AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thawar Chand Gehlot: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರನ್ನೇ ಬಿಟ್ಟು ಹಾರಿದ ವಿಮಾನ

ಹೈದರಾಬಾದ್‌ಗೆ ತೆರಳಬೇಕಿದ್ದ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನೇ ಬಿಟ್ಟು ವಿಮಾನ ಹಾರಿರುವ ಘಟನೆ ನಡೆದಿದೆ.

Thawar Chand Gehlot: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರನ್ನೇ ಬಿಟ್ಟು ಹಾರಿದ ವಿಮಾನ
ಥಾವರ್ ಚಂದ್ ಗೆಹ್ಲೋಟ್
TV9 Web
| Edited By: |

Updated on:Jul 28, 2023 | 9:34 AM

Share

ಬೆಂಗಳೂರು, (ಜುಲೈ 28): ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನೇ ಬಿಟ್ಟು ವಿಮಾನ ಹಾರಿದ ಘಟನೆ ನಡೆದಿದೆ. ನಿನ್ನೆ (ಜುಳಯ 28) ಬೆಂಗಳೂರಿನಿಂದ(Bengaluru) ಹೈದರಾಬಾದ್​ಗೆ (Hyderabad) ತೆರಳಬೇಕಿದ್ದ ರಾಜ್ಯಪಾಲರು,  ಸಿಬ್ಬಂದಿಯ ನಿರ್ಲಕ್ಷ್ಯದಿಂದ ವಿಮಾನವನ್ನು ಮಿಸ್ ಮಾಡಿಕೊಂಡಿದ್ದಾರೆ. ಹೌದು…ಥಾವರ್ ಚಂದ್ ಗೆಹ್ಲೋಟ್ ಅವರು ಹೈದರಾಬಾದ್​ಗೆ ತೆರಳು ಮಧ್ಯಾಹ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(Bangalore Kempegowda international airport) ಬಂದಿದ್ದರು, ಆದ್ರೆ, ಇನ್ನೂ ಏರ್‌ ಏಷ್ಯಾ ವಿಮಾನ ಹೊರಡಲು ಸಮಯ ಇದೆ ಎಂದು ಸಿಬ್ಬಂದಿ ರಾಜ್ಯಪಾರನ್ನು ಕರೆದುಕೊಂಡು ಹೋಗಿ ವಿಐಪಿ ಲಾಂಜ್​ನಲ್ಲಿ ಕೂರಿಸಿದ್ದು, ಟೈಮ್​ ಆಗಿರುವುದು ಅವರ ಗಮನಕ್ಕೆ ಬಂದಿಲ್ಲ. ಇದರಿಂದ ವಿಮಾನ ಸರಿಯಾದ ಸಮಯಕ್ಕೆ ಟೇಕಫ್​ ಆಗಿ ಹೋಗಿದೆ.

ಇದನ್ನೂ ಓದಿ: Karnataka Breaking News Live: ಚಿಕ್ಕಮಗಳೂರಲ್ಲಿ ಗುಡ್ಡ ಕುಸಿತ; ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ನಿರ್ಬಂಧ

ಬಳಿಕ ಫ್ಲೈಟ್ ಸಮಯವಾಗಿರುವುದು ಗಮನಕ್ಕೆ ಬಂದ ಕೂಡಲೇ ರಾಜ್ಯಪಾಲರು ವಿಮಾನ ಹತ್ತಲು ಹೋಗಿದ್ದಾರೆ. ಆದ್ರೆ, ಅಷ್ಟರಲ್ಲಾಗಲೇ ವಿಮಾನ ಹೋಗಿತ್ತು. ಪ್ರೋಟೋಕಾಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿಮಾನ ತಪ್ಪಿದೆ. ಬಳಿಕ ಅಧಿಕಾರಿಗಳು ಮತ್ತೊಂದು ವಿಮಾನದ ಮೂಲಕ ಅವರನ್ನು ಹೈದರಾಬಾದ್​ಗೆ ಕಳುಹಿಸಿಕೊಟ್ಟಿದ್ದಾರೆ.  ಸಿಬ್ಬಂದಿ ನಿರ್ಲಕ್ಷ್ಯತನದಿಂದ ರಾಜ್ಯಪಾಲರು ಒಂದು ಗಂಟೆ ತಡವಾಗಿ ಹೈದರಾಬಾದ್​ಗೆ ತೆರಳಬೇಕಾಯ್ತು.

ಏರ್​ಲೈನ್ಸ್​ ವಿರುದ್ಧ ದೂರು ದಾಖಲು

ಏರ್​ಪೋರ್ಟ್​​ನಲ್ಲಿ ರಾಜ್ಯಪಾಲರಿಗೆ ವಿಮಾನ ಮಿಸ್​ ಆದ ಹಿನ್ನೆಲೆ​ಯಲ್ಲಿ ಶಿಷ್ಟಾಚಾರ ಅಧಿಕಾರಿಗಳು ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್​ ಠಾಣೆಗೆ ಏರ್ ಏಷ್ಯಾ ಏರ್​​ಲೈನ್ಸ್ ದೂರು ನೀಡಿದ್ದಾರೆ.‌ ವಿಮಾನ ಮಿಸ್ ಆಗಲು ಕಾರಣ ಜೊತೆಗೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರು ಆಧರಿಸಿ ಏರ್​ಪೋರ್ಟ್​ ಪೊಲೀಸರು ಇಂದು ಎಫ್​ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವ ಸಾಧ್ಯತೆಗಳಿವೆ.

ಆಗಿದ್ದೇನು?

ಮಧ್ಯಾಹ್ನ 02 ಗಂಟೆಯ ವಿಮಾನದಲ್ಲಿ ಹೋಗಲು ನಿಲ್ದಾಣಕ್ಕೆ 1:30ಕ್ಕೆ ಆಗಮಿಸಿದ್ದರು. ಸಿಬ್ಬಂದಿ ವಿಮಾನದಲ್ಲಿ ಲಗೇಜ್ ಇಟ್ಟು ಬಂದಿದ್ದರು. ಆದ್ರೆ, ಟೈಮ್​ ಇದೆ ಎಂದು ಪ್ರೋಟೋಕಾಲ್ ಸಿಬ್ಬಂದಿ ರಾಜ್ಯಪಾಲರನ್ನು ವಿಐಪಿ ಲಾಂಜ್ ನಲ್ಲಿ ಕೂರಿಸಿದ್ದಾರೆ. ಇತ್ತ ಸಮಯವಾಗಿದ್ದರಿಂದ ವಿಮಾನ ಟೇಕಫ್ ಆಗಿ ಹೋಗಿದೆ. ಒಂದು ನಿಮಿಷ ತಡವಾಗಿ ಬಂದಿದ್ದಕ್ಕೆ ಗರ್ವನರ್​ಗೆ ವಿಮಾನ ಮಿಸ್ ಆಗಿದೆ. ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ರಾಜ್ಯಪಾಲರು ಹಾಗೂ ಹಿರಿಯ ಅಧಿಕಾರಿಗಳು ಗರಂ ಆಗಿದ್ದು, ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:15 am, Fri, 28 July 23

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!