AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲ ಗೆಹ್ಲೋಟ್‌ರಿಂದ ಅಂತಿಮ ಮುದ್ರೆ

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಸುಗ್ರೀವಾಜ್ಞೆಗೆ ರಾಜ್ಯಪಾಲ ಗೆಹ್ಲೋಟ್‌ರಿಂದ ಅಂತಿಮಮುದ್ರೆ ಬಿದ್ದಿದೆ.

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲ ಗೆಹ್ಲೋಟ್‌ರಿಂದ ಅಂತಿಮ ಮುದ್ರೆ
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
TV9 Web
| Edited By: |

Updated on:May 17, 2022 | 6:53 PM

Share

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ(Anti-Conversion Bill) ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಸುಗ್ರೀವಾಜ್ಞೆಗೆ ರಾಜ್ಯಪಾಲ ಗೆಹ್ಲೋಟ್‌ರಿಂದ(Thawar Chand Gehlot) ಅಂತಿಮಮುದ್ರೆ ಬಿದ್ದಿದೆ. ಮತಾಂತರ ನಿಷೇಧ ಕಾಯ್ದೆಯನ್ನು ವಿಧಾನಸಭೆ ಅಂಗೀಕರಿಸಿತ್ತು. ವಿಧಾನಪರಿಷತ್‌ನಲ್ಲಿ ಅಂಗೀಕಾರ ಸಿಗದಿದ್ದಕ್ಕೆ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಿತ್ತು. ಸದ್ಯ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತಾಂತರ ವಿರೋಧಿ ಸುಗ್ರೀವಾಜ್ಞೆಗೆ ಮಂಗಳವಾರ ಒಪ್ಪಿಗೆ ನೀಡಿದ್ದಾರೆ. ಸುಗ್ರೀವಾಜ್ಞೆಯನ್ನು ಪ್ರಕಟಿಸುವ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅಂದರೆ ರಾಜ್ಯದಲ್ಲಿ ಈಗ ಕಾನೂನು ಜಾರಿಯಲ್ಲಿರುತ್ತದೆ. ಈ ಮೂಲಕ ಮತಾಂತರ ತಡೆ ಕಾನೂನನ್ನು ಜಾರಿಗೊಳಿಸಿದ 9ನೇ ರಾಜ್ಯ ಕರ್ನಾಟಕವಾಗಿದೆ. ಈ ಕಾನೂನು ವಂಚನೆ, ಅನಗತ್ಯ ಪ್ರಭಾವ, ಬಲಾತ್ಕಾರ, ಆಮಿಷ ಅಥವಾ ಮದುವೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಗೊಳ್ಳುವುದನ್ನು ನಿಷೇಧಿಸುತ್ತದೆ. ಬಲವಂತದ ಮತಾಂತರಕ್ಕೆ 25,000 ರೂ ದಂಡದೊಂದಿಗೆ 3-5 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.ಇದನ್ನೂ ಓದಿ: ಕರ್ನಾಟಕದಲ್ಲಿ ಮತಾಂತರ ನಿಷೇಧ ಮಸೂದೆಗೆ ಸಂಪುಟ ಒಪ್ಪಿಗೆ; ಅಲ್ಲಿಯವರೆಗೆ ಸುಗ್ರೀವಾಜ್ಞೆ ಜಾರಿ ಎಂದ ಆರಗ ಜ್ಞಾನೇಂದ್ರ

ಅಪ್ರಾಪ್ತೆ ಅಥವಾ ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಮತಾಂತರಿಸಿದರೆ 50,000 ರೂಪಾಯಿ ದಂಡದೊಂದಿಗೆ 3-10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಸಾಮೂಹಿಕ ಪರಿವರ್ತನೆಗೆ 3-10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಮತಾಂತರಗೊಳ್ಳಲು ಬಯಸುವ ಜನರು ಕನಿಷ್ಠ 60 ದಿನಗಳ ಮುಂಚಿತವಾಗಿ ಜಿಲ್ಲಾಧಿಕಾರಿಗಳಿಗೆ ತಿಳಿಸಬೇಕು. ಇಲ್ಲವೆ ಮತಾಂತರವಾದ 30 ದಿನಗಳೊಳಗೆ ತಿಳಿಸಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಈ ಮಸೂದೆ ಜಾರಿಗೆ ನಮ್ಮ ಸಂಪೂರ್ಣ ವಿರೋಧ ಇದೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು ನಾವು ಈಗಾಗಲೇ ಈ ಮಸೂದೆಯನ್ನ ವಿರೋಧಿಸಿದ್ದೇನೆ. ಈ ಮಸೂದೆ ಜಾರಿಗೆ ನಮ್ಮ ಸಂಪೂರ್ಣ ವಿರೋಧ ಇದೆ. ಇದರ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದರು.

Published On - 5:59 pm, Tue, 17 May 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್