AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಎಸ್​​ಐಟಿಗೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯ ಕುರುಬರಕೇರನಹಳ್ಳಿ ಫಾರ್ಮ್‌ಹೌಸ್‌ ಮೇಲೆ ದಾಳಿ ನಡೆಸಿದ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಔಷಧ ಜಾರಿ ವಿಭಾಗದ ಅಧಿಕಾರಿಗಳು, ಕಾನೂನುಬಾಹಿರವಾಗಿ ನಡೆಯುತ್ತಿದ್ದ ಬೃಹತ್ ನಕಲಿ ಔಷಧ ಮರು ಪ್ಯಾಕಿಂಗ್ ಹಾಗೂ ಲೇಬಲಿಂಗ್ ಜಾಲವನ್ನು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲವರನ್ನು ಬಂಧಿಸಲಾಗಿದ್ದು, ಇದೀಗ ಈ ಪ್ರಕರಣವನ್ನು ಮತ್ತಷ್ಟು ತನಿಖೆಗಾಗಿ ರಾಜ್ಯ ಸರ್ಕಾರ ಎಸ್​​​ಐಟಿಗೆ ನೀಡಿದೆ,

ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಎಸ್​​ಐಟಿಗೆ ನೀಡಿ ರಾಜ್ಯ ಸರ್ಕಾರ ಆದೇಶ
ವಿಧಾನಸೌಧImage Credit source: Getty Image
ರಮೇಶ್ ಬಿ. ಜವಳಗೇರಾ
|

Updated on: Aug 20, 2026 | 7:04 PM

Share

ಬೆಂಗಳೂರು, (ಆಗಸ್ಟ್ 20): ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ (Fake Drug Case) ಸಂಬಂಧ ಬಗೆದಷ್ಟೂ ಶಾಕಿಂಗ್​​ ವಿಚಾರಗಳು ಬಯಲಾಗ್ತಿವೆ. ಪ್ರತಿಷ್ಠಿತ MNC ಬ್ರ್ಯಾಂಡ್‌ಗಳ ಹೆಸರಿನಲ್ಲಿ ಜೀವಕ್ಕೇ ಕಂಟಕ ತರುವ ನಕಲಿ ಇಂಜೆಕ್ಷನ್‌ ಹಾಗೂ ಮಾತ್ರೆಗಳನ್ನು ಪೂರೈಸುತ್ತಿದ್ದ ಈ ಅಂತಾರಾಜ್ಯ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನ ಬಂಧಿಸಲಾಗಿದ್ದು, ಇದರ ಕಿಂಗ್​ ಪಿನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಪ್ರಕರಣವನ್ನು ಇದೀಗ ಎಸ್​​​ಐಟಿ ತನಿಖೆಗೆ ನೀಡಿ ಆದೇಶ ಹೊರಡಿಸಿದೆ. ಐಪಿಎಸ್ ಹಿರಿಯ ಅಧಿಕಾರಿ ಸಿ ವಂಶಿಕೃಷ್ಣ ನೇತೃತ್ವದಲ್ಲಿ ಎಸ್​ಐಟಿ ರಚಿಸಿ ಆದೇಶಿಸಲಾಗಿದೆ.

ವಂಶಿಕೃಷ್ಣ ನೇತೃತ್ವದ SITಯಲ್ಲಿ IPS​ ಅಧಿಕಾರಿಗಳಾದ ಶಿವಪ್ರಕಾಶ್, ಲೋಕೇಶ್, ಸಹಾಯಕ ಔಷಧ ನಿಯಂತ್ರಕರಾದ ಮಂಜುನಾಥ್ ರೆಡ್ಡಿ, ನಮ್ರತಾ ಹಲ್ಲೂರು, ಔಷಧ ನಿರೀಕ್ಷಕ ನೇಹಾ ಮುರ್ಗಿ ಅವರನ್ನೊಳಗೊಡಿರುವ ತಂಡವನ್ನು ರಚಿಸಲಾಗಿದೆ. ಪತ್ತೆಯಾದ  ದಿನವೇ ಆರೋಗ್ಯ ಸಚಿವ ಯುಟಿ ಖಾದರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಪ್ರಕರಣವನ್ನು ಎಸ್​​​ಐಟಿಗೆ ನೀಡುವ ಬಗ್ಗೆ ಸುಳಿವು ನೀಡಿದ್ದರು.

ಇದನ್ನೂ ಓದಿ: ಬೆಂಗಳೂರಿನಿಂದ ಮುಂಬೈ, ಹಿಮಾಚಲವರೆಗೂ ನಕಲಿ ಔಷಧ ಜಾಲ! ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ಔಷಧಗಳೇ ಟಾರ್ಗೆಟ್, ದೇಶಾದ್ಯಂತ ಹೈ ಅಲರ್ಟ್

ಕರ್ನಾಟಕದ ಡ್ರಗ್ ಎನ್‌ಫೋರ್ಸ್‌ಮೆಂಟ್ ವಿಂಗ್ ಆಗಸ್ಟ್ 18ರಂದು ಬಿದದಿ ಸಮೀಪದ ನಂ.34 ಕುರುಬರಹಳ್ಳಿ ಗ್ರಾಮದಲ್ಲಿ ಲೈಸೆನ್ಸ್ ಇಲ್ಲದ ಔಷಧ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ನಕಲಿ ಔಷಧಗಳು, ಬಲ್ಕ್ ಸ್ಟಾಕ್, ಪ್ಯಾಕೇಜಿಂಗ್ ಯಂತ್ರಗಳು, ಖಾಲಿ ವಯಲ್‌ಗಳು ಹಾಗೂ ನಕಲಿ ಲೇಬಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ವಸ್ತುಗಳ ಒಟ್ಟು ಅಂದಾಜು ಮೌಲ್ಯ 5,05,49,575 ರೂ. ಎಂದು ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು