್ ಮೌರ್ಯ ಅಧಿಕಾರ ಸ್ವೀಕಾ ಸಹ ಮಾಡಿ ಮುಗಿಸಿದ್ದರು.  ಆದರೆ, ಇದೀಗ ಅವರನ್ನು ಬಿಎಂಟಿಸಿ ಉಪಾಧ್ಯಕ್ಷರನ್ನಾಗಿ ಮರು ನೇಮಿಸಿ ಸರ್ಕಾರ ಆದೇಶಿಸಿದೆ. ಇನ್ನು ಬಿಎಂಟಿಸಿ ಉಪಾಧ್ಯಕ್ಷರಾಗಿದ್ದ ವಿಎಸ್ ಆರಾಧ್ಯ ಎಂಬುವರನ್ನು ಬಿಎಂಟಿಸಿ ಅಧ್ಯಕ್ಷರನ್ನಾಗಿ ಮರು ನೇಮಿಸಿ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ: 34 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಕೆಲ ಬದಲಾವಣೆಯೊಂದಿಗೆ ಸರ್ಕಾರ ಹೊರಡಿಸಿದ ಅಧಿಕೃತ ಪಟ್ಟಿ ಇಲ್ಲಿದೆ

ಸರ್ಕಾರದ ಬದಲಾವಣೆಗೆ ನಿಕೇತ್ ರಾಜ್ ಮೌರ್ಯ ಹಾಗೂ ಅವರ ಬೆಂಬಲಿಗರಿಗೆ ನಿರಾಸೆಯಾಗಿದ್ದು, ಒಂದು ರೀತಿ ಕೊಟ್ಟು ಕಿತ್ತುಕೊಂಡು ಅವಮಾನಿಸಲಾಗಿದೆ ಎಂದು ಅಸಮಾಧಾನ ವ್ಯಕ್ತವಾಗಿವೆ.

ಬಾಕಿ 5 ನಿಗಮಕ್ಕೆ ಅಧ್ಯಕ್ಷರ ನೇಮಕ

ಇನ್ನು ಬಾಕಿ ಉಳಿದ 5 ನಿಗಮ ಮಂಡಳಿಗಳಿಗೂ ಅಧ್ಯಕ್ಷರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

  • ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ – ಸೈಯದ್ ಮೆಹಮೂದ್ ಚಿಸ್ಟಿ.
  • ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ – ಶರಣಪ್ಪ ಸಲಾದ್ ಪುರ್ .
  • ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ  ಅಧ್ಯಕ್ಷ- ಆಂಜನಪ್ಪ
  • ಕರ್ನಾಟಕ ರಾಜ್ಯ ಸಾಂಬಾರು ಅಭಿವೃದ್ಧಿ ಮಂಡ ಅಧ್ಯಕ್ಷಳಿ – ನೀಲಕಂಠರಾವ್ ಎಸ್ ಮೂಲಗೆ
  • ಜವಾಹರ ಬಾಲಭವನ ಸೊಸೈಟಿ ಉಪಾಧ್ಯಕ್ಷ – ಅನಿಲ್ ಕುಮಾರ್ ಜಮಾದಾರ್

ಕಾಗವಾಡ ಶಾಸಕ ರಾಜು ಕಾಗೆ ಅಧ್ಯಕ್ಷರಾಗಿದ್ದ ವಾಯುವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ ಅರುಣ್‌ ಕುಮಾರ್‌ ಪಾಟೀಲ್‌ ಹೆಸರನ್ನು ಎಐಸಿಸಿ ಪಟ್ಟಿ ಮಾಡಿತ್ತು. ಇದು ಮುದ್ರಣ ದೋಷ ಎಂಬ ಸ್ಪಷ್ಟನೆಯೊಂದಿಗೆ ಅರುಣ್‌ ಪಾಟೀಲ್‌ರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹುದ್ದೆಗೆ ನೇಮಕ ಮಾಡಿ ರಾಜು ಕಾಗೆ ಹುದ್ದೆ ಅಬಾಧಿತವಾಗಿತ್ತು. ಆದರೆ, ಎಐಸಿಸಿ ಅನುಮೋದಿತ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ ನೀಲಕಂಠ ಮುಳ್ಗೆ ಅವರನ್ನು ಶಿಫಾರಸು ಮಾಡಲಾಗಿತ್ತು. ಬಳಿಕ ಸಿಎಂ ಸಿದ್ದರಮಯ್ಯ ಸರಿಪಡಿಸಿದ್ದರು.

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​