AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಾದರಿಯಲ್ಲೇ ಡೆಂಗ್ಯೂ ನಿಯಂತ್ರಣ; ಒಂದೇ ಪ್ರದೇಶದಲ್ಲಿ 2ಕ್ಕೂ ಹೆಚ್ಚು ಪತ್ತೆಯಾದರೆ ಹಾಟ್‌ಸ್ಪಾಟ್‌

ಕರ್ನಾಟಕದಾದ್ಯಂತ ಆತಂಕ ಸೃಷ್ಟಿಸಿರುವ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ. ಇದರಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಕೊರೊನಾ ಮಾದರಿಯಲ್ಲೇ ಡೆಂಘೀ ವಿರುದ್ಧ ಹೋರಾಟಕ್ಕೆ ಸಜ್ಜಾಗಿದೆ. ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳೇನು? ಸಾರ್ವಜನಿಕರ ಮೇಲೆ ಅದು ಹೇಗೆ ಪರಿಣಾಮ ಬೀರಲಿದೆ? ವಿವರ ಇಲ್ಲಿದೆ.

ಕೊರೊನಾ ಮಾದರಿಯಲ್ಲೇ ಡೆಂಗ್ಯೂ ನಿಯಂತ್ರಣ; ಒಂದೇ ಪ್ರದೇಶದಲ್ಲಿ 2ಕ್ಕೂ ಹೆಚ್ಚು ಪತ್ತೆಯಾದರೆ ಹಾಟ್‌ಸ್ಪಾಟ್‌
ಕೊರೊನಾ ಮಾದರಿಯಲ್ಲೇ ಡೆಂಗ್ಯೂ ನಿಯಂತ್ರಣ; ಒಂದೇ ಪ್ರದೇಶದಲ್ಲಿ 2ಕ್ಕೂ ಹೆಚ್ಚು ಪತ್ತೆಯಾದರೆ ಹಾಟ್‌ಸ್ಪಾಟ್‌
Poornima Agali Nagaraj
| Updated By: Ganapathi Sharma|

Updated on: Jul 16, 2024 | 6:51 AM

Share

ಬೆಂಗಳೂರು, ಜುಲೈ 16: ಮಳೆಗಾಲ ಶುರುವಾಗಿ ಬರದಿಂದ ಮುಕ್ತಿ ಸಿಕ್ಕಿತು ಎಂದು ನಿಟ್ಟುಸಿರು ಬಿಡುವ ಹೊತ್ತಿಗೆ ರಾಜ್ಯಕ್ಕೆ ಡೆಂಘೀ ದಿಗಿಲು ಜೋರಾಗಿದೆ. ಜಿಲ್ಲೆ ಜಿಲ್ಲೆಯಲ್ಲೂ ಇನ್ನಿಲ್ಲದಂತೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಕರ್ನಾಟಕದಲ್ಲಿ ಡೆಂಘೀ ಕೇಸ್​ಗಳ ಸಂಖ್ಯೆ 10 ಸಾವಿರ ಗಡಿದಾಟಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಸೋಂಕು ಜನರ ಜೀವ ಹಿಂಡುತ್ತಿದೆ. ಈ ವರ್ಷ ಬರೋಬ್ಬರಿ 68 ಸಾವಿರ ಶಂಕಿತ ಡೆಂಘೀ ಪ್ರಕರಣಗಳು ದಾಖಲಾಗಿವೆ ಅಂತ ಖುದ್ದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಪರಿಷತ್‌ಗೆ ಮಾಹಿತಿ ನೀಡಿದ್ದಾರೆ.

ಡೆಂಘೀ ತಡೆಗೆ ‘ಕೊರೊನಾ’ ಮಾದರಿ ಕ್ರಮ

ಕೊರೊನಾ ಸೋಂಕಿನಂತೆಯೇ ಡೆಂಘೀ ಜ್ವರವನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ವಿಶೇಷ ಟಾಸ್ಕ್‌ ಫೋರ್ಸ್ ಆರೋಗ್ಯ ಇಲಾಖೆ ರಚಿಸಿದೆ. ಒಂದೇ ಏರಿಯಾದಲ್ಲಿ ಎರಡ್ಮೂರು ಕೇಸ್‌ಗಳು ಪತ್ತೆಯಾದ್ರೆ ಹಾಟ್‌ಸ್ಪಾಟ್‌ ಎಂದು ಗುರುತಿಸುವುದಾಗಿ ಹೇಳಿದೆ. ರಾಜ್ಯದ ಹಲವೆಡೆ ಫೀವರ್‌ ಕ್ಲಿನಿಕ್‌ಗಳನ್ನೂ ಸಹ ಸರ್ಕಾರ ತೆರೆದಿದೆ.

ರಾಜ್ಯ ಸರ್ಕಾರ ಹೀಗೆ ಸಮರೋಪಾದಿಯಲ್ಲಿ ಸಿದ್ಧತೆ ನಡೆಸ್ತಿದ್ದು, ಸೆಪ್ಟೆಂಬರ್​ವರೆಗೆ ಎಚ್ಚರಿಕೆಯಿಂದ ಇರಬೇಕು ಎಂದು ಸಾರ್ವಜನಿಕರಿಗೂ ಸಲಹೆ ನೀಡಿದೆ.

ಬೆಂಗಳೂರಿನಲ್ಲಿ ಒಂದೇ ದಿನ 363 ಡೆಂಗ್ಯೂ ಕೇಸ್

ಡೆಂಘೀ ಇಡೀ ಬೆಂಗಳೂರನ್ನೇ ಆವರಿಸಿದೆ. ಯಾವ ಆಸ್ಪತ್ರೆ ನೋಡಿದರೂ ರೋಗಿಗಳೇ ತುಂಬಿದ್ದಾರೆ. ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 435 ಡೆಂಘೀ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಬೆಂಗಳೂರು ಒಂದರಲ್ಲೇ 363 ಡೆಂಘೀ ಪ್ರಕರಣಗಳು ವರದಿಯಾಗಿವೆ. ಒಟ್ಟು ಕೇಸ್​ಗಳ ಸಂಖ್ಯೆ 3487ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಇಲಿ ಜ್ವರವನ್ನು ಕಡೆಗಣಿಸಬೇಡಿ, ತಡೆಗಟ್ಟುವ ಕ್ರಮದ ಬಗ್ಗೆ ತಜ್ಞರ ಸಲಹೆ ಏನು?

ಹಾಸನದಲ್ಲಿ ಬಾಲಕ ಬಲಿ

ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ. ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದ 9 ವರ್ಷದ ಬಾಲಕ ರಾಜೇಶ್‌ ಮೃತಪಟ್ಟಿದ್ದಾನೆ. ಜಿಲ್ಲೆಯಲ್ಲಿ ಈವರೆಗೆ ಶಂಕಿತ ಡೆಂಘೀಗೆ 6 ಮಕ್ಕಳು ಬಲಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್