AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ: ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ತೀರ್ಮಾನ

2021ರಲ್ಲಿ ಜಾರಿಗೆ ತಂದ ರಾಜ್ಯ ನಾಗರಿಕ ಸೇವಾ ತಿದ್ದುಪಡಿ ನಿಯಮ 16 (ಎ) ದಿಂದ ಸಂಕಷ್ಟಕ್ಕೆ ಸಿಲುಕಿದ್ದ ಪೊಲೀಸ್​ ಇಲಾಖೆ ಸಿಬ್ಬಂದಿಗೆ ಇದೀಗ ಸುಹಿ ಸುದ್ದಿ ಸಿಕ್ಕಿದೆ.

ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ: ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ತೀರ್ಮಾನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 22, 2022 | 8:07 PM

ಬೆಳಗಾವಿ: ಕರ್ನಾಟಕ ಪೊಲೀಸ್ ಇಲಾಖೆ (police Department) ಸಿಬ್ಬಂದಿಗೆ ನಿರ್ಬಂಧಿತವಾಗಿದ್ದ ಅಂತರ್ ಜಿಲ್ಲಾ ವರ್ಗಾವಣೆಗೆ(inter district transfer) ಇದೀಗ ಅವಕಾಶ ನೀಡಲಾಗಿದೆ. ಇಂದು(ಡಿಸೆಂಬರ್ 22) ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.ಆದ್ರೆ, ಕೆಲ ಷರತ್ತುಗಳೊಂದಿಗೆ ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ, ಇನ್ಮುಂದೆ ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆ ಪ್ರಕ್ರಿಯೆ ಸರಳೀಕರಣ

ಪೊಲೀಸ್ ಇಲಾಖೆಗೆ ನೇಮಕವಾಗಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಿರಬೇಕು. ಹಾಗೂ ಮಾಜಿ ಯೋಧರು ಸಹ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಆಗಬಹುದು. ಯಾವುದೇ ಒಂದು ಜಿಲ್ಲೆಯಲ್ಲಿ, ನೇಮಕಾತಿ ಹೊಂದಿದ ಹಾಗೂ ಅದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾವುದೇ ಸಿಬ್ಬಂದಿ, ಇತರೆ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಹೊಂದಿರುತ್ತಾರೆ.

ಪೊಲೀಸ್ ಇಲಾಖೆಗೆ ನೇಮಕವಾದ ಹಾಗೂ ಕನಿಷ್ಠ ಮೂರು ವರ್ಷಗಳ ಸೇವೆ ಸಲ್ಲಿಸಿದ ಮಾಜಿ ಯೋಧರು ಸಹ ಬೇರೆ ಜಿಲ್ಲೆಗೆ ವರ್ಗಾವಣೆ ಕೋರಲೂ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ.

ಮುಂಚೆ ಅವಕಾಶವಿತ್ತು

ರಾಜ್ಯ ನಾಗರಿಕ ಸೇವಾ ನಿಯಮ 16(ಎ) ಅನ್ವಯ ಈ ಹಿಂದೆ ಸೇವಾ ಜ್ಯೇಷ್ಠತೆ ಬಿಟ್ಟುಕೊಟ್ಟು ಬೇರೆ ಪೊಲೀಸ್‌ ವಲಯ, ಜಿಲ್ಲೆಗಳಿಗೆ ವರ್ಗಾವಣೆಯಾಗುವ ಅವಕಾಶವಿತ್ತು. ಪತಿ/ಪತ್ನಿ ಇಬ್ಬರು ಸರಕಾರಿ ನೌಕರರಾಗಿದ್ದರೆ, ಇಬ್ಬರೂ ಒಂದೇ ಜಿಲ್ಲೆಗೆ ವರ್ಗಾವಣೆ ಪಡೆಯಬಹುದಿತ್ತು. ಆದರೆ, 2021ರಲ್ಲಿ ಜಾರಿಗೆ ತಂದ ರಾಜ್ಯ ನಾಗರಿಕ ಸೇವಾ ತಿದ್ದುಪಡಿ ನಿಯಮ 16 (ಎ) ಅಂತರ್ ವಲಯ ವರ್ಗಾವಣೆಗೆ ಅವಕಾಶ ಇರಲಿಲ್ಲ. ಇದರಿಂದ ಪಿಎಸ್‌ಐ, ಎಎಸ್‌ಐ, ಪೊಲೀಸ್‌ ಕಾನ್ಸ್‌ಟೆಬಲ್‌ಗಳು ಹಾಗೂ ಇಲಾಖೆಯ ಗ್ರೂಪ್‌ (ಸಿ) (ಡಿ)ವೃಂದ ಸಂಕಷ್ಟಕ್ಕೆ ಸಿಲುಕಿದ್ದರು. ಅಲ್ಲದೇ ದಂಪತಿ ‘ಕೌಟುಂಬಿಕ’ ಜೀವನಕ್ಕೆ ವಿಘ್ನ ಉಂಟಾಗಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:04 pm, Thu, 22 December 22

ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!