AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲ ಗೆಹ್ಲೋಟ್‌ರಿಂದ ಅಂತಿಮ ಮುದ್ರೆ

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಸುಗ್ರೀವಾಜ್ಞೆಗೆ ರಾಜ್ಯಪಾಲ ಗೆಹ್ಲೋಟ್‌ರಿಂದ ಅಂತಿಮಮುದ್ರೆ ಬಿದ್ದಿದೆ.

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲ ಗೆಹ್ಲೋಟ್‌ರಿಂದ ಅಂತಿಮ ಮುದ್ರೆ
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
TV9 Web
| Edited By: ಆಯೇಷಾ ಬಾನು|

Updated on:May 17, 2022 | 6:53 PM

Share

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ(Anti-Conversion Bill) ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಸುಗ್ರೀವಾಜ್ಞೆಗೆ ರಾಜ್ಯಪಾಲ ಗೆಹ್ಲೋಟ್‌ರಿಂದ(Thawar Chand Gehlot) ಅಂತಿಮಮುದ್ರೆ ಬಿದ್ದಿದೆ. ಮತಾಂತರ ನಿಷೇಧ ಕಾಯ್ದೆಯನ್ನು ವಿಧಾನಸಭೆ ಅಂಗೀಕರಿಸಿತ್ತು. ವಿಧಾನಪರಿಷತ್‌ನಲ್ಲಿ ಅಂಗೀಕಾರ ಸಿಗದಿದ್ದಕ್ಕೆ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಿತ್ತು. ಸದ್ಯ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತಾಂತರ ವಿರೋಧಿ ಸುಗ್ರೀವಾಜ್ಞೆಗೆ ಮಂಗಳವಾರ ಒಪ್ಪಿಗೆ ನೀಡಿದ್ದಾರೆ. ಸುಗ್ರೀವಾಜ್ಞೆಯನ್ನು ಪ್ರಕಟಿಸುವ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅಂದರೆ ರಾಜ್ಯದಲ್ಲಿ ಈಗ ಕಾನೂನು ಜಾರಿಯಲ್ಲಿರುತ್ತದೆ. ಈ ಮೂಲಕ ಮತಾಂತರ ತಡೆ ಕಾನೂನನ್ನು ಜಾರಿಗೊಳಿಸಿದ 9ನೇ ರಾಜ್ಯ ಕರ್ನಾಟಕವಾಗಿದೆ. ಈ ಕಾನೂನು ವಂಚನೆ, ಅನಗತ್ಯ ಪ್ರಭಾವ, ಬಲಾತ್ಕಾರ, ಆಮಿಷ ಅಥವಾ ಮದುವೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಗೊಳ್ಳುವುದನ್ನು ನಿಷೇಧಿಸುತ್ತದೆ. ಬಲವಂತದ ಮತಾಂತರಕ್ಕೆ 25,000 ರೂ ದಂಡದೊಂದಿಗೆ 3-5 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.ಇದನ್ನೂ ಓದಿ: ಕರ್ನಾಟಕದಲ್ಲಿ ಮತಾಂತರ ನಿಷೇಧ ಮಸೂದೆಗೆ ಸಂಪುಟ ಒಪ್ಪಿಗೆ; ಅಲ್ಲಿಯವರೆಗೆ ಸುಗ್ರೀವಾಜ್ಞೆ ಜಾರಿ ಎಂದ ಆರಗ ಜ್ಞಾನೇಂದ್ರ

ಅಪ್ರಾಪ್ತೆ ಅಥವಾ ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಮತಾಂತರಿಸಿದರೆ 50,000 ರೂಪಾಯಿ ದಂಡದೊಂದಿಗೆ 3-10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಸಾಮೂಹಿಕ ಪರಿವರ್ತನೆಗೆ 3-10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಮತಾಂತರಗೊಳ್ಳಲು ಬಯಸುವ ಜನರು ಕನಿಷ್ಠ 60 ದಿನಗಳ ಮುಂಚಿತವಾಗಿ ಜಿಲ್ಲಾಧಿಕಾರಿಗಳಿಗೆ ತಿಳಿಸಬೇಕು. ಇಲ್ಲವೆ ಮತಾಂತರವಾದ 30 ದಿನಗಳೊಳಗೆ ತಿಳಿಸಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಈ ಮಸೂದೆ ಜಾರಿಗೆ ನಮ್ಮ ಸಂಪೂರ್ಣ ವಿರೋಧ ಇದೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು ನಾವು ಈಗಾಗಲೇ ಈ ಮಸೂದೆಯನ್ನ ವಿರೋಧಿಸಿದ್ದೇನೆ. ಈ ಮಸೂದೆ ಜಾರಿಗೆ ನಮ್ಮ ಸಂಪೂರ್ಣ ವಿರೋಧ ಇದೆ. ಇದರ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದರು.

Published On - 5:59 pm, Tue, 17 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು