AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thawar Chand Gehlot: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರನ್ನೇ ಬಿಟ್ಟು ಹಾರಿದ ವಿಮಾನ

ಹೈದರಾಬಾದ್‌ಗೆ ತೆರಳಬೇಕಿದ್ದ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನೇ ಬಿಟ್ಟು ವಿಮಾನ ಹಾರಿರುವ ಘಟನೆ ನಡೆದಿದೆ.

Thawar Chand Gehlot: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರನ್ನೇ ಬಿಟ್ಟು ಹಾರಿದ ವಿಮಾನ
ಥಾವರ್ ಚಂದ್ ಗೆಹ್ಲೋಟ್
TV9 Web
| Edited By: |

Updated on:Jul 28, 2023 | 9:34 AM

Share

ಬೆಂಗಳೂರು, (ಜುಲೈ 28): ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನೇ ಬಿಟ್ಟು ವಿಮಾನ ಹಾರಿದ ಘಟನೆ ನಡೆದಿದೆ. ನಿನ್ನೆ (ಜುಳಯ 28) ಬೆಂಗಳೂರಿನಿಂದ(Bengaluru) ಹೈದರಾಬಾದ್​ಗೆ (Hyderabad) ತೆರಳಬೇಕಿದ್ದ ರಾಜ್ಯಪಾಲರು,  ಸಿಬ್ಬಂದಿಯ ನಿರ್ಲಕ್ಷ್ಯದಿಂದ ವಿಮಾನವನ್ನು ಮಿಸ್ ಮಾಡಿಕೊಂಡಿದ್ದಾರೆ. ಹೌದು…ಥಾವರ್ ಚಂದ್ ಗೆಹ್ಲೋಟ್ ಅವರು ಹೈದರಾಬಾದ್​ಗೆ ತೆರಳು ಮಧ್ಯಾಹ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(Bangalore Kempegowda international airport) ಬಂದಿದ್ದರು, ಆದ್ರೆ, ಇನ್ನೂ ಏರ್‌ ಏಷ್ಯಾ ವಿಮಾನ ಹೊರಡಲು ಸಮಯ ಇದೆ ಎಂದು ಸಿಬ್ಬಂದಿ ರಾಜ್ಯಪಾರನ್ನು ಕರೆದುಕೊಂಡು ಹೋಗಿ ವಿಐಪಿ ಲಾಂಜ್​ನಲ್ಲಿ ಕೂರಿಸಿದ್ದು, ಟೈಮ್​ ಆಗಿರುವುದು ಅವರ ಗಮನಕ್ಕೆ ಬಂದಿಲ್ಲ. ಇದರಿಂದ ವಿಮಾನ ಸರಿಯಾದ ಸಮಯಕ್ಕೆ ಟೇಕಫ್​ ಆಗಿ ಹೋಗಿದೆ.

ಇದನ್ನೂ ಓದಿ: Karnataka Breaking News Live: ಚಿಕ್ಕಮಗಳೂರಲ್ಲಿ ಗುಡ್ಡ ಕುಸಿತ; ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ನಿರ್ಬಂಧ

ಬಳಿಕ ಫ್ಲೈಟ್ ಸಮಯವಾಗಿರುವುದು ಗಮನಕ್ಕೆ ಬಂದ ಕೂಡಲೇ ರಾಜ್ಯಪಾಲರು ವಿಮಾನ ಹತ್ತಲು ಹೋಗಿದ್ದಾರೆ. ಆದ್ರೆ, ಅಷ್ಟರಲ್ಲಾಗಲೇ ವಿಮಾನ ಹೋಗಿತ್ತು. ಪ್ರೋಟೋಕಾಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿಮಾನ ತಪ್ಪಿದೆ. ಬಳಿಕ ಅಧಿಕಾರಿಗಳು ಮತ್ತೊಂದು ವಿಮಾನದ ಮೂಲಕ ಅವರನ್ನು ಹೈದರಾಬಾದ್​ಗೆ ಕಳುಹಿಸಿಕೊಟ್ಟಿದ್ದಾರೆ.  ಸಿಬ್ಬಂದಿ ನಿರ್ಲಕ್ಷ್ಯತನದಿಂದ ರಾಜ್ಯಪಾಲರು ಒಂದು ಗಂಟೆ ತಡವಾಗಿ ಹೈದರಾಬಾದ್​ಗೆ ತೆರಳಬೇಕಾಯ್ತು.

ಏರ್​ಲೈನ್ಸ್​ ವಿರುದ್ಧ ದೂರು ದಾಖಲು

ಏರ್​ಪೋರ್ಟ್​​ನಲ್ಲಿ ರಾಜ್ಯಪಾಲರಿಗೆ ವಿಮಾನ ಮಿಸ್​ ಆದ ಹಿನ್ನೆಲೆ​ಯಲ್ಲಿ ಶಿಷ್ಟಾಚಾರ ಅಧಿಕಾರಿಗಳು ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್​ ಠಾಣೆಗೆ ಏರ್ ಏಷ್ಯಾ ಏರ್​​ಲೈನ್ಸ್ ದೂರು ನೀಡಿದ್ದಾರೆ.‌ ವಿಮಾನ ಮಿಸ್ ಆಗಲು ಕಾರಣ ಜೊತೆಗೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರು ಆಧರಿಸಿ ಏರ್​ಪೋರ್ಟ್​ ಪೊಲೀಸರು ಇಂದು ಎಫ್​ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವ ಸಾಧ್ಯತೆಗಳಿವೆ.

ಆಗಿದ್ದೇನು?

ಮಧ್ಯಾಹ್ನ 02 ಗಂಟೆಯ ವಿಮಾನದಲ್ಲಿ ಹೋಗಲು ನಿಲ್ದಾಣಕ್ಕೆ 1:30ಕ್ಕೆ ಆಗಮಿಸಿದ್ದರು. ಸಿಬ್ಬಂದಿ ವಿಮಾನದಲ್ಲಿ ಲಗೇಜ್ ಇಟ್ಟು ಬಂದಿದ್ದರು. ಆದ್ರೆ, ಟೈಮ್​ ಇದೆ ಎಂದು ಪ್ರೋಟೋಕಾಲ್ ಸಿಬ್ಬಂದಿ ರಾಜ್ಯಪಾಲರನ್ನು ವಿಐಪಿ ಲಾಂಜ್ ನಲ್ಲಿ ಕೂರಿಸಿದ್ದಾರೆ. ಇತ್ತ ಸಮಯವಾಗಿದ್ದರಿಂದ ವಿಮಾನ ಟೇಕಫ್ ಆಗಿ ಹೋಗಿದೆ. ಒಂದು ನಿಮಿಷ ತಡವಾಗಿ ಬಂದಿದ್ದಕ್ಕೆ ಗರ್ವನರ್​ಗೆ ವಿಮಾನ ಮಿಸ್ ಆಗಿದೆ. ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ರಾಜ್ಯಪಾಲರು ಹಾಗೂ ಹಿರಿಯ ಅಧಿಕಾರಿಗಳು ಗರಂ ಆಗಿದ್ದು, ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:15 am, Fri, 28 July 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ