AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಹಣ ಮರುಪಾವತಿಗೆ ಆದೇಶ, ಪ್ರಕ್ರಿಯೆ ಹೇಗೆ?

ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ದೊಡ್ಡ ಸಿಹಿಸುದ್ದಿ ನೀಡಿದೆ. 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಎಲ್ಲಾ ನಾಲ್ಕು ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ 'ಉಚಿತ ಬಸ್ ಪಾಸ್' ವಿತರಿಸಲು ಈಗಾಗಲೇ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಇದೀಗ ವಿದ್ಯಾರ್ಥಿ ಬಸ್ ಪಾಸ್ ಹಣ ಮರುಪಾವತಿಗೆ ಕೆಎಸ್​​ಆರ್​​​ಟಿಸಿ ಆದೇಶ ಹೊರಡಿಸಿದೆ. ಹಾಗಾದ್ರೆ, ಹಣ ಮರುಪಾವತಿ ಪ್ರಕ್ರಿಯೆ ಹೇಗೆ ಎನ್ನುವ ವಿವರ ಇಲ್ಲಿದೆ.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಹಣ ಮರುಪಾವತಿಗೆ ಆದೇಶ, ಪ್ರಕ್ರಿಯೆ ಹೇಗೆ?
Bus Pass Money Refund
ಕಿರಣ್​ ಸೂರ್ಯ
| Edited By: |

Updated on: Jun 24, 2026 | 9:17 PM

Share

ಮುಖ್ಯಾಂಶಗಳು

  • ಬಸ್ ಪಾಸ್ ಗೆ ಪಡೆಯಲಾಗಿದ್ದ ಹಣ ವಿದ್ಯಾರ್ಥಿಗಳಿಗೆ ಮರುಪಾವತಿ
  • 29-06-2026ರಿಂದ ಬಸ್ ಪಾಸ್ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
  • ಸೇವಾಸಿಂಧು ಪೋರ್ಟಲ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು, (ಜೂನ್ 24): ಕರ್ನಾಟಕದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ (Students) ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಿಹಿಸುದ್ದಿಯೊಂದನ್ನು ನೀಡಿದೆ. ಈಗಾಗಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ವಿತರಣಗೆ ಕೆಎಸ್​​ಆರ್​​​ಟಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಈಗಾಗಲೇ ಹಣ ನೀಡಿ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳ ಹಣವನ್ನು ಮರುಪಾವತಿಗೆ ಮಹತ್ವದ ಆದೇಶ ಹೊರಡಿಸಿದೆ. KSRTC, BMTC, NWKRTC, KKRTC ನಿಗಮಗಳು ಹಣ ವಾಪಸ್ ಪಡೆಯುವ ಬಗ್ಗೆ ವಿದ್ಯಾರ್ಥಿಗಳಿ ಅವಕಾಶ ನೀಡಿದ್ದು, ಹಣ ಮರುಪಾವತಿಗೆ ಅರ್ಜಿಸಲು ಕೋರಿದೆ. ಹೀಗಾಗಿ ಹಣ ವಾಪಸ್​​​​ ಪಡೆದುಕೊಳ್ಳಲು ವಿದ್ಯಾರ್ಥಿಗಳು 29-05-2026ರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಸಿದ 7 ದಿನಗಳಲ್ಲಿ ಹಣ ಮರುಪಾವತಿಯಾಗಲಿದೆ.

29-05-2026ರಿಂದ ಅರ್ಜಿ ಆರಂಭ

ರಾಜ್ಯದಲ್ಲಿ ವಾಸವಿದ್ದು, ಗಡಿರಾಜ್ಯಗಳಲ್ಲಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಗಡಿರಾಜ್ಯಗಳಲ್ಲಿ (ರಾಜ್ಯದ ಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸಲಾಗಿದೆ. ಆದ್ರೆ, ಉಚಿತ ಬಸ್ ಪಾಸ್ ಯೋಜನೆ ಜಾರಿಯಾಗುವುದರಿಂದ ಶುಲ್ಕ ಪಡೆದು ವಿತರಿಸಲಾದ ಪಾಸುಗಳ ಸಂಪೂರ್ಣ ಶುಲ್ಕವನ್ನು ಆಯಾ ವಿದ್ಯಾರ್ಥಿಗಳಿಗೆ ಮರುಪಾವತಿಸಲು KSRTC, BMTC, NWKRTC, KKRTC ನಿಗಮದಿಂದ ಆದೇಶ ಹೊರಡಿಸಲಾಗಿದ್ದು, 29-05-2026ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ.

ಇದನ್ನೂ ಓದಿ: ಸೇವಾ ಸಿಂಧು ಪೋರ್ಟಲ್​ನಲ್ಲಿ ಉಚಿತ ಬಸ್ ಪಾಸ್​ಗೆ ಅರ್ಜಿ ಸಲ್ಲಿಸುವುದು ಹೇಗೆ? ಹಂತ ಹಂತದ ಮಾಹಿತಿ

ಅರ್ಜಿ ಹೇಗೆ? ಎಲ್ಲಿ ಸಲ್ಲಿಸಬೇಕು?

ಈಗಾಗಲೇ ಹಣ ನೀಡಿ ಬಸ್ ಪಾಸ್ ಮಾಡಿಸಿಕೊಂಡಿರುವ ವಿದ್ಯಾರ್ಥಿಗಳು, ವಾಪಸ್ ಹಣವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಬೇಕು. 29-05-2026ರಿಂದ ಅರ್ಜಿ ಪ್ರಕ್ರಿಯೆ ಆರಂವಾಗಲಿದ್ದು, OTP ಮೂಲಕ ನೋಂದಣಿ ಮಾಡಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬೇಕು. ಇನ್ನು ವಿದ್ಯಾರ್ಥಿಗಳು ಬ್ಯಾಂಕ್ ಖಾತೆ ವಿವರ ಸಲ್ಲಿಕೆ ಕಡ್ಡಾಯವಾಗಿದ್ದು, ಅರ್ಜಿ ಪರಿಶೀಲನೆ ಬಳಿಕ NEFT/RTGS ಮೂಲಕ ಹಣ ವಿದ್ಯಾರ್ಥಿಗಳ ನೀಡಿರುವ ಬ್ಯಾಂಕ್ ಖಾತೆಗೆ 7 ದಿನಗಳಲ್ಲಿ ಮರುಪಾವತಿಯಾಗಲಿದೆ.

ಡಿಕೆಶಿ ಸಿಎಂ ಆದ ದಿನವೇ ಘೋಷಿಸಿದ್ದ ಯೋಜನೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ಶಾಲಾ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿದ್ದರು. ಇದೀಗ ಈ ಯೋಜನೆ ಜಾರಿಗೆ ಬಂದಿದೆ.ರಾಜ್ಯದ ಎಲ್ಲಾ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಿದಲ್ಲಿ ತಗಲುವ ಅಂದಾಜು ವೆಚ್ಚ 286.08 ರೂ. ಕೋಟಿಗಳನ್ನು ಮತ್ತು ಪ್ರತಿ ಬಸ್ ಪಾಸ್‌ನ ಸಂಸ್ಕರಣಾ ಶುಲ್ಕ 100 ರೂ. ಹಾಗೂ ಅಪಘಾತ ಪರಿಹಾರ ನಿಧಿ 50 ರೂ. ರಂತೆ (ಪ್ರತಿ ತಿಂಗಳಿಗೆ 5ರೂ.ರಂತೆ) ಒಟ್ಟು ಅಂದಾಜು ವೆಚ್ಚ 15 ಕೋಟಿ ರೂ. ಸರ್ಕಾರದಿಂದ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಭರಿಸುವಂತೆ ತಿಳಿಸಲಾಗಿದೆ. ಜೊತೆಗೆ 2026-27ನೇ ಶೈಕ್ಷಣಿಕ ಸಾಲಿನಲ್ಲಿ 30.05.2026 ರಿಂದ 09.06.2026ರ ವರೆಗೆ ನಾಲ್ಕು ನಿಗಮ / ಸಂಸ್ಥೆಗಳಿಂದ ಒಟ್ಟಾರೆ 19,792 ರಿಯಾಯಿತಿ ದರದಲ್ಲಿ ಪಾಸುಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗಿದ್ದು, ಉಚಿತ ಬಸ್ ಪಾಸ್ ವ್ಯವಸ್ಥೆ ಜಾರಿಯಾಗುವವರೆಗೆ ವಿತರಿಸಲಾದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪಾಸಿನ ಮೊತ್ತವನ್ನು ವಿದ್ಯಾರ್ಥಿಗಳಿಗೆ ಮರುಪಾವತಿಸಲು ಅನುಮೋದನೆ ನೀಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ